1.40 ಲಕ್ಷ  ಜನರ ಕೈ ಹಿಡಿದ ನರೇಗಾ


Team Udayavani, Jun 4, 2021, 7:00 AM IST

1.40 ಲಕ್ಷ  ಜನರ ಕೈಹಿಡಿದ ನರೇಗಾ

ಬೆಂಗಳೂರು: ಕೋವಿಡ್  ಸಂಕಷ್ಟ ಲಕ್ಷಾಂತರ ನಗರವಾಸಿಗಳನ್ನು ಸಂಕಷ್ಟಕ್ಕೆ ತಳ್ಳಿದ್ದು, ಬಹಳಷ್ಟು ಮಂದಿ ನೆಲೆ ಕಂಡುಕೊಳ್ಳಲು ಹಳ್ಳಿ ಸೇರಿದ್ದಾರೆ. ವಿಶೇಷವೆಂದರೆ ಕಷ್ಟಕಾಲದಲ್ಲಿ ಅವರ ಕೈಹಿಡಿದಿರುವುದು ನರೇಗಾ.

ಮೊದಲ ಮತ್ತು ಎರಡನೇ ಅಲೆ ಸೇರಿ ಒಟ್ಟು 4.10 ಲಕ್ಷ ಮಂದಿ ಹಳ್ಳಿಗಳಿಗೆ ವಾಪಸಾಗಿದ್ದು ಅವರಲ್ಲಿ 1.40 ಲಕ್ಷ ಜನರಿಗೆ ನರೇಗಾ ಉದ್ಯೋಗ “ಖಾತರಿ’ ನೀಡಿದೆ.

ಕಳೆದ ವರ್ಷ ಕೊರೊನಾದಿಂದಾಗಿ ಊರಿಗೆ ಹೋಗಿದ್ದರೂ ಮರಳಿ ನಗರಕ್ಕೆ ಬಂದು ಎರಡನೇ ಅಲೆಯ ಆತಂಕದಿಂದಾಗಿ ಮತ್ತೆ ಹಳ್ಳಿ ಸೇರಿದ 1.15 ಲಕ್ಷ ಜನರು ಗ್ರಾಮಕ್ಕೆ ಹೋದ ದಿನವೇ ಉದ್ಯೋಗ “ಖಾತರಿ’ಪಡಿಸಿಕೊಂಡಿದ್ದಾರೆ. ಅವರೆಲ್ಲ ಕಳೆದ ವರ್ಷವೇ ಜಾಬ್‌ ಕಾರ್ಡ್‌ ಪಡೆದಿದ್ದರಿಂದ ಕೆಲಸ ಸುಲಭವಾಗಿ ಸಿಕ್ಕಿದೆ. ಈ ವರ್ಷ ಮತ್ತೆ 25 ಸಾವಿರ ಮಂದಿ ಜಾಬ್‌ ಕಾರ್ಡ್‌ ಪಡೆದಿದ್ದು, ಒಟ್ಟು 1.40 ಲಕ್ಷ ಮಂದಿ ನರೇಗಾದಿಂದ ಕೆಲಸ ಪಡೆದಂತಾಗಿದೆ.

2 ಲಕ್ಷ ಮಂದಿ ಕೃಷಿ ಚಟುವಟಿಕೆ :

ಹಳ್ಳಿಗಳಿಗೆ ಹೋಗಿ ಪಂಚಾಯತ್‌ನಲ್ಲಿ ಹೆಸರು ನೋಂದಾಯಿಸಿದ 4.10 ಲಕ್ಷ ಜನರ ಪೈಕಿ 2 ಲಕ್ಷ ಮಂದಿ ಸ್ವಂತ ಜಮೀನು ಅಥವಾ ಜಮೀನು ಗುತ್ತಿಗೆಗೆ ಪಡೆದು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಮೂಲಗಳು ತಿಳಿಸಿವೆ.

ನಗರ ತೊರೆದವರೆಷ್ಟು? :

ರಾಜ್ಯದ 6 ಸಾವಿರ ಪಂಚಾಯತ್‌ಗಳ ವ್ಯಾಪ್ತಿಯ ಗ್ರಾಮಗಳಿಗೆ ಕಳೆದ ವರ್ಷ 3,27,736 ಜನರು ನಗರಗಳಿಂದ ಮರಳಿದ್ದರು. ಈ ವರ್ಷ, ಕಳೆದ ವರ್ಷ ಹೋದವರು ಸೇರಿ ಹೊಸದಾಗಿ 81,669 ಮಂದಿ ಹಳ್ಳಿಗಳಿಗೆ ಮರಳಿದ್ದಾರೆ. ಪಂಚಾಯತ್‌ಗಳಿಂದ ನೆರವು ಬಯಸಿ 2,13,312 ಮಂದಿ ಬೇಡಿಕೆ ಸಲ್ಲಿಸಿ 1,30,900 ಮಂದಿ ನರೇಗಾ ಜಾಬ್‌ ಕಾರ್ಡ್‌ ಪಡೆದಿದ್ದಾರೆ. ಉಳಿದವರು ಕೃಷಿ ಹಾಗೂ ಪಶು ಸಂಗೋಪನೆ ಘಟಕ ನಿರ್ಮಾಣಕ್ಕೆ ನೆರವು ಪಡೆದುಕೊಂಡಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೆಚ್ಚಿನ ಮಾನವ ದಿನ ಸೃಜನೆ ಮಾಡಲಾಗಿದ್ದು, ಯಾರೇ ಕೇಳಿದರೂ ತತ್‌ಕ್ಷಣ ಕೆಲಸ ಕೊಟ್ಟು ಅನಂತರ ಉಳಿದ ಪ್ರಕ್ರಿಯೆ ಮಾಡಬೇಕು ಎಂಬ ಸೂಚನೆ ಸಹ ನೀಡಲಾಗಿದೆ.

ಕಳೆದ ವರ್ಷ 1,15,300 ಮತ್ತು ಈ ವರ್ಷ 25,287 ಮಂದಿ ಹೊಸದಾಗಿ ಜಾಬ್‌ ಕಾರ್ಡ್‌ ಪಡೆದಿದ್ದಾರೆ. ಒಮ್ಮೆ ಕಾರ್ಡ್‌ ಪಡೆದರೆ ಬಯಸಿದಾಗ ಉದ್ಯೋಗ ಪಡೆಯಬಹುದು. ಪ್ರತಿಯೊಬ್ಬರಿಗೂ 100 ದಿನ ಕೆಲಸ ನೀಡಲಾಗುತ್ತಿದೆ.ಅನಿರುದ್ಧ್  ಶ್ರವಣ್‌, ಗ್ರಾಮೀಣಾಭಿವೃದ್ಧಿ ಆಯುಕ್ತರು (ನರೇಗಾ)

 

ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.