ಅನುಷಾ, ರಕ್ಷಿತಾ ಆವಿಷ್ಕಾರಕ್ಕೆ ರಾಷ್ಟ್ರ ಪ್ರಶಸ್ತಿಯ ಗರಿ
Team Udayavani, Aug 15, 2021, 8:00 AM IST
ಕುಂದಾಪುರ: ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನಡೆಸುವ ರಾಷ್ಟ್ರ ಮಟ್ಟದ ಶಾಲಾ ಮಕ್ಕಳ “ಸಿಎಸ್ಐಆರ್ ಇನೋವೇಶನ್ ಅವಾರ್ಡ್’ಗೆ ಅಲ್ಬಾಡಿ – ಆರ್ಡಿಯ ಚಾರಮಕ್ಕಿ ನಾರಾ ಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಅನುಷಾ ಮತ್ತು ರಕ್ಷಿತಾ ನಾಯ್ಕ ಅವರ ಆವಿ ಷ್ಕಾರವಾದ ಗ್ಯಾಸ್ ಸೇವಿಂಗ್ ಕಿಟ್ (ಜಿಎಸ್ಕೆ) ಆಯ್ಕೆಯಾಗಿದೆ. ಇವರಿಬ್ಬರೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
“ಜಿಎಸ್ಕೆ’ ತಯಾರಿಗೆ 600 ರೂ. ತಗಲಿದೆ. ಅದನ್ನು ಗ್ಯಾಸ್ ಸ್ಟವ್ಗೆ ಅಳವಡಿಸಿದರೆ ಆಹಾರ ಪದಾರ್ಥಗಳು ಬೇಯುತ್ತಿರುವಾಗಲೇ ನಾಲ್ವರು ಸದಸ್ಯರ ಕುಟುಂಬಕ್ಕೆ ಬೇಕಾಗುವಷ್ಟು ಸ್ನಾನದ ಬಿಸಿ ನೀರು ಸಿದ್ಧವಾಗುತ್ತದೆ. ಎಲ್ಲರೂ ಇದನ್ನು ಅಳವಡಿಸಿಕೊಂಡರೆ ದಿನವೊಂದಕ್ಕೆ ಲಕ್ಷಗಟ್ಟಲೆ ಟನ್ ಎಲ್ಪಿಜಿ ಉಳಿತಾಯವಾಗುತ್ತದೆ ಎನ್ನುವುದು ಈ ವಿದ್ಯಾರ್ಥಿನಿಯರ ದೂರದೃಷ್ಟಿ. ಉಪಕರಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಪೇಟೆಂಟ್ ಪಡೆಯುವತ್ತ ದೃಷ್ಟಿ ನೆಟ್ಟಿದ್ದಾರೆ.
ಎರಡನೇ ಗೌರವ :
ಈ ಶಾಲೆಯು ಎರಡನೇ ಬಾರಿಗೆರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಪ್ರಧಾನಿ ಮೋದಿಯವರ “ಪರೀಕ್ಷಾ ಪೇ ಚರ್ಚಾ’ಕ್ಕಾಗಿ ನಿರ್ಮಿಸಿದ್ದ ಪ್ರೋಮೋ ವೀಡಿಯೋ ರಾಷ್ಟ್ರಾದ್ಯಂತ ಪ್ರಸಾರವಾಗಿ ಪ್ರಶಂಸೆಗೆ ಪಾತ್ರವಾಗಿದ್ದಲ್ಲದೆ, ಪ್ರಧಾನಿ ಜತೆ ಸಂವಾದ ಕಾರ್ಯಕ್ರಮಕ್ಕೆ ಅನುಷಾ ಆಯ್ಕೆಯಾಗಿದ್ದರು.
ಅವಿರತ ಪರಿಶ್ರಮ :
ವಿಜ್ಞಾನ ಶಿಕ್ಷಕಿ ವೈಶಾಲಿ ರಾವ್ ಮಾರ್ಗದರ್ಶನ, ಮುಖ್ಯಶಿಕ್ಷಕ ಶೇಖರ್ ಶೆಟ್ಟಿಗಾರ್ ನೇತೃತ್ವದಲ್ಲಿ ನಡೆದ ಆವಿಷ್ಕಾರಕ್ಕೆ ಶಿಕ್ಷಕರಾದ ಶ್ರೀಕಾಂತ್ ನಾಯಕ್, ಪ್ರೇಮನಾಥ್ ತೋಳಾರ್, ಉದಯ್ ಶೆಟ್ಟಿ, ರಮೇಶ್, ಮಾಲತಿ, ಮಾಲಿನಿ ಕೆ.ಆರ್., ಸುಮಲತಾ, ಬೋಧಕೇತರ ಸಿಬಂದಿ ಜ್ಯೋತ್ಸ್ನಾ ಮತ್ತು ಶಿಕ್ಷಕ ಸುರೇಶ್ ಮರಕಾಲ ಮಾರ್ಗದರ್ಶನ ನೀಡಿದ್ದರು.
ಪ್ರಧಾನಿಯಿಂದ ಪ್ರಶಸ್ತಿ ಹಸ್ತಾಂತರ ದಿಲ್ಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ದೇಶದ 14 ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೆ. 26ರಂದು ಕಾರ್ಯಕ್ರಮ ನಿಗದಿಯಾಗಿದ್ದು, ಕೋವಿಡ್ ಕಾರಣದಿಂದ
ಯಾವ ವಿಧಾನದಲ್ಲಿ ನಡೆಯಲಿದೆ ಎಂಬುದನ್ನು ಮುಂದೆ ತಿಳಿಸಲಾಗುವುದು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವಾಲಯ ಹೇಳಿದೆ.
ವ್ಯಾಪಕ ಪ್ರಶಂಸೆ : ವಿದ್ಯಾರ್ಥಿನಿಯರ ಸಾಧನೆಯನ್ನು ಜನಪ್ರತಿನಿಧಿಗಳು, ಇಲಾಖೆಯ ಉನ್ನತ ಅಧಿಕಾರಿಗಳು ಪ್ರಶಂಸಿಸಿದ್ದಾರೆ. ದಿಲ್ಲಿಯ ಎಂಎಚ್ಆರ್ಡಿ ನಿರ್ದೇಶಕರು, ರಾಜ್ಯ ಶಿಕ್ಷಣ ಇಲಾಖೆಯ ಪ್ರ. ಕಾರ್ಯದರ್ಶಿ, ಡಿಡಿಪಿಐ, ಡಯಟ್ ಪ್ರಾಂಶುಪಾಲರು, ಕುಂದಾಪುರ ಬಿಇಒ, ಎಸ್ಡಿಎಂಸಿ, ಹಳೆ ವಿದ್ಯಾರ್ಥಿ ಸಂಘ, ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ವಿದ್ಯಾಭಿಮಾನಿಗಳು ಅಭಿ ನಂದಿಸಿದ್ದಾರೆ.
ದೇಶದ ಏಕೈಕ ಸರಕಾರಿ ಶಾಲೆ! :
ರಾಷ್ಟ್ರ ಮಟ್ಟದಲ್ಲಿ ಈ ಸ್ಪರ್ಧೆಯ ಅಂತಿಮ ಹಂತಕ್ಕೆ ಆಯ್ಕೆಯಾದ 14 ಶಾಲೆಗಳಲ್ಲಿ ಅಲಾºಡಿ – ಆರ್ಡಿ ಸರಕಾರಿ ಪ್ರೌಢಶಾಲೆ ಒಂದು. ಈ ಪ್ರಶಸ್ತಿಗೆ ಆಯ್ಕೆಯಾದ ದೇಶದ ಏಕೈಕ ಸರಕಾರಿ ಪ್ರೌಢಶಾಲೆ, ಕರ್ನಾಟಕದ ಒಂದೇ ಪ್ರೌಢಶಾಲೆ ಎಂಬುದು ಹೆಮ್ಮೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ