ರಾಷ್ಟ್ರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ : ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ


Team Udayavani, Sep 8, 2021, 6:40 PM IST

National Education Policy for nation building: Minister Dr. C M Ashwath Narayana

ಬೆಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಬಿಡುವಿಲ್ಲದ ಕಾರ್ಯಕ್ರಮ, ವಿಚಾರ ಸಂಕಿರಣ, ಚರ್ಚೆ, ಸಂವಾದದಲ್ಲಿ ಪಾಲ್ಗೊಳ್ಳುತ್ತಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಬೆಂಗಳೂರಿನಲ್ಲಿ ಎರಡು ಪ್ರಮುಖ ಸಭೆಗಳಲ್ಲಿ ಪಾಲ್ಗೊಂಡು ಶಿಕ್ಷಣ ನೀತಿ ಜಾರಿ ಬಗ್ಗೆ ಚರ್ಚಿಸಿದರು.

ನಗರದ ಟಿ.ಜಾನ್ ಕಾಲೇಜು ಹಾಗೂ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಚಿವರು, ಮುಖ್ಯವಾಗಿ ಶಿಕ್ಷಣ ತಜ್ಞರು, ಅಧ್ಯಾಪಕರು, ವಿದ್ಯಾರ್ಥಿಗಳ ಜತೆ ಸಂವಾದ, ಚರ್ಚೆ ನಡೆಸಿದರು.

ಶಿಕ್ಷಣ ನೀತಿ ಏತಕ್ಕೆ? ಇದರ ಪರಿಣಾಮಗಳೇನು? ದೇಶಕ್ಕೆ ಇದರ ಉಪಯೋಗ ಹೇಗೆ? ಇತ್ಯಾದಿ ಅಂಶಗಳ ಬಗ್ಗೆ ವಿವರಣಾತ್ಮಕವಾಗಿ ಮಾತನಾಡಿದರಲ್ಲದೆ, ನೀತಿಯ ಬಗ್ಗೆ ಇದ್ದ ಅನುಮಾನ, ಸಂಶಯಗಳನ್ನು ತೊಡೆದು ಹಾಕುವ ಪ್ರಯತ್ನ ಮಾಡಿದರು.

ಇದನ್ನೂ ಓದಿ : ಲಾಕ್‌ಡೌನ್‌; ಚಿತ್ರಮಂದಿರಗಳು ಲಾಕ್‌ ಔಟ್‌; ಸಾಲದ ಸುಳಿಯಲ್ಲಿ ಟಾಕೀಸ್‌ ಮಾಲೀಕರು

ಯಾರ ವಿರುದ್ಧವೂ ಅಲ್ಲ, ಯಾವ ಸಂಶಯಕ್ಕೂ ಎಡೆಮಾಡಿ ಕೊಡದ, ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತವಾದದ್ದೇ ನೂತನ ಶಿಕ್ಷಣ ನೀತಿ. ಇಂಥ ನೀತಿಯ ಬಗ್ಗೆ ಇಲ್ಲಸಲ್ಲದ್ದನ್ನು ಮಾತನಾಡಿ ಯಾರೂ ಹಳಿತಪ್ಪಿಸಬಾರದು. ʼಇದು ರಾಷ್ಟ್ರ ನಿರ್ಮಾಣಕ್ಕಾಗಿ ರೂಪಿತವಾದ ರಾಷ್ಟ್ರೀಯ ಶಿಕ್ಷಣ ನೀತಿʼ ಎಂದು ಸಚಿವರು ಮನವಿ ಮಾಡಿದರು.

ಅಭಿವೃದ್ಧಿಯ ದಿಕ್ಸೂಚಿ:

ನಗರದ ಟಿ.ಜಾನ್ ಕಾಲೇಜ್ʼನಲ್ಲಿಂದು ಹಮಿಕೊಳ್ಳಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ತಜ್ಞರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, “ರಾಷ್ಟ್ರೀಯ ಶಿಕ್ಷಣ ನೀತಿಯು ಕರ್ನಾಟಕವಷ್ಟೇ ಅಲ್ಲ, ಇಡೀ ದೇಶದ ಸಮಗ್ರ ಅಭಿವೃದ್ಧಿಗೆ ಸ್ಪಷ್ಟ ದಿಕ್ಸೂಚಿ ಆಗಿದೆ” ಎಂದು ಪ್ರತಿಪಾದಿಸಿದರು.

ಹೊಸ ಶಿಕ್ಷಣ ನೀತಿ ಭಾರತದ ಮುನ್ನಡೆಯ ದಿಕ್ಸೂಚಿ. ಶಿಕ್ಷಣ ನೀತಿಯ ಭವಿಷ್ಯದ ಭಾರತದ ಅಡಿಪಾಯ. ಹೀಗಾಗಿ ಶಿಕ್ಷಣ ನೀತಿ ಜಾರಿಯ ಪ್ರಕ್ರಿಯೆ ರಾಜ್ಯ ಸರಕಾರ ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಂಡಿದೆ ಎಂದು ಅವರು ನುಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ರಾಷ್ಟ್ರೀಯ ಅಗತ್ಯ, ನಮ್ಮ ರಾಜ್ಯದ ಅಗತ್ಯ ಮತ್ತು ಸಮಾಜದ ಅಗತ್ಯ ಎಂಬುದರಲ್ಲಿ ಎರಡು ಮಾತೇ ಇಲ್ಲ. ಭಾರತ ಈಗ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಹಾಗಾದರೆ, ಅಭಿವೃದ್ಧಿ ಹೊಂದಿದ ದೇಶ ಆಗುವುದು ಯಾವಾಗ? ಅದಕ್ಕೆ ಉತ್ತರ ಈ ಶಿಕ್ಷಣ ನೀತಿಯಲ್ಲಿದೆ” ಎಂದು ಸಚಿವರು ಹೇಳಿದರು.

ಉತ್ಪಾದನೆ, ಕೈಗಾರಿಕೆ, ಕೃಷಿ, ತಂತ್ರಜ್ಞಾನ, ಆವಿಷ್ಕಾರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಕರ್ನಾಟಕ ಬಹುದೊಡ್ಡ ಬದಲಾವಣೆ ಕಾಣುತ್ತಿದೆ. ಒಮ್ಮೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದರೆ, ಇದರ ವೇಗ ಮತ್ತಷ್ಟು ಹೆಚ್ಚಿ ಆಮೂಲಾಗ್ರ ಬದಲಾವಣೆ, ಅಭಿವೃದ್ಧಿಗೆ ಬೃಹತ್ ಬದಲಾವಣೆ ಕಂಡು ಬರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ವೃತ್ತಿಪರ ಮತ್ತು ಕೌಶಲ್ಯಪರ ಶಿಕ್ಷಣ ನೀತಿ

ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಏರ್ಪಡಿಸಿದ್ದ ಎನ್ಇಪಿ ಜಾರಿ ಕಾರ್ಯಾಗಾರದಲ್ಲಿ ಮಾತನಾಡಿದ ಡಾ.ಅಶ್ವತ್ಥನಾರಾಯಣ ಅವರು; ಎಲ್ಲ ಕ್ಷೇತ್ರಗಳಲ್ಲೂ ಈಗ ವೃತ್ತಿಪರತೆ ಇರುವ ಕುಶಲ ಮಾನವ ಸಂಪನ್ಮೂಲದ ಅಗತ್ಯವಿದೆ. ಈ ಬೇಡಿಕೆಗೆ ತಕ್ಕಂತೆ ಹೊಸ ಶಿಕ್ಷಣ ನೀತಿ ಅಪಾರ ಕೊಡುಗೆ ನೀಡಲಿದೆ ಎಂದರು.

ಶಿಕ್ಷಣ ನೀತಿ ಜಾರಿ ಪ್ರಕ್ರಿಯೆಯಲ್ಲಿ ಶಿಕ್ಷಕರು, ಅಧ್ಯಾಪಕರ ಪಾತ್ರ ಬಹಳ ದೊಡ್ಡದು. ಎಲ್ಲಿಯೂ ನೀತಿ ಉದ್ದೇಶಕ್ಕೆ ಭಂಗ ಬಾರದಂತೆ ಅದನ್ನು ಅನುಷ್ಠಾನಕ್ಕೆ ತರುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಇಡೀ ನೀತಿಯನ್ನು ಎಲ್ಲರೂ ಸಮಗ್ರವಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಟಿ ಜಾನ್ ಕಾಲೇಜು ಕಾರ್ಯಕ್ರಮದಲ್ಲಿ ಟಿ ಜಾನ್ ಕಾಲೇಜಿನ ಅಧ್ಯಕ್ಷ ಡಾ.ಥಾಮಸ್ ಟಿ.ಜಾನ್, ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶ್ರೀನಿವಾಸಯ್ಯ ಹಾಗೂ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸಾಬಣ್ಣ ತಲವಾರ್, ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲಾ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ.ರಘು ಅಕಮಂಚಿ ಹಾಜರಿದ್ದರು.

ಇದನ್ನೂ ಓದಿ : ದೇಶದ ಪ್ರಗತಿಗೆ ಬೇಕು ಕಾಂಗ್ರೆಸ್ ಆಡಳಿತ; ಮಾಜಿ ಸಚಿವ ಆಂಜನೇಯ

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqewqeqwe

Davanagere; ಪೊಲೀಸ್ ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಭಾರೀ ಹಿಂಸಾಚಾರ

Heavy rain ಮುಂದುವರಿದ ಮಳೆಯಬ್ಬರ: ಸಿಡಿಲಿಗೆ ಒಂದು ಬಲಿ

Heavy rain ಮುಂದುವರಿದ ಮಳೆಯಬ್ಬರ: ಸಿಡಿಲಿಗೆ ಒಂದು ಬಲಿ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.