ಭದ್ರಾ ಯೋಜನೆಗೆ ರಾಷ್ಟ್ರೀಯ ಮಾನ್ಯತೆ?
Team Udayavani, Nov 29, 2021, 7:15 AM IST
ಬೆಂಗಳೂರು: ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡುವ ಕ್ಷಣ ಹತ್ತಿರವಾಗಿದ್ದು, ಮಧ್ಯ ಕರ್ನಾಟಕ ಭಾಗದ ಜನರ ನೀರಿನ ದಾಹ ತೀರಿಸಲು ರಾಜ್ಯ ಸರಕಾರ ನಡೆಸುತ್ತಿರುವ ನಿರಂತರ ಪ್ರಯತ್ನಕ್ಕೆ ಫಲ ದೊರೆಯುವ ಲಕ್ಷಣ ಕಾಣಿಸಿದೆ.
ಸೋಮವಾರ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಭೆ ಸೇರಿ ಒಪ್ಪಿಗೆ ನೀಡುವ ಸಾಧ್ಯತೆ ಇದ್ದು, ಬಳಿಕ ಕೇಂದ್ರ ಸಚಿವ ಸಂಪುಟ ಸಭೆಗೆ ರವಾನೆಯಾಗಲಿದೆ.
ಈ ಪ್ರಕ್ರಿಯೆ ಪೂರ್ಣಗೊಂಡ ಅನಂತರ ರಾಷ್ಟ್ರೀಯ ಸ್ಥಾನಮಾನ ಪಡೆದ ರಾಜ್ಯದ ಮೊದಲ ಯೋಜನೆ ಎಂಬ ಹೆಗ್ಗಳಿಕೆಗೆ ಭದ್ರಾ ಮೇಲ್ದಂಡೆ ಯೋಜನೆ ಪಾತ್ರವಾಗಲಿದೆ. 25 ವರ್ಷಗಳ ಅನಂತರ ಕೇಂದ್ರದ ರಾಷ್ಟ್ರೀಯ ಯೋಜನೆಯ ಮಾನ್ಯತೆ ನೀಡುತ್ತಿರುವುದು ವಿಶೇಷ.
ಇದನ್ನೂ ಓದಿ:ಮುಂಬಯಿ ಟೆಸ್ಟ್ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ