ಎನ್ ಸಿಬಿ ದಾಳಿ: ಬೆಂಗಳೂರಿನ ಸೆಲೆಬ್ರಿಟಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದವನ ಬಂಧನ
Team Udayavani, Sep 2, 2020, 9:56 AM IST
ಬೆಂಗಳೂರು: ದಿನಕಳೆದಂತೆ ಮಾದಕ ವಸ್ತು ಲೋಕದ ಹಲವು ಮುಖಗಳು ಅನಾವರಣಗೊಳ್ಳುತ್ತಿದೆ. ಡ್ರಗ್ ಪೆಡ್ಲರ್ ಗಳು ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ಡ್ರಗ್ಸ್ ಜಾಲದ ಕರಾಳ ಮುಖ ಬಯಲಾಗುತ್ತಿದೆ. ಈ ಮಧ್ಯೆ ಎನ್ ಸಿಬಿ ಅಧಿಕಾರಿಗಳು ದಾಳಿ ಮಾಡಿ ರಾಷ್ಟ್ರ ರಾಜಧಾನಿಯಿಂದ ರಾಜ್ಯ ರಾಜಧಾನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಎಫ್ ಅಹಮದ್ ಎಂದು ಗುರುತಿಸಲಾಗಿದೆ. ಈತ ಪೇಜ್ ತ್ರೀ ಸೆಲೆಬ್ರಿಟಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಎಂದು ಎನ್ ಸಿಬಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಆರೋಪಿ ಅಹಮದ್ ಬಳಿಯಿಂದ ಮೂರು ಕೆಜಿಯಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈತ ದಿಲ್ಲಿಯಿಂದ ಮುಂಬೈಗೆ, ಮುಂಬೈನಿಂದ ಬೆಂಗಳೂರಿಗೆ ಪೂರೈಕೆ ಮಾಡುತ್ತಿದ್ದ ಎಂದು ವರದಿಯಾಗಿದೆ.
ಗೋವಾ ಮೂಲದವನಾದ ಈತ ಖಾಸಗಿ ರೆಸಾರ್ಟ್ ಒಂದರಲ್ಲಿ ಕಾರು ಚಾಲಕನಾಗಿದ್ದ ಎನ್ನಲಾಗಿದೆ. ಒಂದು ಗ್ರಾಂಗೆ ಐದು ಸಾವಿರದಷ್ಟು ಬೆಲೆ ಬಾಳುವ ಈ ಮಾದಕ ವಸ್ತುವನ್ನು ಪ್ರತಿಷ್ಠಿತ ವ್ಯಕ್ತಿಗಳಿಗೆ ಪೂರೈಸುತ್ತಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ