ರಾಜ್ಯದಲ್ಲಿ ಎನ್ಸಿಪಿ ಸಂಘಟನೆ: ಶರದ್ ಪವಾರ್
Team Udayavani, Apr 19, 2022, 6:50 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎನ್ಸಿಪಿ ಮುಖ್ಯಸ್ಥ ಶರದ್ಪವಾರ್ ರಾಜ್ಯಕ್ಕೆ ಬಂದಿದ್ದು, ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ಬೆಂಗಳೂರಿನಿಂದ ಬೆಳಗಾವಿ ವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದಿದ್ದಾರೆ.
ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಿರುದ್ಯೋಗ, ಬೆಲೆ ಏರಿಕೆ ವಿಚಾರ ಮುಂದಿಟ್ಟು ಪಾದಯಾತ್ರೆ ನಡೆಸ ಲಾಗುವುದು ಎಂದರು.
ರಾಜ್ಯದ ಕೆಲವೆಡೆ ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಜಾತ್ಯತೀತ ಪಕ್ಷಗಳ ಅಭ್ಯರ್ಥಿಗಳಿಗೆ ತೊಂದರೆ ಯಾಗದಂತೆ ನಾವು ಸ್ಪರ್ಧಿಸ ಲಿದ್ದೇವೆ. ದೇಶದಲ್ಲಿ ಜಾತ್ಯತೀತ ರಾಜಕೀಯ ಪಕ್ಷಗಳ ಒಕ್ಕೂಟವನ್ನು ಬಲಪಡಿಸುವ ಪ್ರಯತ್ನ ಆರಂಭವಾಗಿದೆ ಎಂದರು.
ಇದನ್ನೂ ಓದಿ:ಮುಸ್ಲಿಮರ ವರ್ತನೆ ಬದಲಾಗಲಿ: ಈಶ್ವರಪ್ಪ
ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ರಾಜಕಾರಣ ಮಾಡಲು ಸಾಧ್ಯವಿಲ್ಲ. ಎನ್ಸಿಪಿ ಕಾಂಗ್ರೆಸ್ ಜತೆಯಲ್ಲೇ ಹೆಜ್ಜೆ ಹಾಕಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?