ನೀಟ್‌ “ಸೀಟ್‌’ ಪಡೆಯಲು ದಾಖಲೆಗಳಿಗೆ ಪರದಾಟ


Team Udayavani, Jul 12, 2017, 3:00 AM IST

neet.jpg

ಬೆಂಗಳೂರು: ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ತೇರ್ಗಡೆಯಾದವರು ತಮ್ಮ ಇಚ್ಛೆಯ ಕಾಲೇಜು ಸೇರಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ತಾವು ಈಗಾಗಲೇ ಸೇರಿಕೊಂಡಿರುವ ಕಾಲೇಜಿನ ಶೈಕ್ಷಣಿಕ ವಾತಾವರಣ ಸೇರಿ ಅನೇಕ ವಿಷಯಗಳು ಇಷ್ಟವಾಗದ ಕಾರಣ ಕಾಲೇಜು ತ್ಯಜಿಸಿ ಬೇರೆ ಕಾಲೇಜು ಸೇರಿಕೊಳ್ಳುವುದು ಸಹಜ. ಆದರೆ, ಇಂತಹ ವಿದ್ಯಾರ್ಥಿಗಳು ನೀಟ್‌ನಲ್ಲಿ ಉತ್ತಮ ಅಂಕ ಪಡೆದಿದ್ದರೂ ಸರ್ಕಾರಿ ಕೋಟಾದ ಸೀಟು ಸುಲಭವಾಗಿ ಪಡೆದುಕೊಳ್ಳಲು ಅವಕಾಶ ಇಲ್ಲದಾಗಿದೆ.

ನೀಟ್‌ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಿಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೂಚನೆ ನೀಡಿದೆ. ಅದರಂತೆ ಸಾವಿರಾರು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಪ್ರಾಧಿಕಾರ ನಡೆಸಿರುವ
ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ನೀಟ್‌ ಈ ಎರಡು ಪರೀಕ್ಷೆ ಬರೆದ ಅಭ್ಯರ್ಥಿಗಳಲ್ಲಿ ಅನೇಕರು ಈಗಾಗಲೇ ದಾಖಲೆ ಪರಿಶೀಲನೆ ಮಾಡಿಸಿಕೊಂಡಿದ್ದಾರೆ.

ಸಿಇಟಿ ಬರೆಯದೇ ನೀಟ್‌ ಮಾತ್ರ ಬರೆದಿರುವ ಅಭ್ಯರ್ಥಿಗಳು ಯಾರೂ ಕೂಡ ದಾಖಲೆ ಪರಿಶೀಲನೆ ಮಾಡಿಸಿಕೊಂಡಿಲ್ಲ.
ಈಗಾಗಲೇ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದು, ನೀಟ್‌ನಲ್ಲಿ ಉತ್ತಮ ರ್‍ಯಾಂಕ್‌ ಬಂದಿರುವ ಸಾವಿರಾರು ವಿದ್ಯಾರ್ಥಿಗಳಿಗೆ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಕಾರಣ, ಕಾಲೇಜು ಪ್ರವೇಶದ ಸಂದರ್ಭದಲ್ಲಿ ನೀಡಿರುವ ಮೂಲ ದಾಖಲೆಗಳನ್ನು ಕಾಲೇಜು ಆಡಳಿತ ಮಂಡಳಿ ನೀಡಲು ನಿರಾಕರಿಸುತ್ತಿದೆ. ಹಾಗೆಯೇ ಪ್ರಾಧಿಕಾರವು ಮೂಲ ದಾಖಲೆ ಇಲ್ಲದೇ ಪ್ರವೇಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದೆ. ಇದರಿಂದಾಗಿ ಅರ್ಹ ಅಭ್ಯರ್ಥಿಗಳಿಗೆ ತಾವು ಬಯಸಿದ ಕಾಲೇಜಿನಲ್ಲಿ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ.

ಕಾಲೇಜು ಆಡಳಿತ ಮಂಡಳಿಗಳು ಮೂಲ ದಾಖಲೆ ಬದಲಿಗೆ ದಾಖಲೆಗಳು ತಮ್ಮ ಬಳಿಯೇ ಇರುವ ಕುರಿತು ಕಸ್ಟಡಿ ಪ್ರಮಾಣ ಪತ್ರ ನೀಡಲು ತಯಾರಿದ್ದಾರೆ. ಆದರೆ, ಪ್ರಾಧಿಕಾರದ ಅಧಿಕಾರಿಗಳು ಕಸ್ಟಡಿ ಪ್ರಮಾಣ ಪತ್ರದ ಆಧಾರದಲ್ಲಿ ಸೀಟು ಹಂಚಿಕೆ ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಪ್ರಾಧಿಕಾರದ ಈ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳು
ಇಕ್ಕಟ್ಟಿನಲ್ಲಿ ಸಿಲುಕ್ಕಿದ್ದಾರೆ.

ಮೂಲ ದಾಖಲೆಗಳನ್ನು ಈಗಾಗಲೇ ಕಾಲೇಜಿಗೆ ನೀಡಲಾಗಿದೆ. ನೀಟ್‌ನಲ್ಲಿ ಉತ್ತಮ ರ್‍ಯಾಂಕ್‌ ಬಂದಿರುವ ಹಿನ್ನೆಲೆಯಲ್ಲಿ ಕಾಲೇಜು ಬದಲಾವಣೆಗೆ ಮುಂದಾಗಿದ್ದು, ಕಾಲೇಜು ಆಡಳಿತ ಮಂಡಳಿ ಮೂಲ ದಾಖಲೆ ನೀಡಲು ನಿರಾಕರಿಸುತ್ತಿದ್ದಾರೆ. ಕಸ್ಟಡಿ ಪ್ರಮಾಣ ಪತ್ರ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ, ಪ್ರಾಧಿಕಾರದ ಅಧಿಕಾರಿಗಳು ಕಸ್ಟಡಿ ಪ್ರಮಾಣಪತ್ರ ನಿರಾಕರಿಸುತ್ತಿದ್ದಾರೆ. ನಮ್ಮ ಇಚ್ಛೆಯ ಕಾಲೇಜಿನಲ್ಲಿ ಸೇರಿಕೊಳ್ಳದ ಸ್ಥಿತಿ ನಿರ್ಮಾಣವಾಗಿದೆ ಎಂದು
ವಿದ್ಯಾರ್ಥಿಗಳು ನೋವು ಹೇಳಿಕೊಂಡರು.

– ರಾಜು ಖಾರ್ವಿ

ಟಾಪ್ ನ್ಯೂಸ್

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.