ಸರ್ಕಾರ ಪತನ ಖಚಿತವಾಯ್ತೇ?ಜನರಿಗೆ ದಂಗೆ ಏಳಲು ಕರೆ ನೀಡ್ತಾರಂತೆ ಸಿಎಂ!!
Team Udayavani, Sep 20, 2018, 1:55 PM IST
ಹಾಸನ : ‘ಸರ್ಕಾರಕ್ಕೆ ಇದೇ ರೀತಿ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ. ರಾಜ್ಯದ ಜನರಿಗೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ನೀಡುತ್ತೇನೆ‘…ಇದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ನೀಡಿದ ಹೇಳಿಕೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ನಾನು ಪ್ರತಿದಿನ ಇವರ ಕಾಟ ಸಹಿಸಿಕೊಳ್ಳಬೇಕೋ ? ರಾಜ್ಯದ ಜನರ ಹಿತ ಕಾಯಬೇಕೋ ಎಂದು ಪ್ರಶ್ನಿಸಿ ಈ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ನಾನು ಕಿಂಗ್ ಪಿನ್ ಅಂದು ಯಾರ ಹೆಸರನ್ನೂ ಹೇಳಿರಲಿಲ್ಲ,ಆದರೆ ಸೋಮಶೇಖರ್ ಯಾಕೆ ಹೆಗಲು ಮುಟ್ಟಿಕೊಂಡರು ಎಂದು ಪ್ರಶ್ನಿಸಿದರು.
ಗುರುವಾರ ಬೆಳಗ್ಗೆ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದ ಸಿಎಂ ಪರ್ಸಂಟೇಜ್ ಸಿಸ್ಟಂನ ಜನಕ ಯಡಿಯೂರಪ್ಪ ಎಂದು ಆರೋಪಿಸಿ ನಾನು ಸುಮ್ಮನಿರುವುದಿಲ್ಲ . ಸರ್ಕಾರ ನನ್ನ ಬಳಿ ಇದೆ ಏನು ಮಾಡಬೇಕೆಂದು ಗೊತ್ತಿದೆ ಎಂದಿದ್ದರು. ಬೆನ್ನಲ್ಲೆ ಯಡಿಯೂರಪ್ಪ ಕೇಂದ್ರ ಸರ್ಕಾರ ನಮ್ಮದು ಸಂಜೆ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಪ್ರತಿಸವಾಲು ಸಾಕಿದ್ದರು.
ಒಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ನ ಕೆಲ ಶಾಸಕರು ಮಹಾರಾಷ್ಟ್ರದ ರೆಸಾರ್ಟ್ಗೆ ತೆರಳಲಿದ್ದಾರೆ ಎನ್ನುವ ಗುಮಾನಿಯ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದು, ಸರ್ಕಾರ ಉಳಿಯುತ್ತದೆಯೋ ಎನ್ನುವ ಪ್ರಶ್ನೆ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ