ಆಯುಷ್ಗೂ ನೀಟ್ ಕಡ್ಡಾಯ
Team Udayavani, Feb 3, 2018, 9:43 AM IST
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದ ಆಯುಷ್ ಪದವಿಯ ವಿವಿಧ ಕೋರ್ಸ್ನ ಸೀಟು
ಪಡೆಯಲು ಕಡ್ಡಾಯವಾಗಿ ನೀಟ್ ಪರೀಕ್ಷೆ ಬರೆಯಬೇಕು. ಏಕೆಂದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯುಷ್ ಪದವಿಯ ಸೀಟಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ! ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಮೂಲಕವೇ ಪ್ರತಿವರ್ಷ ಆಯುಷ್ ಪದವಿ ಕೋರ್ಸ್ಗಳ ಸೀಟು ಹಂಚಿಕೆ ಮಾಡಲಾಗುತ್ತಿತ್ತು.
2018-19ನೇ ಸಾಲಿನಿಂದ ಆಯುಷ್ ಕೋರ್ಸ್ ಸೇರುವ ವಿದ್ಯಾರ್ಥಿಗಳು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಬರೆಯಬೇಕಾಗಿದೆ. ವೈದ್ಯಕೀಯ, ದಂತವೈದ್ಯಕೀಯದ ಜತೆಗೆ ಆಯುಷ್ ಕೋರ್ಸ್ ಕೂಡ ಸೇರಿಸಲಾಗಿದೆ. ಹೀಗಾಗಿ 2018-19ನೇ ಸಾಲಿನ ಸರ್ಕಾರಿ ಮತ್ತು ಖಾಸಗಿ ಕೋಟಾದ ಆಯುಷ್ ಸೀಟುಗಳನ್ನು ನೀಟ್ ರ್ಯಾಂಕಿಂಗ್ ಆಧಾರದಲ್ಲೇ ನಿರ್ಧರಿಸಲಾಗುತ್ತದೆ. ಪ್ರಾಧಿಕಾರದಿಂದ ಯಾವುದೇ ರೀತಿಯ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ ಎಂದು ವೆಬ್ಸೈಟ್ನಲ್ಲಿ ಸ್ಪಷ್ಟವಾಗಿ ತಿಳಿಸಿದೆ.
ನೀಟ್ ಮೂಲಕವೇ ಆಯುಷ್ ಪದವಿ ಕೋರ್ಸ್ಗಳ ಸೀಟು ಪಡೆಯಬೇಕು ಎಂದು ರಾಜ್ಯ ಸರ್ಕಾರ ತೆಗೆದುಕೊಂಡಿರುವ
ನಿರ್ಧಾರವನ್ನು ಪ್ರಾಧಿಕಾರದ ವೆಬ್ಸೈಟ್ http://kea.kar. nic.inನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಆಡಳಿತಾಧಿಕಾರಿ
“ಉದಯವಾಣಿ’ಗೆ ತಿಳಿಸಿದ್ದಾರೆ.
ಭಾರತೀಯ ವೈದ್ಯ ಪದ್ಧತಿಯ ಆಯುರ್ವೇದ, ಯುನಾನಿ, ಯೋಗ, ನ್ಯಾಚೂರೋಪಥಿ ಮತ್ತು ಹೋಮಿಯೋಪಥಿ ಕೋರ್ಸ್ ಗಳು ಆಯುಷ್ ವ್ಯಾಪ್ತಿಯಲ್ಲಿ ಬರುತ್ತದೆ. 2017-18ನೇ ಸಾಲಿನಲ್ಲೇ ಆಯುಷ್ ಕೋರ್ಸ್ಗೆ ನೀಟ್ ಮೂಲಕ ಆಯ್ಕೆ ಮಾಡುವುದಾಗಿ ಕೇಂದ್ರ ಆಯುಷ್ ಇಲಾಖೆ ಘೋಷಣೆ ಮಾಡಿತ್ತಾದರೂ, ಹಲವು ರಾಜ್ಯಗಳು ಒಪ್ಪಿಕೊಂಡಿರಲಿಲ್ಲ. ಏ.18, 19ಕ್ಕೆ ಸಿಇಟಿ: ಫೆ.1ರಿಂದ 26ರ ತನಕ ಸಿಇಟಿಗೆ ಆನ್ಲೈನ್ ಅರ್ಜಿ ಸ್ವೀಕರಿಸಲಾಗುತ್ತದೆ. ಫೆ.28ರೊಳಗೆ ಅರ್ಜಿ ಶುಲ್ಕ ಪಾವತಿಸಬೇಕು. ಏ.10ರೊಳಗೆ ಪರೀಕ್ಷೆಯ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬೇಕು. ಏಪ್ರಿಲ್ 18 ಮತ್ತು 19ರಂದು ಸಿಇಟಿ ನಡೆಯಲಿದ್ದು, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.20ರಂದು ಕನ್ನಡ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ