ಯೋಗ, ನ್ಯಾಚುರೋಪತಿಗೆ ನೀಟ್‌ ಕಡ್ಡಾಯವಲ್ಲ? 


Team Udayavani, Mar 10, 2019, 12:30 AM IST

666.jpg

ಬೆಂಗಳೂರು: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್‌) ವ್ಯಾಪ್ತಿಗೆ ಬರುವ ಆಯುಷ್‌ ಕೋಸ್‌ ìಗಳಲ್ಲಿ ಯೋಗ ಮತ್ತು ನ್ಯಾಚುರೋಪಥಿಗೆ ಈ ವರ್ಷದಿಂದ ವಿನಾಯಿತಿ ನೀಡಲಾಗಿದೆ.

ಈ ವರ್ಷದ ಆಯುಷ್‌ ಸೀಟುಗಳನ್ನು ನೀಟ್‌ ರ್‍ಯಾಂಕಿಂಗ್‌ ಆಧಾರದಲ್ಲೇ ಹಂಚಿಕೆ ಮಾಡಲಾಗಿತ್ತು. 2019-20ನೇ ಸಾಲಿನ ಆಯುಷ್‌ ಕೋರ್ಸ್‌ಗಳು ಕೂಡ ನೀಟ್‌ ಅಡಿಯಲ್ಲೇ ಬರಲಿದೆಯಾದರೂ, ಯೋಗ ಮತ್ತು ನ್ಯಾಚುರೋಪಥಿಗೆ ನೀಟ್‌ ಅನ್ವಯಿಸದರಲು ಕೇಂದ್ರ ಆಯುಷ್‌ ಮಂಡಳಿ ತೀರ್ಮಾನಿಸಿದೆ. ಕೇಂದ್ರ ಮಂಡಳಿ ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಆಯುಷ್‌ ಇಲಾಖೆಯ ಉನ್ನತ ಅಧಿಕಾರಿ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಸರ್ಕಾರ ಇನ್ನೂ ಪ್ರತಿಕ್ರಯಿಸಿಲ್ಲ.

2018ರ ನವೆಂಬರ್‌ನಲ್ಲಿ ಕೇಂದ್ರ ಮಂಡಳಿಯಿಂದ ಬಂದಿರುವ ಸುತ್ತೋಲೆಯಲ್ಲಿ ಯೋಗ ಮತ್ತು ನ್ಯಾಚುರೋಪಥಿ ಕೋರ್ಸ್‌ಗಳು ನೀಟ್‌ ಅಧೀನಕ್ಕೆ ಬರುತ್ತವೆ ಎಂದು ಹೇಳಲಾಗಿತ್ತು. ಹೊಸ ಸುತ್ತೋಲೆ ಯಲ್ಲಿ ಯೋಗ ಮತ್ತು ನ್ಯಾಚುರೋಪಥಿ ಕೋರ್ಸ್‌ಗಳಿಗೆ ನೀಟ್‌ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಆಯುಷ್‌ ಪದಟಛಿತಿಯೊಳಗೆ ಆಯುರ್ವೇದ, ಯುನಾನಿ, ಹೋಮಿಯೋಪಥಿ, ನ್ಯಾಚುರೋಪತಿ ಹಾಗೂ ಯೋಗ ಕೋರ್ಸ್‌ಗಳು ಬರುತ್ತವೆ. ಆಯುರ್ವೇದ, ಯುನಾನಿ, ಹೋಮಿಯೋಪಥಿಗಳು ಒಂದಕ್ಕೊಂದು ಪೂರಕ ಚಿಕಿತ್ಸಾ ಪದಟಛಿತಿಗಳಾಗಿವೆ. ಹೀಗಾಗಿ, ಈ ಕೋರ್ಸ್‌ಗೆ ಸೇರುವ ವಿದ್ಯಾರ್ಥಿಗಳು ನೀಟ್‌ ಬರೆಯಬೇಕಾಗುತ್ತದೆ. ಯೋಗ ಮತ್ತು ನ್ಯಾಚುರೋಪಥಿಗೆ ನೀಟ್‌ ಅವಶ್ಯಕತೆ ಇಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖೀಸಲಾಗಿದೆ.

ಕಾಲೇಜು, ಸೀಟು ವಿವರ: ರಾಜ್ಯದಲ್ಲಿ ಮೂರು ಸರ್ಕಾರಿ, 85 ಅನುದಾನಿತ ಹಾಗೂ 50 ಅನುದಾನ ರಹಿತ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆಯು ರ್ವೇದ, ಯುನಾನಿ, ಹೋಮಿಯೋಪಥಿ, ನ್ಯಾಚುರೋ ಪಥಿ ಮತ್ತು ಯೋಗ ಕಾಲೇಜುಗಳಿವೆ. ಒಟ್ಟು 2270 ಸೀಟುಗಳಲ್ಲಿ 860 ಸರ್ಕಾರಿ ಕೋಟಾದ ಸೀಟುಗಳಿವೆ.

1 ಸರ್ಕಾರಿ, ಮೂರು ಅನುದಾನಿತ ಯುನಾನಿ ಕಾಲೇಜುಗಳ ಒಟ್ಟು 170 ಸೀಟುಗಳಲ್ಲಿ 74 ಸರ್ಕಾರಿ ಸೀಟುಗಳಿವೆ. ತಲಾ ಒಂದು ಸರ್ಕಾರಿ ಹೋಮಿಯೋಪಥಿ, ಯೋಗ, ನ್ಯಾಚುರೋಪಥಿ ಕಾಲೇಜು, 1 ಖಾಸಗಿ ಹೋಮಿಯೋಪಥಿ ಹಾಗೂ ಎರಡು ಖಾಸಗಿ ಯೋಗ, ನ್ಯಾಚುರೋಪಥಿ ಕಾಲೇಜುಗಳಿವೆ. ಹೋಮಿಯೋಪಥಿಯಲ್ಲಿ 805 ಸೀಟುಗಳಿದ್ದು, ಅದರಲ್ಲಿ 193 ಸರ್ಕಾರಿ ಸೀಟುಗಳಿವೆ. ಯೋಗ ನ್ಯಾಚುರೋಪಥಿಯಲ್ಲಿ 145 ಸೀಟುಗಳಿದ್ದು, 49 ಸರ್ಕಾರಿ ಸೀಟು ಸೇರಿದೆ. 2019-20ನೇ ಸಾಲಿಗೆ ಸೀಟುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಆಯುಷ್‌ಗೆ ನೀಟ್‌ ಬೇಡ
ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳಿಗೆ ನೀಟ್‌ ಕಡ್ಡಾಯ ಮಾಡಲಾಗಿದೆ. ಇದೇ ಮಾನದಂಡವನ್ನು ಆಯುಷ್‌ ಕೋರ್ಸ್‌ಗಳಿಗೂ ಅನ್ವಯಿಸಿರುವುದಕ್ಕೆ ಶಿಕ್ಷಣ ಸಂಸ್ಥೆಗಳು ಹಾಗೂ ವಿದ್ಯಾರ್ಥಿ ಸಮೂಹ ತೀವ್ರ ವಿರೋಧ ವ್ಯಕ್ತಪಡಿಸಿವೆ. ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗೂ ಆಯುಷ್‌ ಪದ್ಧತಿಯ ಕೋರ್ಸ್‌ಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಭಾರತೀಯ ವೈದ್ಯಪದಟಛಿತಿಯ ಸೀಟುಗಳನ್ನು ನೀಟ್‌ ಮೂಲಕ ಆಯ್ಕೆ ಮಾಡುವುದು ಸರಿಯಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಮೂಲಕ ಭರ್ತಿ ಮಾಡುವಂತಾಗಬೇಕು ಎಂದು ಹಲವು ಸಂಘಟನೆಗಳು ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಿವೆ.

ರಾಜು ಕಾರ್ವಿ ಕೊಡೇರಿ 

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.