ಸಚಿವ ಸಂಪುಟ ವಿಸ್ತರಣೆ ಮಾಡಿದರೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ- ನೆಹರು ಓಲೇಕಾರ್
Team Udayavani, Nov 10, 2021, 1:18 PM IST
ಬೆಂಗಳೂರು: ಹಾವೇರಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಸ್ಥಳೀಯ ಬಿಜೆಪಿ ಮುಖಂಡರು ಕಾರಣರಲ್ಲ ಎಂದು ಶಾಸಕ ನೆಹರು ಓಲೇಕರ್ ಹೇಳಿದರು.
ಕನ್ನಡಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಅವರು,ಕಾಂಗ್ರೆಸ್ ಅಭ್ಯರ್ಥಿ ಮಾನೆ ಕೋವಿಡ್ ವೇಳೆ ಉತ್ತಮ ಕೆಲಸ ಮಾಡಿದ್ದರು.ಸ್ಥಳೀಯರ ಜೊತೆ ಸಂಪರ್ಕದಲ್ಲಿ ಇದ್ದರು. ಉದಾಸೀ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಕೋವಿಡ್ ವೇಳೆ ಕೆಲಸ ಮಾಡಲಿಲ್ಲ.ಅದು ಕೂಡ ಸೋಲಿಗೆ ಕಾರಣವಾಯಿತು ಎಂದರು.
ಮುಖ್ಯ ಮಂತ್ರಿ ಬಸವರಾಜ ಬೊಮಾಯಿ ಅವರ ದೆಹಲಿ ಪ್ರವಾಸ ವಿಚಾರ.ಸಚಿವ ಸಂಪುಟ ವಿಸ್ತರಣೆ ಮಾಡಿದರೆ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಓಲೇಕಾರ್ ಹೇಳಿದರು.