ಜೂ.1ರಿಂದಲೇ ಶಾಲೆಯಲ್ಲಿ ಎನ್‌ಇಪಿ ಜಾರಿ ಅನುಮಾನ

ರಾಜ್ಯಾದ್ಯಂತ ತರಬೇತಿ ಪಠ್ಯಕ್ರಮ ವಿನ್ಯಾಸಕ್ಕೆ 6 ಸಮಿತಿ

Team Udayavani, Apr 26, 2022, 7:15 AM IST

ಜೂ.1ರಿಂದಲೇ ಶಾಲೆಯಲ್ಲಿ ಎನ್‌ಇಪಿ ಜಾರಿ ಅನುಮಾನ

ಬೆಂಗಳೂರು: ದೇಶದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯಲ್ಲಿ ಮುಂದಿರುವ ಕರ್ನಾಟಕವು, ಶಾಲಾ ಶಿಕ್ಷಣ ದಲ್ಲಿ ಈ ವರ್ಷವೇ ನೀತಿಯನ್ನು ನಿಗದಿತ ಸಮಯದಲ್ಲಿ ಅನುಷ್ಠಾನ ಮಾಡುವುದು ಸಂಶಯ.

ಎನ್‌ಇಪಿ ಜಾರಿಗೆ ಅಗತ್ಯವಿರುವ ಪಠ್ಯ ಕ್ರಮ, ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯ ಕ್ರಮ  ಇನ್ನೂ ಪ್ರಗತಿಯಲ್ಲಿದೆ. ಹೀಗಾಗಿ ಜೂ.1ರಿಂದಲೇ ಪೂರ್ವ ಪ್ರಾಥಮಿಕ ಹಂತದ ಮಕ್ಕಳಿಗೆ ಎನ್‌ಇಪಿ ಆರಂಭಿಸುವುದು ಕಷ್ಟಸಾಧ್ಯವಾಗಿದೆ. ಒಂದು ವೇಳೆ ಆರಂಭವಾದರೂ ಪೂರ್ಣ ಪ್ರಮಾಣದಲ್ಲಿ ಮಕ್ಕಳಿಗೆ ಸಿಗಬೇಕಿ ರುವ ಶಿಕ್ಷಣ ನೀಡಲು ವಿಳಂಬವಾಗ ಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

3ರಿಂದ 5 ವರ್ಷದೊಳಗಿನ ಮಕ್ಕಳಿಗೆ “ಚಿಲಿಪಿಲಿ’ ಹೆಸರಿನಲ್ಲಿ “ಬಾಲ್ಯಪೂರ್ವ ಆರೈಕೆ ಮತ್ತು ಶಿಕ್ಷಣ ಕಲಿಕೆ’ ನೀಡುವುದಾಗಿ ಸರಕಾರ ಈಗಾಗಲೇ ಘೋಷಿಸಿದ್ದು, ಇದಕ್ಕಾಗಿ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುತ್ತಿದೆ.

ಮಕ್ಕಳಿಗೆ ಏನೇನು ಕಲಿಸ ಬೇಕು ಎಂಬುದನ್ನು ಅಂಗನವಾಡಿ ಕಾರ್ಯ ಕರ್ತೆಯರಿಗೆ ತಿಳಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಸಮಿತಿ ನೀಡುವ ವರದಿ ಆಧಾರದಲ್ಲಿ ಅಂಗನವಾಡಿ ಕಾರ್ಯ ಕರ್ತೆಯರಿಗೆ ತರಬೇತಿ ನೀಡಲಾಗುತ್ತದೆ. ಅದಾದ ಬಳಿಕ ಎನ್‌ಇಪಿ ಜಾರಿಗೆ ಕ್ರಮ ಕೈಗೊಳ್ಳ ಲಾಗುತ್ತದೆ. 7ನೇ ತರಗತಿ, ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಓದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತ್ಯೇಕವಾಗಿ ತರಬೇತಿ ನೀಡಬೇಕಾಗುತ್ತದೆ.

ಪಠ್ಯಕ್ರಮ ವಿನ್ಯಾಸಕ್ಕೆ ಸಮಿತಿ ರಚನೆ
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ 3ರಿಂದ 8 ವರ್ಷದ ಮಕ್ಕಳಿಗೆ ಮೊದಲ ಹಂತದಲ್ಲಿ ಶಿಕ್ಷಣ ನೀಡಲಾಗುತ್ತದೆ. (ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಿಕ್ಷಣ) 3ರಿಂದ 6 ವರ್ಷದ ಮಕ್ಕಳಿಗೆ ಅಂಗನವಾಡಿ ಹಾಗೂ 1 ಮತ್ತು 2ನೇ ತರಗತಿ ಶಿಕ್ಷಣವನ್ನು ಶಾಲೆಗಳಲ್ಲಿ ನೀಡಲಿದೆ. ಈ ಮಕ್ಕಳಿಗೆ ಏನನ್ನು ಬೋಧಿಸಬೇಕು ಎಂಬ ಪಠ್ಯಕ್ರಮ ವಿನ್ಯಾಸಗೊಳಿಸುವುದಕ್ಕಾಗಿ 6 ಉಪ ಸಮಿತಿಗಳನ್ನು ರಚಿಸಿ ಎ.19ರಂದು ಆದೇಶ ಹೊರಡಿಸಿದೆ.

ಈ ಸಮಿತಿಗಳು 45 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. ಪಠ್ಯಕ್ರಮ ವಿನ್ಯಾಸ, ಬೋಧನೆ ಮತ್ತು ಕಲಿಕಾ ಸಾಮಗ್ರಿ ಗಳು, ಮೌಲ್ಯಮಾಪನ, ಮಕ್ಕಳ ಸಾಮರ್ಥ್ಯ ಅಭಿವೃದ್ಧಿ, ಶಿಕ್ಷಣವು ಸಮುದಾಯ ತಲುಪು ವಿಕೆ, ಮಗುವಿನ ಆರಂಭಿಕ ಉತ್ತೇಜನ, ಮೇಲ್ವಿಚಾರಣೆ ಮತ್ತು ಉಸ್ತುವಾರಿ ವಿಷಯ ಗಳನ್ನು ಕುರಿತು ಉಪ ಸಮಿತಿಗಳು ವರದಿ ನೀಡಲಿವೆ. ಇದಾದ ಬಳಿಕ ಪಠ್ಯಕ್ರಮವು ರಚನೆಯಾಗಲಿದೆ.

ಸಮಿತಿಯ ಕರ್ತವ್ಯಗಳೇನು?
ಈ ಉಪ ಸಮಿತಿಗಳು ಬಾಲ್ಯಾವಸ್ಥೆ ಯಲ್ಲಿ ಮಕ್ಕಳ ಸಂರಕ್ಷಣೆ ಮತ್ತು ಶಿಕ್ಷಣಕ್ಕಾಗಿ ಭದ್ರ ಬುನಾದಿ ಕಲ್ಪಿಸುವುದು. ಮಕ್ಕಳಲ್ಲಿ ಕುತೂಹಲವನ್ನು ಉಂಟುಮಾಡುವ ಅಕ್ಷರಮಾಲೆ, ಭಾಷೆಗಳು, ಅಂಕಿಗಳು, ಎಣಿಕೆ, ಬಣ್ಣಗಳು, ಒಳಾಂಗಣ ಮತ್ತು ಹೊರಾಂಗಣ ಆಟಗಳು, ಚಿತ್ರ ಬರೆಯು ವುದು, ನಾಟಕ, ಗೊಂಬೆಯಾಟ ಗಳನ್ನು ಹೊಂದಿರುತ್ತದೆ.

ಸರಕಾರವು ಈಗಾಗಲೇ ಘೋಷಿಸಿರುವಂತೆ ಎನ್‌ಇಪಿ ಜಾರಿ ಮಾಡ ಲಿದೆ. ಅಂಗನವಾಡಿ ಕಾರ್ಯ ಕರ್ತೆಯ ರಿಗೆ ತರಬೇತಿ ಸಹಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
– ಎಸ್‌. ಸೆಲ್ವಕುಮಾರ್‌, ಪ್ರಧಾನ ಕಾರ್ಯದರ್ಶಿ, ಪ್ರಾ.ಮತ್ತು ಪ್ರೌಢಶಿಕ್ಷಣ ಇಲಾಖೆ

ಹತ್ತು ದಿನಗಳ ತರಬೇತಿಯಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಹೇಳಿಕೊಡುವಂತೆ ತಿಳಿಸಿದ್ದಾರೆ. ನಿಖರವಾಗಿ ಏನು ಹೇಳಿಕೊಡ ಬೇಕು ಎಂಬ ಬಗ್ಗೆ ಪಠ್ಯಕ್ರಮ ಬರಲಿದೆ. ಅನಂತರ ಅದನ್ನು ಮತ್ತೂಮ್ಮೆ ತರಬೇತಿ ನೀಡಿ ತಿಳಿಸಿಕೊಡಲಾಗುವುದು ಎನ್ನಲಾಗಿದೆ. ಮತ್ತಷ್ಟು ತರಬೇತಿ ನೀಡಿದ್ದರೆ ಒಳ್ಳೆಯದಿತ್ತು.
– ಹೆಸರು ಹೇಳದ ಅಂಗನವಾಡಿ ಕಾರ್ಯಕರ್ತೆ

- ಎನ್‌.ಎಲ್‌. ಶಿವಮಾದು

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.