ಎನ್‌ಇಪಿ ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ನಾಗ್ಪುರ ಶಿಕ್ಷಣ ನೀತಿ:ಡಿಕೆಶಿ


Team Udayavani, Sep 4, 2021, 10:00 PM IST

ಎನ್‌ಇಪಿ ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ನಾಗ್ಪುರ ಶಿಕ್ಷಣ ನೀತಿ:ಡಿಕೆಶಿ

ಬೆಂಗಳೂರು: ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ ಎನ್‌ಇಪಿ ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್‌ ಪಕ್ಷ ಹೋರಾಟ ಮಾಡಲಿದೆ. ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದೂ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್‌ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ ಎಂದರು.

ಇದನ್ನೂ ಓದಿ:ಕಾನೂನು ಬಾಹಿರವಾಗಿ ಮತಾಂತರ, 8 ಮಂದಿ ಬಂಧನ : ಅಂಗವಿಕಲರು, ನಿರುದ್ಯೋಗಿಗಳೇ ಇವರ ಟಾರ್ಗೆಟ್

ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್‌, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಈ ನೀತಿಯಲ್ಲಿ ಕೆಲವು ಉತ್ತಮ ಅಂಶಗಳು ಇರಬಹುದು. ಆದರೆ, ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ ಎಂದು ತಿಳಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.