373 ಹೊಸ ಕೋವಿಡ್ ಪ್ರಕರಣ ದಾಖಲು: ಬೆಂಗಳೂರಿನಲ್ಲಿ ನಾಲ್ವರು ಕೋವಿಡ್ ಸೋಂಕಿಗೆ ಬಲಿ
Team Udayavani, Dec 9, 2021, 9:30 PM IST
ಬೆಂಗಳೂರು: ರಾಜ್ಯವ್ಯಾಪಿ ಗುರುವಾರ 373 ಕೋವಿಡ್ನ ಹೊಸ ಪ್ರಕರಣಗಳು ಪತ್ತೆಯಾಗಿದ್ದು ರಾಜಧಾನಿ ಬೆಂಗಳೂರಿನಲ್ಲಿ ನಾಲ್ವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಬೆಂಗಳೂರನ್ನು ಹೊರತು ಪಡಿಸಿದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಕೋವಿಡ್ ಸೋಂಕಿನಿಂದ ಸಾವಿಗೀಡಾಗಿರುವುದು ವರದಿ ಆಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಆಸ್ಪತ್ರೆಯಿಂದ 292 ಜನರು ಬಿಡುಗಡೆಹೊಂದಿದ್ದು ಆಸ್ಪತ್ರೆಯಿಂದ ಈವೆರೆಗೂ ಬಿಡುಗಡೆ ಆಗಿರುವವ ಸಂಖ್ಯೆ 2,95,3857 ತಲುಪಿದೆ. ಗುರುವಾರ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7332 ಆಗಿದ್ದು ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 29,99,9,471ಆಗಿದೆ.
ಕೋವಿಡ್ ಸೋಂಕಿಗೆ ಈವೆರೆಗೂ 3,8,253 ಜನರ ಸಾವೀಗಿಡಾಗಿದ್ದಾರೆ. ಕೋವಿಡ್ ಸೋಂಕಿತ ಖಚಿತ ಪ್ರಕರಣಗಳ ಶೇಕಡವಾರು ಪ್ರಮಾಣ 0.31ಆಗಿದ್ದು ಮೃತಪಟ್ಟವರ ಶೇಕಡವಾರು ಪ್ರಮಾಣ 1.07ರಷ್ಟಿದೆ.
ಒಮಿಕ್ರಾನ್ ಹೊಸ ರೂಪಾಂತರ ವೈರಸ್ ಇರುವ ಆಫ್ರಿಕನ್ ದೇಶಗಳಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾವುದೇ ಪ್ರಯಾಣಿಕರು ಆಗಮಿಸಿಲ್ಲ.
ಬೆಂಗಳೂರಿನಲ್ಲೆ ಹೆಚ್ಚು ಪ್ರಕರಣ, ಸಾವು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೋಲಿಕೆ ಮಾಡಿದೆ ಗುರುವಾರ ರಾಜಧಾನಿ ಬೆಂಗಳೂರಿನಲ್ಲೆ ಅಧಿಕ ಕೋವಿಡ್ ಪ್ರಕರಣಗಳು ಕಂಡಿಬಂದಿವೆ.ಜತೆಗೆ ಕೋವಿಡ್ ಸೋಂಕಿನಿಂದಾಗಿ ಸಾವಿಗೀಡಾದವರ ಸಂಖ್ಯೆಯಲ್ಲೂ ದ್ವಿಗುಣ ಕಂಡುಬಂದಿದೆ.
ಬೆಂಗಳೂರಿನಲ್ಲಿ 211 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,25,8,330ಕ್ಕೆ ಏರಿದೆ. ಹಾಗೆಯೇ ಸಾವಿಗೀಡಾದವ ಸಂಖ್ಯೆ 1,6,358ಕ್ಕೆ ಹೆಚ್ಚಳವಾಗಿದೆ. ರಾಜ್ಯಧಾನಿ ಬೆಂಗಳೂರನ್ನು ಹೊರತು ಪಡಿಸಿದರೆ ಶಿವಮೊಗ್ಗದಲ್ಲಿ 33, ಕೊಡಗಿನಲ್ಲಿ 21, ಮೈಸೂರಿನಲ್ಲಿ 18, ಹಾಸನದಲ್ಲಿ 12, ತುಮಕೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 11 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ಕಂಡುಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ