ಶಾಲೆಗಳ ಪ್ರಾರಂಭ ರಾಜ್ಯದ ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ


Team Udayavani, May 15, 2020, 10:11 PM IST

ರಾಜ್ಯದ ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ ಕಾಟದಿಂದಾಗಿ ಹೊಸ ಶೈಕ್ಷಣಿಕ ವರ್ಷ ರಾಜ್ಯದಲ್ಲಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಇನ್ನೂ ಮುಂದುವರೆದಿದೆ.

ಈ ನಡುವೆ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಮಾರ್ಗಸೂಚಿಯೊಂದನ್ನು ಇಂದು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿನ ಪ್ರಮುಖ ಸೂಚನೆಗಳು ಹೀಗಿವೆ:

– ಶಾಲಾ ತರಗತಿ ಕೊಠಡಿಗಳಲ್ಲಿ ಸಾಮಾಜಿಲ ಅಂತರ ಕಾಯ್ದುಕೊಳ್ಳಲು ಒಂದು ಡೆಸ್ಕ್ ನಲ್ಲಿ ಮೂವರ ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶ.

– ಈ ಸಂದರ್ಭದಲ್ಲಿ ಕೊಠಡಿಗಳ ಕೊರತೆ ಕಂಡುಬಂದರೆ ಶಾಲಾ ಗ್ರಂಥಾಲಯ ಕೊಠಡಿ, ಕ್ರೀಡಾ ಕೊಠಡಿ ಮತ್ತು ಕಂಪ್ಯೂಟರ್ ಕೊಠಡಿಗಳನ್ನು ಬಳಸಿಕೊಳ್ಳಬಹುದು.

– ಇನ್ನು ಜನವಸತಿ ಪ್ರದೇಶಗಳಲ್ಲಿ ಲಭ್ಯವಿರುವ ಸಮುದಾಯ ಭವನಗಳು, ಸರಕಾರಿ ಕಟ್ಟಡಗಳು ಹಾಗೂ ಮಧ್ಯಾಹ್ನದ ಬಳಕ ಲಭ್ಯವಿರುವ ಅಂಗನವಾಡಿ ಕಟ್ಟಡಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಶಿಪ್ಟ್ (ಪಾಳಿ) ಪದ್ಧತಿಯಲ್ಲಿ ತರಗತಿಗಳನ್ನು ನಡೆಸುವುದು:

ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗಿನ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಇವುಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಪಾಳಿ ವ್ಯವಸ್ಥೆಯಲ್ಲಿ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.

1 ರಿಂದ 7ನೇ ತರಗತಿವರಗಿನ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ತರಗತಿ ನಡೆಸಲು ಲಭ್ಯ ಎಲ್ಲಾ ವ್ಯವಸ್ಥೆಗಳು ಸಾಲದಾದಲ್ಲಿ ಪಾಳಿ ಪದ್ದತಿಯಲ್ಲಿ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.

– 1 ಮತ್ತು 2ನೇ ತರಗತಿ ನಲಿ ಕಲಿ ಮಕ್ಕಳನ್ನು ಒಟ್ಟಿಗೆ ಸೇರ್ಪಡೆ ಮಾಡಿ ಬೋಧನೆಗೆ ಅವಕಾಶ.

– 1ರಿಂದ 7ನೇ ತರಗತಿಯವರೆಗೆ ಶಿಕ್ಷಕರ ಕೊರತೆ ಇದ್ದಲ್ಲಿ ಸ್ಥಳೀಯವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ.

– ಪ್ರಾಥಮಿಕ ಶಾಲೆಗಳಲ್ಲಿಯೂ ಪದವಿಗಳನ್ನು ಪಡೆದಿರುವ ಶಿಕ್ಷಕರು ಲಭ್ಯವಿರುವುದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪರಸ್ಪರ ಸಮಾಲೋಚನೆ ನಡೆಸಿ ಪ್ರೌಢ ಶಾಲಾ ಶಿಕ್ಷಕರು 6 ಮತ್ತು 7 ನೇ ತರಗತಿಗಳಿಗೂ ಪ್ರಾಥಮಿಕ ಶಾಲೆಗಳಲ್ಲಿ ಪದವಿ ಹೊಂದಿರುವ ಶಿಕ್ಷಕರು 8 ಮತ್ತು 9ನೇ ತರಗತಿಗಳಿಗೂ ಬೋಧಿಸಲು ಅವಕಾಶ.

– ಸದ್ಯಕ್ಕೆ ಪಿಯು ತರಗತಿಗಳು 10 ಗಂಟೆಯಿಂದ 3.30ರವರೆಗೆ ನಡೆಯುತ್ತಿವೆ ಆದರೆ ಈ ತರಗತಿಗಳನ್ನು ಬೆಳಿಗ್ಗೆ 8.30 ರಿಂದ 12.30ರವರೆಗೆ ನಡೆಸಿದಲ್ಲಿ ಪ್ರೌಢಶಾಲಾ ಕೊಠಡಿಗಳನ್ನು ಬಳಸಿಕೊಂಡು ಪಿಯು ತರಗತಿಗಳನ್ನು ಸೂಕ್ತ ಸಾಮಾಜಿಕ ಅಂತರದೊಂದಿಗೆ ನಡೆಸಲು ಸೂಚನೆ.

– ರಾಜ್ಯದ ತಾಲೂಕು/ಹೋಬಳಿ ಕೇಂದ್ರಗಳಲ್ಲಿ ಕೆಲವು ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚಲ್ಪಟ್ಟಿದ್ದು, ಅವುಗಳನ್ನು ಅಗತ್ಯ ದುರಸ್ತಿ ಮಾಡಿಸಿ ಪ್ರೌಢಶಾಲೆಯ ಕೆಲವು ತರಗತಿಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸೂಚನೆ.

ಪಾಳಿ ಪದ್ಧತಿಯಲ್ಲಿ ತರಗತಿ ಸಮಯಗಳ ವಿಂಗಡನೆ:
ಮೊದಲನೇ ಪಾಳಿ ಸಮಯ ಬೆಳಿಗ್ಗೆ 7.50ರಿಂದ ಪ್ರಾರಂಭಗೊಂಡು ಮಧ್ಯಾಹ್ನ 12.20ರವರೆಗೆ ನಡೆಸುವುದು ಹಾಗೂ ಎರಡನೇ ಪಾಳಿಯನ್ನು ಮಧ್ಯಾಹ್ನ 12.10ರಿಂದ ಸಂಜೆ 5.00 ಗಂಟೆಯವರೆಗೆ ನಡೆಸಲು ಸಮಾಲೋಚನೆ ಮಾಡುವಂತೆ ಸೂಚನೆ.

– ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಸಾರಿಗೆ ವ್ಯವಸ್ಥೆಯನ್ನು ಒದಗಿಸುವಾಗ ವಿದ್ಯಾರ್ಥಿಗಳನ್ನು ವಾಹನಗಳಲ್ಲಿ ಕರೆತರುವಾಗ ಸೂಕ್ತ ಸಾಮಾಜಿಕ ಅಂತರ ನಿಯಮಗಳನ್ನು ಪಾಲನೆ ಮಾಡಲು ನಿರ್ದೇಶನ ನೀಡಲಾಗಿದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.