ರಾಜ್ಯದಲ್ಲಿ ಎಂಟು ಹೊಸ ಸೋಂಕು ಪ್ರಕರಣಗಳು ಪತ್ತೆ: ವಿಜಯಪುರದ ಮಹಿಳೆ ಸಾವು
Team Udayavani, May 5, 2020, 12:41 PM IST
ಬೆಂಗಳೂರು: ಕೋವಿಡ್ -19 ಸೋಂಕು ರಾಜ್ಯದಲ್ಲಿ ಇಂದು ಎಂಟು ಜನರಲ್ಲಿ ಪತ್ತೆಯಾಗಿದೆ. ವಿಜಯಪುರದ 62 ವರ್ಷದ ಸೋಂಕಿತ ಮಹಿಳೆ ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಇಂದು ಬೆಂಗಳೂರು ನಗರದಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿದೆ. 30 ವರ್ಷದ ಮಹಿಳೆಗೆ ಸೋಂಕು ಪತ್ತೆಯಾಗಿದ್ದು, ಆಕೆಯ ಸೋಂಕು ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ. 34 ವರ್ಷದ ಪುರುಷನಿಗೆ ಸೋಂಕು ತಾಗಿದ್ದು, ಸೋಂಕಿತ ಸಂಖ್ಯೆ 420ರ ಸಂಪರ್ಕದಿಂದ ಸೋಂಕು ಹರಡಿದೆ. ಜ್ವರ ಶೀತ ಕೆಮ್ಮಿನಿಂದ ಬಳಲುತ್ತಿರುವ 45 ವರ್ಷದ ವ್ಯಕ್ತಿಗೂ ಸೋಂಕು ದೃಢವಾಗಿದೆ.
ಉಳಿದಂತೆ ಬಾಗಲಕೋಟೆಯಲ್ಲಿ ಇಬ್ಬರಿಗೆ ಸೋಂಕು ದೃಢವಾಗಿದೆ. ಓರ್ವ ಗಂಡು ಮತ್ತು ಓರ್ವ ಮಹಿಳೆಗೆ ಸೋಂಕು ತಾಗಿದ್ದು ಇವರಿಬ್ಬರೂ 29 ವರ್ಷದವರಾಗಿದ್ದಾರೆ. ಇವರಿಬ್ಬರಿಗೂ ಸೋಂಕಿತ ಸಂಖ್ಯೆ 367 ಮತ್ತು 368ರ ಸಂಪರ್ಕದಿಂದ ಸೋಂಕು ತಾಗಿದೆ.
ಉತ್ತರಾಖಂಡಕ್ಕೆ ಪ್ರಯಾಣ ಮಾಡಿದ್ದ ಬಳ್ಳಾರಿಯ 43 ವರ್ಷದ ವ್ಯಕ್ತಿಗೆ ಸೋಂಕು ತಾಗಿರುವುದು ದೃಢವಾಗಿದೆ. ಮಂಗಳೂರಿನ 51 ವರ್ಷದ ವ್ಯಕ್ತಿಗೆ ಪಿ-536ರ ಸಂಪರ್ಕದಿಂದ ಸೋಂಕು ಹರಡಿದೆ.
ಕೆಲ ದಿನಗಳಿಂದ ಯಾವುದೇ ಸೋಂಕಿತರಿಲ್ಲದೆ ನೆಮ್ಮದಿಯಿಂದ ಇದ್ದ ಉತ್ತರಕನ್ನಡದ ಜಿಲ್ಲೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. 28 ವರ್ಷದ ಭಟ್ಕಳದ ವ್ಯಕ್ತಿಗೆ ಸೋಂಕು ತಾಗಿದೆ.
ರಾಜ್ಯದಲ್ಲಿ ಇಂದು ಎಂಟು ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ. ಇವುಗಳಲ್ಲಿ 324 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 28 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಮತ್ತು ಓರ್ವ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ