ನೂತನ ಸಿಎಂ ಬೊಮ್ಮಾಯಿ ಎದುರಿಗಿದೆ ಬೆಟ್ಟದಷ್ಟು ಸವಾಲು


Team Udayavani, Jul 28, 2021, 10:20 AM IST

basavaraj-bommai

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿದೆ. ಸಿಎಂ ಪಟ್ಟಕ್ಕಾಗಿ ನಡೆದ ಹಲವಾರು ಕಸರತ್ತುಗಳ ಬಳಿಕ, ಮುಂಚೂಣಿಯಲ್ಲಿದ್ದ ನಾಯಕರನ್ನು ಹಿಂದಿಕ್ಕಿ ಬಸವರಾಜ್ ಬೊಮ್ಮಾಯಿ ನೇಮಕವಾಗಿದ್ದಾರೆ. ಈ ಮೂಲಕ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಶಿಗ್ಗಾಂವಿ ಕ್ಷೇತ್ರದ ಶಾಸಕ ಬಸವರಾಜ್ ಬೊಮ್ಮಾಯಿ ಅಯ್ಕೆಯಾಗಿದ್ದಾರೆ.

ಸುಮಾರು ಒಂದು ವರ್ಷಗಳ ಕಾಲ ನಡೆದ ಮುಖ್ಯಮಂತ್ರಿ ಬದಲಾವಣೆ ಚರ್ಚೆ, ಡ್ರಾಮಾಗಳ ಬಳಿಕ ನೂತನ ಸಿಎಂ ಆಯ್ಕೆಯಾಗಿದೆ. ಮಂಗಳವಾರ ಸಂಜೆ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ನೇಮಕವಾಗಿದ್ದಾರೆ. ಹೀಗಾಗಿ ನೂತನ ಸಿಎಂ ಬೊಮ್ಮಾಯಿ ಎದುರಿಗೆ ಸಾಕಷ್ಟು ಸವಾಲುಗಳಿವೆ. ಅವುಗಳನ್ನು ಹೇಗೆ ಎದುರಿಸುತ್ತಾರೆ, ಈ ಸರ್ಕಾರಕ್ಕೆ ಉಳಿದಿರುವ 20 ತಿಂಗಳುಗಳ ಕಾಲವನ್ನು ಹೇಗೆ ನಿಭಾಯಿಸುತ್ತಾರೆ ಎನ್ನುವುದಕ್ಕೆ ಕಾಲವೇ ಉತ್ತರಿಸಬೇಕಿದೆ.

ಹಾಗಾದರೆ ಬೊಮ್ಮಾಯಿ ಎದುರಿರುವ ಸವಾಲುಗಳೇನು?

ಕಳೆದೊಂದು ವರ್ಷದಲ್ಲಿ ಬಿಜೆಪಿಯಲ್ಲಿ ಉಂಟಾಗಿದ್ದ ಒಡಕು, ಭಿನ್ನ ಮಾತುಗಳು ಒಂದೇ ದಿನ ಶಮನವಾಗುತ್ತದೆ ಎನ್ನುವುದು ಕಷ್ಟ. ಹೀಗಾಗಿ ಬಹಿರಂಗ ಹೇಳಿಕೆಗಳು, ಒತ್ತಡ ಹೇರುವ ತಂತ್ರಗಳು ಮತ್ತೆ ಮುನ್ನೆಲೆಗೆ ಬರದಂತೆ ನೋಡಿಕೊಳ್ಳುವ ಸವಾಲು ಬೊಮ್ಮಾಯಿ ಎದುರಿಗಿದೆ. ಹಿರಿಯ- ಕಿರಿಯ ಶಾಸಕರನ್ನು ಒಟ್ಟಿಗೆ ಕೊಂಡೊಯ್ಯುವ ಸವಾಲಿದೆ.

ಹೊಸದಾಗಿ ಸಂಪುಟ ರಚನೆ ಮಾಡಬೇಕಿದೆ: ಈ ಹಿಂದೆ ಬಿಎಸ್ ವೈ ಸಂಪುಟದಲ್ಲಿ ವಲಸಿಗ ಶಾಸಕರಿಗೆ ಸಚಿವ ಸ್ಥಾನ ನೀಡಬೇಕಾದ ಅನಿವಾರ್ಯತೆ ಇದ್ದ ಕಾರಣ ಜಾತಿವಾರು-ವಲಯವಾರು ನ್ಯಾಯ ನೀಡಿಲ್ಲ ಎಂಬ ಆರೋಪಗಳು ಕೇಳಿಬಂದಿತ್ತು. ಅದಲ್ಲದೆ ಹಲವು ಬಾರಿ ಶಾಸಕರಾದ ಹಿರಿಯರು ಮತ್ತು ಯುವ ಶಾಸಕರಿಗೆ ಸೂಕ್ತ ಸ್ಥಾನಮಾನ ನೀಡಿ, ಸಂಪುಟ ವಿಸ್ತರಣೆ ಸಮಯದಲ್ಲಿ ಅಸಮಾಧಾನಕ್ಕೆ ಕಾರಣವಾಗದಂತೆ ನೋಡಿಕೊಳ್ಳಬೇಕಾಗಿದೆ.

ಮುಖ್ಯಮಂತ್ರಿಯಾಗಿ ಬೊಮ್ಮಾಯಿ ನೇಮಕದಲ್ಲಿ ಬಿಎಸ್ ವೈ ಪಾತ್ರ ದೊಡ್ಡದಿದೆ ಎಂಬ ಮಾತುಗಳು ಈಗಾಗಲೇ ಕೇಳಿಬರುತ್ತಿದೆ. ಹೀಗಾಗಿ ಮತ್ತೆ ಅಧಿಕಾರದಲ್ಲಿ ಬಿಎಸ್ ವೈ ಹಿಡಿತವಿದೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎಂಬ ಆರೋಪಗಳು ಕೇಳಿಬರದಂತೆ ನೋಡಿಕೊಳ್ಳಬೇಕಿದೆ. ಇಲ್ಲದಿದ್ದರೆ ಬಿಎಸ್ ವೈ ವಿರುದ್ಧವಿದ್ದ ಬಣ ಮತ್ತೆ ಸಕ್ರಿಯವಾಗುವ ಸಾಧ್ಯತೆಯಿದೆ.

ಸದ್ಯ ಎದುರಾಗಿರುವ ಪ್ರವಾಹ, ಕೋವಿಡ್ ಮೂರನೇ ಅಲೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಮುಂದೆ ಎದುರಾಗಲಿರುವ ಬಿಬಿಎಂಪಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಸಮರ್ಥವಾಗಿ ಎದುರಾಗಿಸಬೇಕಿದೆ. ಅದೇ ರೀತಿ 2023ರ ವಿಧಾನಸಭೆ ಚುನಾವಣೆಯ ವೇಳೆ ಸರ್ಕಾರದ ಇಮೇಜ್ ಹೆಚ್ಚಿಸಿ ಆತ್ಮವಿಶ್ವಾಸದಿಂದ ಚುನಾವಣೆ ಎದುರಿಸಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.