ನಾಳೆ ನೂತನ ಶಾಸಕರ ಪ್ರಮಾಣ ವಚನ
Team Udayavani, Dec 21, 2019, 3:00 AM IST
ಬೆಂಗಳೂರು: ಇತ್ತೀಚೆಗೆ ನಡೆದ ಉಪ ಚುನಾವಣೆ ಯಲ್ಲಿ ಆಯ್ಕೆಯಾಗಿರುವ ನೂತನ ಶಾಸಕರಿಗೆ ಭಾನುವಾರ (ಡಿ.22) ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜಿಸಲಾಗಿದೆ.
ಸಾಮಾನ್ಯವಾಗಿ ಉಪ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ಸ್ಪೀಕರ್ ಕೊಠಡಿಯಲ್ಲಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಆದರೆ, ಹೊಸದಾಗಿ ಆಯ್ಕೆಯಾದ 15 ಶಾಸಕರ ಕ್ಷೇತ್ರಗಳಿಂದ ಅಭಿಮಾನಿಗಳುಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಪ್ರಮಾಣ ವಚನ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹೇಳಲಾಗಿದೆ.
ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಅರುಣ್ಕುಮಾರ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಟಾರ್, ಆನಂದ್ಸಿಂಗ್, ಗೋಪಾಲಯ್ಯ, ನಾರಾಯಣಗೌಡ, ಎಸ್. ಟಿ.ಸೋಮಶೇಖರ್, ಬೈರತಿ ಬಸವರಾಜ್, ಡಾ.ಕೆ.ಸುಧಾಕರ್, ಕಾಂಗ್ರೆಸ್ನಿಂದ ಅರ್ಷದ್ ರಿಜ್ವಾನ್, ಎಚ್.ಪಿ.ಮಂಜುನಾಥ್, ಪಕ್ಷೇತರರಾಗಿ ಶರತ್ ಬಚ್ಚೇಗೌಡ ಆಯ್ಕೆಯಾಗಿದ್ದಾರೆ.