ರಾಜ್ಯೋತ್ಸವದ ಹೊತ್ತಿಗೆ ಕನ್ನಡ ಭಾಷೆಗೆ ಹೊಸ ಬಲ?

ಪದ ಕಣಜ, ದೇಸೀಕರಣ ಯೋಜನೆ ಜಾರಿಗೆ ಸಿದ್ಧತೆ

Team Udayavani, Oct 2, 2020, 5:59 AM IST

ರಾಜ್ಯೋತ್ಸವದ ಹೊತ್ತಿಗೆ ಕನ್ನಡ ಭಾಷೆಗೆ ಹೊಸ ಬಲ?

ಸಾಂದರ್ಭಿಕ ಚಿತ್ರ

ಬೆಂಗಳೂರು: ಕನ್ನಡದ ಎಲ್ಲ ನಿಘಂಟುಗಳು ಹಾಗೂ ಪದಕೋಶಗಳು ಒಂದೇ ಡಿಜಿಟಲ್‌ ವೇದಿಕೆಯಲ್ಲಿ ದೊರೆಯುವ ಹಾಗೂ ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕಾಗಿ ಇಂಗ್ಲಿಷ್‌ಗೆ ಪರ್ಯಾಯ ಕನ್ನಡ ಪದ ಬಳಸುವಂತೆ ಪ್ರೇರೇಪಿಸುವ ಉದ್ದೇಶದ ಪದ ಕಣಜ ಹಾಗೂ ದೇಸೀಕರಣ ಯೋಜನೆಯನ್ನು ಕರ್ನಾಟಕ ರಾಜ್ಯೋತ್ಸವದ ಹೊತ್ತಿಗೆ ಜಾರಿಗೆ ತರಲು ಸಿದ್ಧತೆ ನಡೆಯುತ್ತಿದೆ.

ಡಿಜಿಟಲ್‌ ಕ್ರಾಂತಿಯ ಯುಗದಲ್ಲಿ ಶಾಸ್ತ್ರೀಯ ಭಾಷೆ ಹಿರಿಮೆಯ ಕನ್ನಡವನ್ನು ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ ರೂಪುಗೊಂಡ ಪದ ಕಣಜ ಹಾಗೂ ದೇಸೀಕರಣ ಯೋಜನೆಯ ಕಾರ್ಯ ಪ್ರಗತಿಯಲ್ಲಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಭಾಷೆಗಳಲ್ಲಿ ಒಂದಾಗಿರುವ ಕನ್ನಡದಲ್ಲಿ ಸಾಕಷ್ಟು ಪದ ಭಂಡಾರವಿದೆ. ಹಾಗಿದ್ದರೂ ಪೂರ್ಣ ಪ್ರಮಾಣದ ಕನ್ನಡ ಬಳಕೆಗೆ ಪದಗಳ ಕೊರತೆ ಕಾಣುತ್ತಿದೆ. ದಿನ ಕಳೆದಂತೆ ಕನ್ನಡ ಬಳಕೆ ಕಡಿಮೆಯಾಗಿರುವುದು ಇದಕ್ಕೆ ಕಾರಣವಿರಬಹುದು. ಆ ಹಿನ್ನೆಲೆಯಲ್ಲಿ ಇ-ಆಡಳಿತ ಇಲಾಖೆಯು “ಇ- ಕನ್ನಡ’ ಯೋಜನೆಯಡಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪದ ಕಣಜ ಹಾಗೂ ದೇಸೀ ಕರಣ ಯೋಜನೆಯನ್ನು ರೂಪಿಸಲಾಗಿದೆ.

ಯೋಜನೆ ಉದ್ದೇಶ
ಕನ್ನಡದ ಎಲ್ಲ ನಿಘಂಟು, ಪದಕೋಶ ಗಳನ್ನು ಒಂದೇ ವೇದಿಕೆಯಲ್ಲಿ ತರುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. 200ಕ್ಕೂ ಹೆಚ್ಚು ಹಳೆಗನ್ನಡ, ಹೊಸಗನ್ನಡ ನಿಘಂಟುಗಳನ್ನು ಗುರುತಿಸಲಾಗಿದೆ. ಡಿಜಿಟಲ್‌ ಸ್ವರೂಪದಲ್ಲಿರುವ ಹಲವು ನಿಘಂಟುಗಳನ್ನು ಆದ್ಯತೆ ಮೇರೆಗೆ ಪಟ್ಟಿ ಮಾಡಿ ಆನ್‌ಲೈನ್‌ ವೇದಿಕೆಯಲ್ಲಿ ಸೇರಿಸುವ ಕಾರ್ಯ ನಡೆದಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಪತ್ರಿಕಾ ಅಕಾಡೆಮಿ, ನವ ಕರ್ನಾಟಕ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಮೈಸೂರು ವಿಶ್ವವಿದ್ಯಾಲಯ, ಕೇಂದ್ರ ಸರಕಾರದ ಭಾರತೀಯ ಭಾಷಾ ಸಂಸ್ಥಾನ, ಕೇಂದ್ರ ಸರಕಾರದ ಸಿಎಸ್‌ಟಿಟಿ ಸಂಸ್ಥೆ ಸಹಿತ 40ಕ್ಕೂ ಹೆಚ್ಚು ನಿಘಂಟು, ಪದಕೋಶಗಳ ಹಕ್ಕುಸ್ವಾಮ್ಯ ಇಲಾಖೆಗೆ ತಲುಪಿದೆ.

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ
ಇನ್ನೊಂದೆಡೆ ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ಮುಂದಾಗಿದೆ. ಸರಕಾರದ ಯಾವುದೇ ಇಲಾಖೆ ನಿರ್ದಿಷ್ಟ ಇಂಗ್ಲಿಷ್‌ ಪದಕ್ಕೆ ಕನ್ನಡ ಪದ ನೀಡುವಂತೆ ಸಮಿತಿಯನ್ನು ಕೋರಬಹುದು. ಆಗ ಸಮಿತಿಯು ಈಗಾಗಲೇ ಕನ್ನಡ ಬಳಕೆ ಪದವಿದ್ದರೆ ಆ ಬಗ್ಗೆ ಮಾಹಿತಿ ಒದಗಿಸಲಿದೆ. ಒಂದೊಮ್ಮೆ ಸೂಕ್ತ ಪದವಿಲ್ಲದಿದ್ದರೆ ಚರ್ಚಿಸಿ ಹೊಸ ಪದ ಆಯ್ಕೆ ಮಾಡಿ ನೀಡಲಿದೆ. ಆ ಮೂಲಕ ಪದಕೋಶವನ್ನೂ ವೃದ್ಧಿಸುವುದು ಯೋಜನೆಯ ಉದ್ದೇಶ.

12 ಮಂದಿಯ ಸಮಿತಿ
ಈ ಯೋಜನೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಅಧ್ಯಕ್ಷತೆಯಲ್ಲಿ 12 ಮಂದಿಯ ಸಮಿತಿ ರಚನೆಯಾಗಿದೆ. ವಿ. ಕೃಷ್ಣ, ವಸುಧೇಂದ್ರ, ಓಂ ಶಿವಪ್ರಕಾಶ್‌, ಸಿ.ಪಿ. ರವಿಕುಮಾರ್‌, ರಜನೀಕಾಂತ್‌, ನಾಗವೇಣಿ ಎನ್‌. ಮಂಚಿ, ಡಾ| ಎನ್‌.ಎಸ್‌. ತಾರಾನಾಥ್‌, ಡಾ| ಟಿ.ವಿ. ವೆಂಕಟಾಚಲಶಾಸಿŒ, ಆರ್‌. ವಿ.ಎಸ್‌. ಸುಂದರಂ, ಭಾರತೀಯ ಭಾಷಾ ಸಂಸ್ಥಾನದ ಒಬ್ಬ ಪ್ರತಿನಿಧಿ ಸದಸ್ಯರಾಗಿದ್ದಾರೆ. ಇ- ಆಡಳಿತ (ಕನ್ನಡ ಕಂಪ್ಯೂಟಿಂಗ್‌ ಯೋಜನೆ) ಯೋಜನಾ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಪ್ರಯೋಜನಗಳು
ಕೋವಿಡ್‌-19 ಹಿನ್ನೆಲೆಯಲ್ಲಿ ಆನ್‌ಲೈನ್‌ ತರಗತಿ, ಸಂವಹನ, ಕಾರ್ಯ ನಿರ್ವಹಣೆ ಹೆಚ್ಚಾಗಿದೆ. ಇಂತಹ ಹೊತ್ತಿನಲ್ಲಿ ಆನ್‌ಲೈನ್‌ ಸಂವಹನದಲ್ಲೂ ಕನ್ನಡ ಬಳಕೆಗೆ ಹೆಚ್ಚು ನೆರವಾಗಲಿದೆ. ಸರಕಾರದ ಅಪ್ಲಿಕೇಷನ್‌ಗಳು, ಸಾಫ್ಟ್ವೇರ್‌ಗಳನ್ನು ಕನ್ನಡೀಕರಿಸಲು ಸಹಾಯವಾಗಲಿದೆ.

ಮಾಹಿತಿ ತಂತ್ರಜ್ಞಾನ ಬಳಕೆ ಯಾಗುತ್ತಿರುವಂತೆ ಡಿಜಿಟಲ್‌ ವೇದಿಕೆಯಲ್ಲಿ ಕನ್ನಡದ ಬಳಕೆಯೂ ಸಮಾನವಾಗಿ ಆಗಬೇಕು. ಆ ದೃಷ್ಟಿಯಿಂದ ಆಡಳಿತದಲ್ಲಿ ಎಲ್ಲರೂ ಹೆಚ್ಚಾಗಿ ಕನ್ನಡವನ್ನು ಬಳಸುವಂತೆ ಮಾಡುವ ದೃಷ್ಟಿಯಿಂದ ಈ ಪ್ರಯತ್ನ ಕೈಗೊಳ್ಳಲಾಗಿದೆ.
– ಬೇಳೂರು ಸುದರ್ಶನ್‌, ಮುಖ್ಯಮಂತ್ರಿಗಳ “ಇ- ಆಡಳಿತ’ ಸಲಹೆಗಾರರು

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.