ಒಂದಷ್ಟು ಮಕ್ಕಳಿಂದ ನ್ಯೂಸೆನ್ಸ್: ಎಲ್ಲವೂ ತಿಳಿಗೊಳ್ಳುತ್ತದೆ: ಸಚಿವ ಬಿ.ಸಿ ನಾಗೇಶ್
Team Udayavani, Feb 18, 2022, 12:12 PM IST
ಬೆಂಗಳೂರು: ಎಲ್ಲವೂ ತಿಳಿಗೊಳ್ಳುತ್ತಿದೆ, ಶಾಲಾ ಮಕ್ಕಳ ಹಾಜರಾತಿ ಚೆನ್ನಾಗಿದೆ, ಇಂದು ಯಾವುದೇ ಕಡೆ ಗಲಾಟೆ ಆಗಿಲ್ಲ, ಬೆಳಗ್ಗೆ 11 ಗಂಟೆಗೆ ನನಗೆ ಮಾಹಿತಿ ಬಂದಿದೆ, ಒಂದಷ್ಟು ಮಕ್ಕಳು ನ್ಯೂಸೆನ್ಸ್ ಕ್ರಿಯಟ್ ಮಾಡುತ್ತಿದ್ದಾರೆ, ಆದರೆ ಅವರು ಶಾಲೆ ಮಕ್ಕಳಲ್ಲ, ಬೇರೆಯವರು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಸಮವಸ್ತ್ರದಿಂದ ಬರಬೇಕು. ಡಿಗ್ರಿ ಕಾಲೇಜಿನಲ್ಲಿ ಸ್ವಲ್ಪ ಸಮಸ್ಯೆ ಇದೆ. ಮುಂದಿನ ದಿನಗಳಲ್ಲಿ ಅದು ಸರಿಹೋಗುತ್ತದೆ. ಯಾವುದೇ ಮಕ್ಕಳು ಹಿಜಾಬ್ ಕೇಸರಿ ಶಾಲು ಧರಿಸುವಂತಿಲ್ಲ. ಬುರ್ಖಾ ಬಿಚ್ಚಿಡಲು ಈಗಾಗಲೇ ಒಂದು ರೂಮ್ ಕೂಡ ವ್ಯವಸ್ಥೆ ಮಾಡ್ತಿದ್ದೇವೆ ಎಂದರು.
ಡಿಗ್ರಿ ಕಾಲೇಜು ನಲ್ಲಿ ಸಮವಸ್ತ್ರ ಇಲ್ಲ. 1 ರಿಂದ 12 ತರಗತಿಯವರೆಗೆ ಸಮವಸ್ತ್ರ ಇದೆ. ಹೀಗಾಗಿ ಇಂದು ಎಲ್ಲವೂ ಸರಿ ಹೋಗುತ್ತದೆ. ಮುಸ್ಲಿಂ ಸಮುದಾಯದ ಜೊತೆ ಶಾಂತಿ ಸಭೆ ನಡೆಸಿದ್ದೇವೆ. ಅವರು ಚರ್ಚೆ ಮಾಡಿದ್ದಾರೆ. ಅವರಿಗೂ ಶಾಲೆ ಪ್ರಾರಂಭವಾಗಬೇಕು. ಮಕ್ಕಳು ಶಿಕ್ಷಣ ಪಡೆಯಬೇಕು ಅಂತ ಅವರಿಗೂ ಮನಸ್ಸಿದೆ. ಎಲ್ಲವೂ ಸರಿ ದಾರಿಗೆ ಬರುತ್ತದೆ. ಕೋಟ್೯ ಆದೇಶ ಪಾಲನೆ ಮಾಡಿ ಎಂದು ಮುಖಂಡರಿಗೆ ಹೇಳಿದ್ದೇವೆ. ಮುಂದೆ ಯಾವುದೇ ತೊಂದರೆ ಆಗಲ್ಲ. ಎಲ್ಲವೂ ಸರಿ ಹೋಗಲಿದೆ ಎಂದರು.
ಇದನ್ನೂ ಓದಿ:ಮಾ.8 ಕ್ಕೆ ರಾಜ್ಯ ಬಜೆಟ್?:ರಾಜಸ್ವ ಕೊರತೆಯ ಹಗ್ಗದ ನಡಿಗೆ ನಿಭಾಯಿಸುವರೇ ಬೊಮ್ಮಾಯಿ
ಇಂದು ನಡೆದ ಗಲಾಟೆ ಬಗ್ಗೆ ವರದಿ ತೆಗೆದುಕೊಳ್ಳುತ್ತಿದ್ದೇವೆ. ಮಕ್ಕಳಿಗೆ ಶಿಕ್ಷಣ ತುಂಬಾ ಮುಖ್ಯ. ಹೀಗಾಗಿ ಮಕ್ಕಳಿಗೆ ಮನವೊಲಿಸುವ ಕೆಲಸ ಮಾಡುತ್ತೇವೆ. ಪೋಷಕರು ಸಹ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಪತ್ರ ಬಂದಿದೆ, ಪತ್ರ ನೋಡಿ ಉಪಯೋಗಿಸಿಕೊಳ್ಳುತ್ತೇವೆ. ಸುರೇಶ್ ಕುಮಾರ್ ಅವರ ಮಾತನ್ನು ಇಲಾಖೆ ಅಳವಡಿಸಿಕೊಳ್ಳುತ್ತೇವೆ. ಗಲಾಟೆ ಬಗ್ಗೆ ಮಾಹಿತಿ ಗೃಹ ಸಚಿವರು ಪಡೆಯುತ್ತಿದ್ದಾರೆ. ಮಕ್ಕಳ ಶಿಕ್ಷಣದ ದೃಷ್ಟಿಯಿಂದ ಗಲಾಟೆ ಆಗದೇ ಇರುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ