ನ್ಯಾ.ಎಚ್.ಜಿ. ರಮೇಶ್ ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿ
Team Udayavani, Oct 8, 2017, 11:30 AM IST
ಬೆಂಗಳೂರು: ರಾಜ್ಯ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಎಚ್.ಜಿ ರಮೇಶ್ ಅವರನ್ನು ನೇಮಕಗೊಳಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿಯವರು ಅಕ್ಟೋಬರ್ 9ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಹೈಕೋರ್ಟ್ನ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದ ನ್ಯಾ.ಎಚ್.ಜಿ ರಮೇಶ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನೇಮಕಗೊಳಿಸಿ ಅ.10ರಿಂದ ಜಾರಿಯಾಗುವಂತೆ ಆದೇಶ ಹೊರಡಿಸಲಾಗಿದೆ. ನ್ಯಾಯಮೂರ್ತಿ ಎಚ್.ಜಿ ರಮೇಶ್ ಅವರು 1982ರಿಂದ
2003ರವರೆಗೆ ರಾಜ್ಯ ಹೈಕೋರ್ಟ್ ವಕೀಲರಾಗಿ, 2003ರಿಂದ 14 ವರ್ಷಗಳ ಕಾಲ ಹೈಕೋರ್ಟ್
ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ, 2003ರ ಮೇ 12ರಂದು ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿ ಆಗಿ ನೇಮಕಗೊಂಡರು.
2014ರ 24ರಂದು ಖಾಯಂ ನ್ಯಾಯಮೂರ್ತಿ ಆಗಿ ನೇಮಕಗೊಂಡಿದ್ದರು. ನ್ಯಾಯಮೂರ್ತಿ ಎಚ್.ಜಿ ರಮೇಶ್ ಅವರನ್ನು ಇದೇ ವರ್ಷ ಜನವರಿ- ಫೆಬ್ರವರಿಯಲ್ಲಿ ಮದ್ರಾಸ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕೊಲಿಜಿಯಂ ನೇಮಕ ಮಾಡಿತ್ತು. ಆದರೆ, ನ್ಯಾಯಮೂರ್ತಿಗಳು ಇದನ್ನು ಒಪ್ಪಿಕೊಂಡಿರಲಿಲ್ಲ.
ಬೀಳ್ಕೊಡುಗೆ ಸಮಾರಂಭವಿಲ್ಲ: ಅಕ್ಟೋಬರ್ 9ರಂದು ಸೇವೆಯಿಂದ ನಿವೃತ್ತರಾಗಲಿರುವ ಹೈಕೋರ್ಟ್ ಮುಖ್ಯ
ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿಗೆ ಬೀಳ್ಕೊಡುಗೆ ನೀಡದಿರಲು ವಕೀಲರ ಪರಿಷತ್ ಹಾಗೂ ಬೆಂಗಳೂರು
ವಕೀಲರ ಸಂಘ ನಿರ್ಧರಿಸಿದೆ ಎಂದು ಹೈಕೋರ್ಟ್ ಮೂಲಗಳು ತಿಳಿಸಿವೆ. ಮುಖ್ಯ ನ್ಯಾಯಮೂರ್ತಿ ಎಸ್.ಕೆ.
ಮುಖರ್ಜಿ ಸೇವಾ ಅವಧಿಯಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಕೆಲವು ಆರೋಪಗಳನ್ನು ಎದುರಿಸಿದ್ದಾರೆ ಹಾಗೂ ಇನ್ನಿತರ
ಕಾರಣಗಳಿಂದ ಅವರಿಗೆ ಬೀಳ್ಕೊಡುಗೆ ನೀಡದಿರುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹಿರಿಯ ವಕೀಲರೊಬ್ಬರು
ತಿಳಿಸಿದರು.
ಸಾಮಾನ್ಯವಾಗಿ ಹೈಕೋರ್ಟ್ ನ್ಯಾಯಮೂರ್ತಿಗಳು ನಿವೃತ್ತಿಯಾಗುವ ಮೂರು ದಿನಗಳ ಮುಂಚೆ ಬೀಳ್ಕೊಡುಗೆ
ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಬಹುದು ಎಂದು ವಕೀಲರ ಪರಿಷತ್ಗೆ ಹೈಕೋರ್ಟ್ ರಿಜಿಸ್ಟ್ರಾರ್ ಕಡೆಯಿಂದ ಪತ್ರ ಬರುವುದು ರೂಢಿಯಲ್ಲಿದೆ. ಆದರೆ, ಎಸ್.ಕೆ ಮುಖರ್ಜಿ ಬೀಳ್ಕೊಡುಗೆ ನೀಡುವ ಸಂಬಂಧ ಅಂತಹ ಪತ್ರ ಬಂದಿಲ್ಲ
ಎಂದು ವಕೀಲರ ಪರಿಷತ್ನ ಸದಸ್ಯರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ