ನಾಳೆಯಿಂದ ರಾತ್ರಿ ಕರ್ಫ್ಯೂ
Team Udayavani, Apr 9, 2021, 7:00 AM IST
ಬೆಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಉಡುಪಿ, ಮಣಿಪಾಲ ಸಹಿತ 8 ನಗರಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಸಿಎಂ ಯಡಿಯೂರಪ್ಪ ಗುರುವಾರ ಘೋಷಣೆ ಹೊರಡಿಸಿದ್ದಾರೆ.
ಶನಿವಾರ ರಾತ್ರಿಯಿಂದ ಇದು ಜಾರಿಗೆ ಬರಲಿದ್ದು, ಶುಕ್ರವಾರ ಸರಕಾರ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆಗಳಿವೆ.
ಕೋವಿಡ್ ನಿಯಂತ್ರಣ ಕುರಿತು ವಿವಿಧ ರಾಜ್ಯಗಳ ಸಿಎಂಗಳ ಜತೆಗೆ ಪ್ರಧಾನಿ ಮೋದಿ ಗುರುವಾರ ವೀಡಿಯೋ ಸಂವಾದ ನಡೆಸಿದರು. ಇದರ ಬೆನ್ನಲ್ಲೇ ಮಾಧ್ಯಮಗಳ ಜತೆಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದರಂತೆ ಎ. 10ರಿಂದ ಎ. 20ರ ವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಿದ್ದೇವೆ. ಇದು ಬೆಂಗ ಳೂರು, ಮಂಗಳೂರು, ಉಡುಪಿ, ಮಣಿಪಾಲ, ಕಲ ಬುರಗಿ, ಮೈಸೂರು, ಬೀದರ್, ತುಮಕೂರು ನಗರ ಗಳಿಗೆ ಮಾತ್ರ ಅನ್ವಯವಾಗಲಿದೆ ಎಂದರು.
ಪೂರ್ಣ ಪ್ರಮಾಣದ ಕರ್ಫ್ಯೂ ಜಾರಿಯಾಗ ಬಾರದು ಎಂದಿದ್ದರೆ ಜನರು ಸಹಕಾರ ನೀಡ ಬೇಕು. ಮಾಸ್ಕ್ ಹಾಕಿಕೊಳ್ಳಬೇಕು. ದೈಹಿಕ ಅಂತರ ಕಾಪಾಡಿ ಕೊಳ್ಳಬೇಕು, ಸ್ಯಾನಿಟೈಸರ್ ಹಾಕಿಕೊಳ್ಳಬೇಕು. ಈಗ ಮೊದಲ ಹಂತದಲ್ಲಿ ನಗರ ಕೇಂದ್ರಗಳಲ್ಲಿ ಮಾತ್ರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದೇವೆ. ಇದರಿಂದ ಕೊರೊನಾ ಎಷ್ಟು ನಿಯಂತ್ರಣಕ್ಕೆ ಬರುತ್ತದೆ ಎನ್ನುವುದನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಏನೇನು ಬಂದ್? :
ಸಾರ್ವಜನಿಕರಿಗೆ ಯಾವುದೇ ಸೇವೆಗಳು ಸ್ಥಗಿತಗೊಳ್ಳುವುದಿಲ್ಲ. ರಾತ್ರಿ ಹೊತ್ತಿನಲ್ಲಿ ಜನರ ಅನಗತ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ. ಹೋಟೆಲ್, ಬಾರ್, ಪಬ್, ನೈಟ್ ಪಾರ್ಟಿ, ರೆಸ್ಟೋ ರೆಂಟ್ ಗಳು, ಸಿನೆಮಾ ಹಾಲ್ಗಳನ್ನು ಬಂದ್ ಮಾಡಲಾಗುತ್ತದೆ. ಅಂತರ್ ಜಿಲ್ಲಾ ಬಸ್ ಸೇವೆ ಇರುತ್ತದೆ. ಮದುವೆ ಸಮಾ ರಂಭ ಗಳನ್ನು ಜನರು ಇತಿಮಿತಿಯಲ್ಲಿ ನಡೆಸ ಬೇಕೆಂದು ಸಿಎಂ ಮನವಿ ಮಾಡಿದ್ದಾರೆ.
ಲಾಕ್ಡೌನ್ ಬೇಡ :
ಲಾಕ್ಡೌನ್ ಹೇರಬೇಕಾದ ಅಗತ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಸೋಂಕಿನ 2ನೇ ಅಲೆಯು ಮೊದಲ ಅಲೆಗಿಂತಲೂ ಅಪಾಯಕಾರಿ ಎಂಬುದನ್ನು ಒತ್ತಿ ಹೇಳಿದ್ದು, ನಿರ್ಲಕ್ಷ್ಯ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ. ಗುರುವಾರ ಬಿಎಸ್ವೈ ಸೇರಿದಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳ ಜತೆಗೆ ನಡೆಸಿದ ಸಂವಾದ ಸಂದರ್ಭದಲ್ಲಿ ಮೋದಿ ಈ ಮಾತು ಹೇಳಿದ್ದಾರೆ.
ಎ. 11ರಿಂದ “ಲಸಿಕೆ ಉತ್ಸವ’ :
ಎ. 11ರಿಂದ ಎ. 14ರ ವರೆಗೆ 4 ದಿನ ದೇಶಾದ್ಯಂತ “ಲಸಿಕೆ ಉತ್ಸವ’ ನಡೆಸುವಂತೆ ಮೋದಿ ಕರೆ ನೀಡಿದ್ದಾರೆ. ಈ ಅವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಫಲಾನುಭವಿಗಳಿಗೆ ಲಸಿಕೆ ವಿತ ರಿಸು ವಂತೆ ಮಾಡೋಣ. ಈ ಮೂಲಕ ಲಸಿಕೆ ವ್ಯರ್ಥವಾಗುವುದನ್ನು ತಡೆಯೋಣ ಎಂದಿ ದ್ದಾರೆ. ಜತೆಗೆ 45 ವರ್ಷ ಮೇಲ್ಪಟ್ಟವ ರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಉತ್ತೇಜನ ನೀಡಬೇಕು ಎಂದು ಮೋದಿ ಹೇಳಿದ್ದಾರೆ.
“ನೈಟ್’ ಬದಲು “ಕೋವಿಡ್’ ಕರ್ಫ್ಯೂ :
“ನೈಟ್ ಕರ್ಫ್ಯೂ’ ಎಂಬ ಪದ ಬಳಕೆ ಬೇಡ ಎಂದಿರುವ ಮೋದಿ, ಇನ್ನು ಮುಂದೆ ಅದನ್ನು “ಕೋವಿಡ್ ಕರ್ಫ್ಯೂ’ ಎಂದು ಬಳಸಿ. ಆಗ ಜನರು ಸೋಂಕಿನ ಬಗ್ಗೆ ಎಚ್ಚರದಿಂದ ಇರುತ್ತಾರೆ ಎಂದಿದ್ದಾರೆ.
ನೈಟ್ ಕರ್ಫ್ಯೂ ವೇಳೆ ರಾತ್ರಿ ವಾಣಿಜ್ಯ ಚಟುವಟಿಕೆಗಳಿಗೆ ಮಾತ್ರ ಕಡಿವಾಣ ಬೀಳಲಿದ್ದು, ಸಾರಿಗೆ ಸೇವೆ ಮತ್ತು ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆ ಇಲ್ಲ. – ಡಾ| ಸುಧಾಕರ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್