ನಿಮ್ಹಾನ್ಸ್ ಆಸ್ಪತ್ರೆಯ ಎದುರು ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
Team Udayavani, Jul 20, 2020, 12:45 PM IST
ಬೆಂಗಳೂರು: ಕೋವಿಡ್ ಪಾಸಿಟಿವ್ ಆದ ಗುತ್ತಿಗೆ ಕಾರ್ಮಿಕರಿಗೆ ಕೋವಿಡ್ ಕೇರ್ ಕೇಂದ್ರಗಳಲ್ಲಾಗಲಿ ಅಥವಾ ಸಾಂಸ್ಥಿಕ ಕ್ವಾರಂಟೈನ್ ಸೌಲಭ್ಯತೆಯಾಗಲಿ ನೀಡದೆ ಅವರನ್ನು ಮನೆಗೆ ಕಳುಹಿಸಲಾಗುತ್ತಿದೆ. ನಿಮ್ಹಾನ್ಸ್ ಒಂದು ಕೋವಿಡ್ ಚಿಕಿತ್ಸೆ ಆಸ್ಪತ್ರೆಯಾಗಿ ಸರಕಾರವು ಗುರುತಿಸಿದ್ದು, ಇದೇ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಗುತ್ತಿಗೆ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.
ಈ ಕಾರ್ಮಿಕರು ಚಿಕ್ಕ ಮನೆಗಳಲ್ಲಿ ವಾಸವಾಗಿದ್ದು, ಮನೆಯಲ್ಲಿ ಕ್ವಾರಂಟೈನ್ ಆಗಲು ಸಾಧ್ಯವಿಲ್ಲ. ಆಸ್ಪತ್ರೆಯ ಖಾಯಂ ನೌಕರರುಗಳಿಗೆ ಎಲ್ಲಾ ಸೌಲಭ್ಯತೆಗಳನ್ನು ನೀಡಲಾಗುತ್ತದೆ. ಆದರೆ ಗುತ್ತಿಗೆ ಕಾರ್ಮಿಕರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ನೂರಾರು ಗುತ್ತಿಗೆ ಕಾರ್ಮಿಕರು ನಿಮ್ಹಾನ್ಸ್ ಆವರಣದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕಾರ್ಮಿಕರಿಗೆ ಆಸ್ಪತ್ರೆಯಲ್ಲಿ ದಾಖಲಿಸುವುದು, ಸರಿಯಾದ ಚಿಕಿತ್ಸೆ, ಸುರಕ್ಷಾ ಕವಚಗಳು, ಪಿಪಿಇ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನಾ ಪ್ಯಾಕೇಜ್ ಅಡಿಯಲ್ಲಿ 50 ಲಕ್ಷ ರೂ. ವಿಮೆ, ಕೋವಿಡ್ ಕೆಲಸದ ನಂತರ ಬಟ್ಟೆ ಬದಲಾಯಿಸಲು ಮತ್ತು ಸ್ನಾನ ಮಾಡಲು ಕೊಠಡಿ, ಲಾಕ್ ಡೌನ್ ಸಮಯದ ವೇತನ ಮತ್ತು ಕೋವಿಡ್ ಕೆಲಸದ ಮಾಡುತ್ತಿರುವ ಕಾರಣ ಒಂದು ತಿಂಗಳಷ್ಟು ವಿಶೇಷ ವೇತನವನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಬೇಡಿಕೆಗಳನ್ನು ಇಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ