ಕೊಟ್ಟೂರು ತೇರು ಉರುಳಿ ಒಂಬತ್ತು ಜನರಿಗೆ ಗಾಯ


Team Udayavani, Feb 22, 2017, 10:38 AM IST

ratha.jpg

ಕೊಟ್ಟೂರು / ಕೂಡ್ಲಿಗಿ: ಕೊಟ್ಟೂರಿನ ಐತಿಹಾಸಿಕ  ಶ್ರೀ ಗುರುಬಸವೇಶ್ವರ ಸ್ವಾಮಿ ರಥೋತ್ಸವ ನಡೆಯುತ್ತಿದ್ದ ವೇಳೆ ತೇರು ಉರುಳಿ ಬಿದ್ದು 9 ಜನರು ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಂಜೆ 5.12ಕ್ಕೆ ರಥೋತ್ಸವ ಆರಂಭವಾಗಿತ್ತು. ಗ್ರಾಮದ ಪ್ರಮುಖ ರಾಜಬೀದಿಗಳಲ್ಲಿ ಸುಮಾರು 300 ಅಡಿ ದೂರಕ್ಕೆ ಸಂಚರಿಸಿ ಮತ್ತೂಂದು ತುದಿಯಲ್ಲಿನ ಬಸವಣ್ಣನ ದೇವಸ್ಥಾನದ ಪಾದಗಟ್ಟೆಗೆ ತೆರಳಿ ಮರಳುವಾಗ ರಥಬೀದಿಯಲ್ಲಿ ಸಂಜೆ 6.52ರ ಸುಮಾರಿಗೆ ರಥದ ಗಾಲಿಗಳ ಅಚ್ಚು ಮುರಿದು ಉರುಳಿ ಬಿದ್ದಿದೆ.  

ಬಿದ್ದಿರುವ ರಥವನ್ನು ಎತ್ತಲು ಕ್ರೇನ್‌ ತರಿಸಲಾ ಗಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳದ ಸಮೀಪಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ರಥದ ಅಡಿ ಸಿಲುಕಿದ್ದ ಹತ್ತಾರು ಜನರನ್ನು ಪೊಲೀಸರು, ಗೃಹರಕ್ಷಕ ದಳದವರು ಮತ್ತು ಸ್ಥಳೀಯರು ಸುರಕ್ಷಿತವಾಗಿ ಹೊರತೆಗೆಯಲು ಶ್ರಮಿಸಿದರು.

ತೇರು ಎಳೆಯುವ ದಾರಿಯಲ್ಲಿ ಪ್ರತಿ ವರ್ಷ ದಂತೆ ಈ ವರ್ಷವೂ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಸಂಭಾವ್ಯ ದೊಡ್ಡ ಅನಾಹುತ ತಪ್ಪಿದೆ. 

ರಾಜ್ಯದ ಅತಿ ಎತ್ತರದ ರಥ
ಸುಮಾರು 110 ವರ್ಷಗಳಷ್ಟು ಹಳೆಯದಾದ ಈ ತೇರು ಬಹಳ ಸುಂದರವಾಗಿದೆ. ತೇರುಗಡ್ಡೆಯನ್ನು ಹೊರಹಾಕಿದ ಬಳಿಕ ಕೂಡ್ಲಿಗಿ ವಠಾರದ ಸುಮಾರು 50ಕ್ಕೂ ಹೆಚ್ಚು ಆಯಾಗಾರರು 20 ದಿನ ಹಗಲಿರುಳು ಶ್ರಮಿಸಿ ಪ್ರತಿವರ್ಷವೂ ರಥ ಕಟ್ಟಿ ಪೂರ್ಣಗೊಳಿಸುತ್ತಾರೆ. ಸುಮಾರು 25 ಅಡಿ ಎತ್ತರವಿರುವ ತೇರುಗಡ್ಡೆ ತೇಗದ ಮರದಿಂದ ನಿರ್ಮಿತವಾಗಿದೆ. ತಾಳೆಯ ಮರಗಳಿಂದ ಎಂಟು ಅಡಿ ಎತ್ತರದ ದಿನ್ನಿಗಳನ್ನು ತಯಾರಿಸಿ, ರಥದ ಮೇಲೆ ನಾಲ್ಕು ಅಂಕಣಗಳನ್ನು ನಿರ್ಮಿಸುತ್ತಾರೆ. 15 ಅಡಿ ಎತ್ತರದ ಜಲ್ಲಿಯ ಮೇಲೆ ಐದು ಅಡಿ ಎತ್ತರವಿರುವ ಕಳಸಾರೋಹಣ ಮಾಡುತ್ತಾರೆ.

ಇವೆಲ್ಲವೂ ಸೇರಿ 60ಕ್ಕೂ ಹೆಚ್ಚು ಅಡಿ ಎತ್ತರವಾಗುವ ಈ ತೇರು ರಾಜ್ಯದಲ್ಲೇ ದೊಡ್ಡದೆಂಬ ಖ್ಯಾತಿಯನ್ನೂ ಹೊಂದಿದೆ. ರಥ ಎಳೆಯಲು ಪ್ರತಿ ವರ್ಷವೂ ಹೊರ ರಾಜ್ಯದಿಂದ ಮಿಣಿ (ಹಗ್ಗ) ತರಿಸುತ್ತಾರೆ. ಈ ತೇರಿಗೆ ಆರು ಗಾಲಿಗಳಿವೆ. ಅವುಗಳನ್ನು ಆರು ವರ್ಷಗಳಿಗೊಮ್ಮೆ ಬದಲಿಸಲಾಗುತ್ತದೆ. ಈ ಸಲವೂ ದುರಸ್ತಿ ಮಾಡಿಸಲಾಗಿತ್ತು.ರಥೋತ್ಸವಕ್ಕೆ ಮೊದಲು ಪರಿಶೀಲನೆಯನ್ನೂ ಮಾಡಲಾಗಿತ್ತು ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.

ಗಾಯಗೊಂಡವರ ವಿವರ ಇಂತಿದೆ:
ಗುರುಬಸವವಾಜ (45), ಚೇತನ್‌ (21), ಮರಿಯಾಬಿ (65), ದೇವರಾಜ (25), ಚಂದ್ರಶೇಖರ ಗೌಡ (61), ಕರಿಬಸಪ್ಪ (18), ರಾಘವೇಂದ್ರ (19), ಸಿದ್ದನಗೌಡ (71), ಬಸವರಾಜ (33), ಜತ್ತೂರಯ್ಯ (60), ಕೊಟ್ಟೂರಸ್ವಾಮಿ (45), ಗುರುಸಿದ್ದಯ್ಯ (60), ಗುಜ್ಜಪ್ಪ (18), ಅಂಬಿಕಾ (19), ಅಜ್ಜಯ್ಯ (19).

ಅಂಬಿಕಾ ಹಾಗೂ ಗುರುಬಸವರಾಜ್‌ ತಲೆಗೆ ಪೆಟ್ಟು ಬಿದ್ದಿದ್ದು, ಚಿಂತಾಜನಕ ಸ್ಥಿತಿಯಲ್ಲಿ ದಾವಣಗೆರೆಯ ಚಿಗಟೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಐವರನ್ನು ದಾವಣಗೆರೆಗೆ ದಾಖಲಿಸಲಾಗಿದೆ. ಮರಿಯಾಬಿ ಅವರನ್ನು ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಸಂಸದ ಬಿ. ಶ್ರೀರಾಮುಲು, ಶಾಸಕರಾದ ಭೀಮಾನಾಯ್ಕ, ಬಿ.ಎಂ. ನಾಗರಾಜ್‌ ಮೊದಲಾದ ರಾಜಕೀಯ ಮುಖಂಡರೂ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಡಿಎಚ್‌ಒ, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಇತರ ವೈದ್ಯರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳ ಉಪಚಾರದಲ್ಲಿ ಸ್ವಯಂಪ್ರೇರಿತರಾಗಿ ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.