ಮಂಗಳೂರಲ್ಲಿ ನಿಫಾ ಸೋಂಕು ಪತ್ತೆಯಾಗಿಲ್ಲ-ಆತಂಕ ಬೇಡ; ಜಿಲ್ಲಾಧಿಕಾರಿ
Team Udayavani, May 24, 2018, 6:16 PM IST
ಮಂಗಳೂರು: ನಗರದ ಆಸ್ಪತ್ರೆಯಲ್ಲಿ ದಾಖಲಾದ ಶಂಕಿತ ನಿಫಾ ಬಾಧಿತರಿಬ್ಬರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಇಬ್ಬರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯ ಪರೀಕ್ಷೆಯಲ್ಲಿ ಋಣಾತ್ಮಕ ವರದಿ ಬಂದಿದೆ. ಹೀಗಾಗಿ ಜಿಲ್ಲೆಯಲ್ಲಿ ನಿಫಾ ಸೋಂಕು ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬ್ಬರು ಕೋಝಿಕೋಡ್ ಮಹಿಳೆ ಹಾಗೂ ಇನ್ನೊಂದು ಪ್ರಕರಣದಲ್ಲೂ ಗಂಟಲಿನ ದ್ರವ ಮತ್ತು ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಲಾಗಿತ್ತು.
ಆದರೆ ಇದೀಗ ವರದಿ ಬಂದಿದ್ದು, ನಿಫಾ ಸೋಂಕು ಪತ್ತೆಯಾಗಿಲ್ಲ ಎಂಬುದು ದೃಢಪಟ್ಟಿದೆ ಎಂದು ವಿವರಿಸಿದರು. ಕೇರಳದಲ್ಲಿ ಖರ್ಜೂರ ಜಾತಿಗೆ ಸೇರಿದ ತಾಳೆ ಮರದಿಂದ ತೆಗೆದ ಸೇಂದಿ ಸೇವನೆಯಿಂದ ಸೋಂಕು ತಗುಲಿರುವ ಶಂಕೆ ಇದೆ. ಬಾವಲಿಗಳೂ ಇದಕ್ಕೆ ಕಾರಣವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿಯೂ ಶೇಂದಿ ನಿಷೇಧಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು