ಬೊಮ್ಮಾಯಿ ನಾಯಕತ್ವ ವಹಿಸಿದ ಒಂದೇ ತಿಂಗಳಲ್ಲಿ ಸಿಕ್ಸರ್ ಹೊಡೆದಿದ್ದಾರೆ: ಮುರುಗೇಶ್ ನಿರಾಣಿ
Team Udayavani, Sep 6, 2021, 3:10 PM IST
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ನಾಯಕತ್ವ ವಹಿಸಿದ ಒಂದೇ ತಿಂಗಳಲ್ಲಿ ಸಿಕ್ಸರ್ ಹೊಡೆದಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಪಾಲಿಕೆ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ಬೆಳಗಾವಿ ಮತ್ತು ಹುಬ್ಬಳ್ಳಿ ಮಹಾನಗರ ಫಲಿತಾಂಶ ಸಂಪೂರ್ಣ ಬಹುಮತ ಬಂದಿದೆ. ಕಲಬುರ್ಗಿಯಲ್ಲಿ 23 ಸ್ಥಾನ ಬಿಜೆಪಿ ಗೆದ್ದಿದೆ. ಸಂಸದರು ಹಾಗೂ ಶಾಸಕರು ಇರುವುದರಿಂದ ಮೊದಲ ಬಾರಿಗೆ ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುತ್ತೇವೆ ಎಂದರು.
ರಾಜ್ಯದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನ, ಬೊಮ್ಮಾಯಿ ನಾಯಕತ್ವ ಕೇಂದ್ರದ ಮೋದಿ ನಾಯಕತ್ವದ ಬಗ್ಗೆ ರಾಜ್ಯದ ಜನರು ವಿಶ್ವಾಸ ಇಟ್ಟು ಬೆಂಬಲ ನೀಡಿದ್ದಾರೆ. ಮುಂಬರುವ ಎರಡು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ ಎಂದರು.
ಇದನ್ನೂ ಓದಿ:ಪಾಲಿಕೆ ಚುನಾವಣೆಯಲ್ಲಿ ನಮಗೆ ಪ್ರಥಮ ಸೂಚನೆ ಸಿಕ್ಕಿದೆ: ಸಿಎಂ ಬೊಮ್ಮಾಯಿ
ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಇನ್ನೂ ಚರ್ಚೆ ನಡೆಯಾಗಿಲ್ಲ. ಯಡಿಯೂರಪ್ಪ ನಮ್ಮ ನಾಯಕರು ಅವರ ಮಾರ್ಗದರ್ಶನದಲ್ಲಿಯೆ ನಾವು ಚುನಾವಣೆ ಎದುರಿಸುತ್ತಿದ್ದೇವೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಚುನಾವಣೆ ಪ್ರಚಾರದಲ್ಲಿ ಪಾಲ್ಗಳ್ಳದಿದ್ದರೂ ನಾವು ಎರಡನೇ ಹಂತದ ನಾಯಕರು ಪ್ರಚಾರ ಮಾಡಿ ಗೆದ್ದಿದ್ಸೇವೆ. ಇದರಿಂದ ನಮ್ಮ ಶಕ್ತಿ ಎಷ್ಟಿದೆ ಅಂತ ನೋಡಿ. ಕಾಂಗ್ರೆಸ್ ನ ಎಲ್ಲ ಹಂತದ ನಾಯಕರು ಪ್ರಚಾರ ಮಾಡಿದ್ದರೂ ಅವರ ಪರಿಸ್ಥಿತಿ ಈ ರೀತಿ ಇದೆ ಎಂದು ನಿರಾಣಿ ಹೇಳಿದರು.
ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ಅಮಿತ್ ಶಾ ಹೊಗಳಿದ್ದಾರೆ. ಅವರನ್ನು ಎಲ್ಲಿಯೂ ಬಿಟ್ಟು ಕೊಟ್ಟಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿ ಇದ್ದಾಗ ಸಹಜವಾಗಿ ಅವರ ನಾಯಕತ್ವದಲ್ಲಿ ಅಂತ ಹೇಳಿದ್ದಾರೆ ಎಂದು ಶಾ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ