ನಿತ್ಯಾನಂದ ಹಳದಿಪುರ ಅವರಿಗೆ ಡಾ.ಮನಸೂರ ರಾಷ್ಟ್ರೀಯ ಸಂಗೀತ ಪ್ರಶಸ್ತಿ ಪುರಸ್ಕಾರ


Team Udayavani, Dec 28, 2021, 7:30 PM IST

ನಿತ್ಯಾನಂದ ಹಳದಿಪೂರ ಅವರಿಗೆ ಡಾ.ಮನಸೂರ ರಾಷ್ಟ್ರೀಯ ಸಂಗೀತ ಪ್ರಶಸ್ತಿ ಪುರಸ್ಕಾರ

ಧಾರವಾಡ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ|ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ಡಾ|ಮಲ್ಲಿಕಾರ್ಜುನ ಮನಸೂರ 111ನೇ ಜನ್ಮ ದಿನಾಚರಣೆ ಪ್ರಯುಕ್ತ ಕೊಡ ಮಾಡುವ 1 ಲಕ್ಷ ನಗದು ಒಳಗೊಂಡ ರಾಷ್ಟ್ರೀಯ ಪ್ರಶಸ್ತಿಗೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರಾದ ಮುಂಬಯಿಯ ಪಂ.ನಿತ್ಯಾನಂದ ಹಳದಿಪುರ ಭಾಜನರಾಗಿದ್ದಾರೆ.

ಇದಲ್ಲದೇ 24 ಸಾವಿರ ನಗದು ಒಳಗೊಂಡ ಯುವ ಪ್ರಶಸ್ತಿಗೆ ಧಾರವಾಡದ ಯುವ ಗಾಯಕಿ ಶಿವಾನಿ ಮಿರಜಕರ ಆಯ್ಕೆಯಾಗಿದ್ದು, 2022 ಜ.1 ರಂದು ಸಂಜೆ 5;30 ಗಂಟೆಗೆ ನಗರದ ಸೃಜನಾ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಗಮಿಸಲಿದ್ದಾರೆ. ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ವಿಧಾನ ಪರಿಷತ್ ಸದಸ್ಯರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಪ್ರಶಸ್ತಿ ಪ್ರದಾನದ ಬಳಿಕ ನಡೆಯುವ ಸಂಗೀತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಾದ ಪಂ.ನಿತ್ಯಾನಂದ ಹಳದಿಪೂರ ಅವರಿಂದ ಕೊಳಲು ವಾದನ ಹಾಗೂ ಶಿವಾನಿ ಮಿರಜಕರ ಗಾಯನ ಕಾರ್ಯಕ್ರಮ ಜರುಗಲಿದೆ. ಇದಲ್ಲದೇ ಡಿ.31 ರಂದು ಬೆಳಿಗ್ಗೆ 9 ಗಂಟೆಗೆ ಮನಸೂರ ಟ್ರಸ್ಟ್ ಆವರಣದ ಡಾ|ಮಲ್ಲಿಕಾರ್ಜುನ ಮನಸೂರ ಸಮಾಧಿಗೆ ಪೂಜೆ, ಸಂಗೀತ ಸೇವೆ ನಡೆಯಲಿದೆ. ಇದಾದ ಬಳಿಕ 10;30 ಗಂಟೆಗೆ ಮನಸೂರ ಗ್ರಾಮದ ಮಲ್ಲಿಕಾರ್ಜುನ ಮನಸೂರ ಅವರು ಹುಟ್ಟಿದ ಮನೆಯಲ್ಲಿ ಪುಷ್ಪಾರ್ಪಣೆ ಪೂಜಾ ಕಾರ್ಯಕ್ರವೂ ಜರುಗಲಿದೆ.

ಇದನ್ನೂ ಓದಿ : ಚುನಾವಣೆಯ ನೆಪ ಮಾಜಿ ಶಾಸಕರಿಂದ ಪೊಳ್ಳು ಆರೋಪ: ಕೆ.ಮಹದೇವ್

ಪಂ.ಹಳದೀಪೂರ ಬಗ್ಗೆ ಒಂದಿಷ್ಟು : ದೇಶದ ಅಗ್ರಗಣ್ಯ ಕೊಳಲು ವಾದಕರಾಗಿದ್ದು, ಸೇನಿಯಾ-ಮೈಹರ್ ಘರಾನಾದ ವಿದೂಷಿ ಅನ್ನಪೂರ್ಣ ದೇವಿ ಅವರ ಹಿರಿಯ ಶಿಷ್ಯರು. ಮುಂಬನ ಸಾಂಪ್ರದಾಯಿಕ ಕುಟುಂಬದಲ್ಲಿ ಜನಿಸಿದ್ದು, ಮನೆಯಲ್ಲಿ ಸಂಗೀತದ ವಾತಾವರಣವಿದೆ. ಮನೆಯಲ್ಲಿಯೇ ಸಂಗೀತ ಸಂಸ್ಕಾರ ಪಡೆದ ನಂತರದ ಎರಡು ದಶಕಗಳಲ್ಲಿ ಪನ್ನಾಲಾಲ್ ಘೋಷ್ ಅವರ ಹಿರಿಯ ಶಿಷ್ಯರಾದ ಪಂಡಿತ್ ಚಿದಾನಂದ ನಗರ್ಕರ್ ಹಾಗೂ ಪಂಡಿತ್ ದೇವೇಂದ್ರ ಮುರುಡೇಶ್ವರ ಅವರಲ್ಲಿ ಉನ್ನತ ಸಂಗೀತ ಅಭ್ಯಾಸ ಮಾಡಿದರು. 1986 ರಲ್ಲಿ ಸೇನಿಯಾ ಮೈಹರ್-ಘರಾನಾದ ಮೇರು ಪರ್ವತ ಉಸ್ತಾದ್ ಅಲ್ಲಾವುದ್ದೀನ್ ಖಾನ್ ಸಾಹೇಬ್ (ಬಾಬಾ) ಅವರ ಪುತ್ರಿ ಅನ್ನಪೂರ್ಣ ದೇವಿಯವರ ಗರಡಿಯಲ್ಲಿ ಹಳದೀಪುರರ ಸಂಗೀತ ಹೊಸ ಮಜಲು ಪಡೆದಿದ್ದಾರೆ. ರೇಡಿಯೋ ಹಾಗೂ ದೂರದರ್ಶನದ ಎ ಟಾಪ್ೞಮಾನ್ಯತೆ ಪಡೆದ ನಿತ್ಯಾನಂದ ಹಳದಿಪೂರ್ ಅವರು ರಾಷ್ಟ್ರೀಯ ಸಂಗೀತ ಸಮ್ಮೇಳನ, ಆಕಾಶವಾಣಿ ಸಂಗೀತ ಸಮ್ಮೇಳನಗಳು, ಸಾರ್ಕ್ ಸಂಗೀತ ಸಮ್ಮೇಳನ ಹಾಗೂ ಅಪ್ನಾ ಉತ್ಸವ್ ಸರಣಿಗಳಲ್ಲಿ ತಮ್ಮ ಸಂಗೀತ ಸುಧೆ ಹರಿಸಿದ್ದು, ಈಗಾಗಲೇ ಸಾಕಷ್ಟು ಪ್ರಶಸ್ತಿಗಳು ಅರಿಸಿ ಬಂದಿದೆ.

ಶಿವಾನಿ ಬಗ್ಗೆ ಒಂದಿಷ್ಟು : ಧಾರವಾಡದ ಉದಯೋನ್ಮುಖ ಸಂಗೀತ ಪ್ರತಿಭೆಯಾಗಿದ್ದು, ಬಾಲ್ಯದಿಂದಲೇ ಸಂಗೀತದತ್ತ ಒಲವು. ಚಂದ್ರಶೇಖರ ಪುರಾಣಿಕಮಠ ಅವರಿಂದ ದೊರೆತ ಅತ್ಯಮೂಲ್ಯ ಪ್ರಾರಂಭಿಕ ಹಂತದ ಸಂಗೀತ ಶಿಕ್ಷಣದ ಬಳಿಕ ಕಿರಾನಾ ಘರಾನೆಯ ಪಂ.ಕೈವಲ್ಯಕುಮಾರ ಗುರುವ ಅವರಿಂದ ಆಳವಾದ ಮಾರ್ಗದರ್ಶನ ಪಡೆದು, ಪ್ರಸ್ತುತ ಜೈಪುರ-ಗ್ವಾಲಿಯರ್-ಆಗ್ರಾ ಘರಾಣೆಗಳ ಶ್ರೇಷ್ಠ ಗಾಯಕರು ಪದ್ಮಶ್ರೀ ಪುರಸ್ಕೃತ ಪಂ.ಉಲ್ಲಾಸ ಕಶಾಳಕರ್ ಅವರಲ್ಲಿ ಸಂಗೀತಾಭ್ಯಾಸ ಮುಂದುವರೆಸಿದ್ದಾರೆ.ಆಕಾಶವಾಣಿಯ ಬಿ-ಹೈ ಶ್ರೇಣಿಯ ಕಲಾವಿದರಾಗಿದ್ದು, ಕ್ಲಾಸಿಕಲ್ ವೋಕಲ್ ಆಪ್ ಇಂಡಿಯಾ ಪುರಸ್ಕಾರಕ್ಕೂ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.