ಯಾರ ಜೊತೆಯೂ ಹೊಂದಾಣಿಕೆ- ಒಪ್ಪಂದ ಇಲ್ಲ. ನಾವೇ ಗೆಲ್ಲುತ್ತೇವೆ: ಕಟೀಲ್ ವಿಶ್ವಾಸ
Team Udayavani, May 31, 2022, 11:28 AM IST
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾವು ಯಾರ ಜೊತೆಯೂ ಹೊಂದಾಣಿಕೆ ಮಾಡುತ್ತಿಲ್ಲ, ಒಪ್ಪಂದವೂ ಇಲ್ಲ. ಬಿಜೆಪಿಗೆ ಬಿಜೆಯದ್ದೇ ಮತವಿದೆ. ನಾವು ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೂರನೇ ಅಭ್ಯರ್ಥಿ ಹಾಕಿದ್ದೇವೆ. ಮೊದಲನೆಯವರು ನಿರ್ಮಲಾ ಸೀತಾರಾಮನ್, ಎರಡನೇ ಅಭ್ಯರ್ಥಿ ಆಗಿ ಚಿತ್ರ ನಟ, ವಕ್ತಾರ ಜಗ್ಗೇಶ್, ಮೂರನೇಯದು ಲೆಹರ್ ಸಿಂಗ್. ನಾವು ಗೆಲ್ಲುತ್ತೇವೆ ಎಂದರು
ಜೆಡಿಎಸ್ ಜೊತೆ ಮಾತುಕತೆ ಮಾಡಿದ್ದೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕಟೀಲ್, ‘ಯಾರ ಜೊತೆ ಕೂಡ ಹೊಂದಾಣಿಕೆ ಇಲ್ಲ’ ಎಂದರು.
ಇದನ್ನೂ ಓದಿ:ಯಾರಿಗೆ ಬೇಕು ಎಷ್ಟು ವೋಟು: ರಾಜ್ಯಸಭಾ ಚುನಾವಣೆಗೆ ಮತ ಲೆಕ್ಕಾಚಾರ ಹೇಗಿದೆ?
ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಮಾತನಾಡಿ, ಕಾಂಗ್ರೆಸ್, ಜೆಡಿಎಸ್ ನಲ್ಲಿ ನನಗ ಸ್ನೇಹಿತರಿದ್ದಾರೆ. ಅವರು ನನಗೆ ಬೆಂಬಲ ನೀಡುವ ವಿಶ್ವಾಸವಿದೆ. ಅವ ಬೆಂಬಲದೊಂದಿಗೆ ನಾನು ಆಯ್ಕೆ ಆಗುತ್ತೇನೆ. ನನ್ನನ್ನು ಮೂರನೇ ಅಭ್ಯರ್ಥಿ ಮಾಡಿದ್ದಕ್ಕೆ ಬೇಸರವಿಲ್ಲ. ನಾನೇ ಮೂರನೇ ಅಭ್ಯರ್ಥಿ ಮಾಡಿ ಎಂದು ಕೇಳಿದ್ದೆ. ಅದರಂತೆ ಈಗ ನನ್ನನ್ನು ಪಕ್ಷ ಮೂರನೇ ಅಭ್ಯರ್ಥಿ ಯನ್ನಾಗಿ ಪಕ್ಷ ಕಣಕ್ಕಿಳಿಸಿದೆ ಎಂದರು.
ಯಾವುದೇ ಕಾರಣಕ್ಕೂ ನಾನು ನಾಮಪತ್ರ ವಾಪಸ್ಸು ಪಡೆಯುವುದಿಲ್ಲ. ಮಧ್ಯಾಹ್ನ 12.30ಕ್ಕೆ ನಾನು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ರಾಜ್ಯದಿಂದ ನಾನು ರಾಜ್ಯಸಭೆಗೆ ಹೋಗಿಯೇ ಹೋಗುತ್ತೇನೆ ಎಂದು ಲೆಹರ್ ಸಿಂಗ್ ಹೇಳಿದರು.
ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ ಮಾಡಿದರು. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ