ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
Team Udayavani, May 21, 2022, 11:13 AM IST
ಹೊಸದಿಲ್ಲಿ/ಬೆಂಗಳೂರು: ಕಳೆದ ಕೆಲವು ವಾರಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆಯವುದೇ ಅನುಮಾನ ಎಂಬ ಲಕ್ಷಣಗಳು ಕಾಣುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ನೀಡಿದ್ದರೂ, ವರಿಷ್ಠರೊಂದಿಗೆ ಈ ಕುರಿತು ಚರ್ಚೆ ನಡೆಸಿಲ್ಲ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ವಿಧಾನ ಪರಿಷತ್ತು ಮತ್ತು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ಅಮಿತ್ ಶಾ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ತುರ್ತು ಕೆಲಸದ ಮೇಲೆ ಬೇರೆ ಕಡೆ ಹೋಗಿದ್ದರಿಂದ ಭೇಟಿ ಮಾಡಲು ಆಗಲಿಲ್ಲ. ದೂರವಾಣಿಯಲ್ಲೇ ಸುದೀರ್ಘವಾಗಿ ಮಾತಾನಾಡಿದ್ದೇವೆ. ಸಂಪುಟದ ಕುರಿತು ಯಾವುದೇ ಚರ್ಚೆ ಮಾಡಿಲ್ಲ ಎಂದಿದ್ದಾರೆ.
ಇಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಜೊಡಿ ಮಾತನಾಡಿದ್ದೇನೆ. ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿಲ್ಲ. ಕೋರ್ ಕಮಿಟಿ ಚರ್ಚೆಯ ವಿಚಾರಗಳು ಮತ್ತು ಪರಿಷತ್ ಹಾಗೂ ರಾಜ್ಯಸಭೆಯ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯ ಕುರಿತು ಚರ್ಚೆ ನಡೆಸಿದ್ದೇವೆ ಎಂದರು.
ಇದನ್ನೂ ಓದಿ:ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ರಾಜ್ಯದಲ್ಲಿ ಮಳೆಯಾಗಿರುವುದರಿಂದ ಡಿಸಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಇದುವರೆಗೆ ಬಿಬಿಎಂಪಿ ಚುನಾವಣೆ ಬಗ್ಗೆ ಸುಪ್ರೀಂ ಆದೇಶಕ್ಕೆ ಕಾಯುತ್ತಿದ್ದೆವು. ಇದೀಗ ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಕುರಿತು ಸ್ಪಷ್ಟತೆ ಸಿಗಲಿದೆ. ಹೀಗಾಗಿ ಯಾವುದೇ ಚರ್ಚೆ ನಡೆಸಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು