“ಡಿಕೆಶಿ ಜೊತೆ ಹಣಕಾಸು ವ್ಯವಹಾರವಿಲ್ಲ’
Team Udayavani, Sep 19, 2019, 3:05 AM IST
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಜೊತೆಗೆ ಹಣಕಾಸಿನ ವ್ಯವಹಾರ ನಡೆಸಿಲ್ಲ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅಕ್ರಮ ವ್ಯವಹಾರ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲ ಯದ ಅಧಿಕಾರಿಗಳು ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದಕ್ಕೆ ಪಕ್ಷದ ಕಚೇರಿ ಯಲ್ಲಿ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, ಸೆ.14ರಂದೇ ವಿಚಾರಣೆಗೆ ಹಾಜರಾಗು ವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು.
ಆದರೆ, ನನಗೆ ಆ ಸಂದರ್ಭದಲ್ಲಿ ಹಾಜರಾಗಲು ಆಗುವುದಿಲ್ಲ ಎಂದು ಬೇರೆ ದಿನ ಅವಕಾಶ ನೀಡುವಂತೆ ಕೋರಿದ್ದೆ. ಅದರಂತೆ ಗುರುವಾರ ಹಾಜರಾಗಲು ನೋಟಿಸ್ ನೀಡಿದ್ದಾರೆ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಬಂಧನಕ್ಕೆ ಸಂಬಂಧಿಸಿ ದಂತೆ 184 ಜನರನ್ನು ವಿಚಾರಣೆಗೆ ಕರೆದಿದ್ದಾರೆ. ಅದರಂತೆ ನನ್ನನ್ನೂ ಕರೆದಿದ್ದಾರೆ. ಯಾವ ಕಾರಣಕ್ಕಾಗಿ ನನ್ನ ಕರೆದಿದ್ದಾರೆ ಎಂಬ ಮಾಹಿತಿಯಿಲ್ಲ.
ಅವರೊಂದಿಗೆ ನಾನು ಹಣಕಾಸು ವ್ಯವಹಾರ ನಡೆಸಿಲ್ಲ. ನನ್ನ ಮನೆಯ ಮೇಲೆ ಐಟಿ ದಾಳಿಯಾಗಿದ್ದರೂ, ಆ ಪ್ರಕರಣಗಳು ಇಡಿಗೆ ವರ್ಗಾವಣೆಯಾಗಿಲ್ಲ ಎಂದು ಹೇಳಿದರು. ಬೆಂಗಳೂರು ಅಥವಾ ಬೆಳಗಾವಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಕೊಂಡಿದ್ದೆ. ಆದರೆ, ಈ ಬಗ್ಗೆ ಇಡಿ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ದೆಹಲಿಗೆ ತೆರಳಿ ವಿಚಾರಣೆ ಎದುರಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ