ರಾಜ್ಯದಲ್ಲಿ ಸದ್ಯಕ್ಕೆ ತರಾತುರಿಯಲ್ಲಿ ಶಾಲೆ ಆರಂಭ ಮಾಡಲ್ಲ: ಸಚಿವ ಸುರೇಶ್ ಕುಮಾರ್
Team Udayavani, Oct 1, 2020, 10:09 AM IST
ಬೆಂಗಳೂರು: ಅನ್ ಲಾಕ್ 5ರ ಮಾರ್ಗದರ್ಶಿಯಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಆದರೆ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸಲು ಯಾವುದೇ ಧಾವಂತವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿದ ಸಚಿವರು, ಸದ್ಯ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಸ್ಥಿತಿ ಇಲ್ಲ. ಮಕ್ಕಳ ಆರೋಗ್ಯವೇ ನಮ್ಮ ಆದ್ಯತೆ ಎಂದಿದ್ದಾರೆ.
ಸದ್ಯಕ್ಕಂತೂ ತರಾತುರಿಯಲ್ಲಿ ಶಾಲೆಗಳನ್ನು ಆರಂಭ ಮಾಡಿಲ್ಲ. ಈ ಬಗ್ಗೆ ಸರ್ಕಾರ ಇದುವರೆಗೆ ತೀರ್ಮಾನ ಮಾಡಿಲ್ಲ. ಪೋಷಕರು, ಶಿಕ್ಷಣ ತಜ್ಞರುಗಳ ಜೊತೆಗೆ ಚರ್ಚೆ ನಡೆಸುತ್ತೇವೆ. ಅಕ್ಟೋಬರ್ ಎರಡನೇ ವಾರದಲ್ಲಿ ತೀರ್ಮಾನ ತಿಳಿಸುತ್ತೇವೆ ಎಂದರು.
ಇದನ್ನೂ ಓದಿ:ಅಕ್ಟೋಬರ್ 15ರ ವರೆಗೆ ಶಾಲೆಗಿಲ್ಲ ಮಕ್ಕಳ ಭೇಟಿ
ಕೇಂದ್ರದ ಮಾರ್ಗಸೂಚಿಯಲ್ಲೇನಿದೆ?
ಶಾಲೆಗಳನ್ನು ಆರಂಭಿಸುವ ಬಗ್ಗೆ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿ ಆಯಾ ರಾಜ್ಯ ಸರಕಾರಗಳೇ ನಿರ್ಧಾರ ಕೈಗೊಳ್ಳಬೇಕು. ಹೆತ್ತವರ ಲಿಖಿತ ಒಪ್ಪಿಗೆ ಇದ್ದರೆ ಮಾತ್ರ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವುದಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ತರಗತಿಗೆ ವಿದ್ಯಾರ್ಥಿಗಳು ಹಾಜರಾಗಲೇ ಬೇಕು ಎಂದು ಆಯಾ ಶಿಕ್ಷಣ ಸಂಸ್ಥೆಗಳು ಒತ್ತಡ ಹೇರುವಂತಿಲ್ಲ. ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಮೂಲಕ ಪಾಠ ಪ್ರವಚನ ಬಯಸಿದ್ದರೆ ಅಂಥವರು ತರಗತಿಗೆ ಹಾಜರಾಗಲೇಬೇಕೆಂದು ಒತ್ತಡ ಹೇರುವಂತಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ