ಮಳೆಯಿಂದ ಹಾನಿಯಾದವರಿಗೆ ಪರಿಹಾರ ವಿತರಣೆಯಲ್ಲಿ ಲೋಪ ಸಲ್ಲದು: ಸಿಎಂ ಬೊಮ್ಮಾಯಿ ಸೂಚನೆ


Team Udayavani, Oct 13, 2022, 12:34 PM IST

ba-bommai

ಹೊಸಪೇಟೆ: ರಾಜ್ಯದಲ್ಲಿ ಹಿಂದೆಂದಿಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು. ಮಳೆ ಹಾನಿ ಸಂಭವಿಸಿದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದರು.

ಹೊಸಪೇಟೆಯಿಂದ ಮಳೆಹಾನಿ ಸಂಭವಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿದರು. ಮನೆಗಳಿಗೆ ಸಂಬಂಧಿಸಿದ ಹಾನಿಯನ್ನು ದಾಖಲಿಸುವ ಹಂತದಲ್ಲಿಯೇ ಕೆಲವೆಡೆ ಲೋಪಗಳಾಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಮನೆ ಹಾನಿಗೆ ಸಂಬಂಧಿಸಿದಂತೆ ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚನೆ ನೀಡಿದರು.

ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು. ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಲಾಯಿತು.

ಮೂಲಸೌಲಭ್ಯ ಹಾನಿ ವರ್ಗೀಕರಣ: ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್ ಡಿಆರ್ ಎಫ್ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಯಿತು. ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಹ ಸೂಚನೆ ನೀಡಿದರು. ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು ಎಂದರು.

ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಅನುದಾನ ಕೊರತೆ ಇಲ್ಲ: ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಲಾಯಿತು. ಮೂಲಸೌಕರ್ಯ ಹಾನಿಗೆ ಸಂಬಂಧಿಸಿದಂತೆ ಮೂರು ದಿನಗಳ ನಂತರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮುಖ್ಯಮಂತ್ರಿಯವರೊಂದಿಗೆ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.