ಈ ಬಾರಿ ರಂಜಾನ್ ತಿಂಗಳಲ್ಲಿ ಮಸೀದಿಗೆ ಹೋಗುವಂತಿಲ್ಲ, ಇಫ್ತಿಯಾರ್ ಕೂಟ ಮಾಡುವಂತಿಲ್ಲ
Team Udayavani, Apr 16, 2020, 3:07 PM IST
Representative Image Used
ಬೆಂಗಳೂರು: ಇದೇ ತಿಂಗಳ 25ರಿಂದ ಪವಿತ್ರ ರಂಜಾನ್ ಆರಂಭವಾಗಲಿದೆ. ಆದರೆ ಕೋವಿಡ್-19 ಸೋಂಕು ಭೀತಿ ಇರುವ ಕಾರಣ ಈ ಬಾರಿ ರಂಜಾನ್ ತಿಂಗಳಲ್ಲಿ ಯಾರೂ ಮಸೀದಿಗೆ ಹೋಗಬಾರದು. ಅದಲ್ಲದೆ ಯಾರೂ ಇಫ್ತಿಯಾರ್ ಕೂಟ ಆಯೋಜನೆ ಮಾಡಬಾರದು ಎಂದು ರಾಜ್ಯ ವಕ್ಫ್ ಬೋರ್ಡ್ ಸೂಚನೆ ನೀಡಿದೆ.
ವಕ್ಫ್ ಬೋರ್ಡ್ ಅಧ್ಯಕ್ಷ ಮೊಹಮ್ಮದ್ ಯೂಸುಫ್ ಮತ್ತು ಕಾರ್ಯದರ್ಶಿ ಇಬ್ರಾಹಿಂ ಅವರು ಸುದ್ದಿಗೋಷ್ಠಿಯನ್ನು ನಡೆಸಿ ಮಾಹಿತಿ ನೀಡಿದರು.
ಈ ಬಾರಿ ನಿಮ್ಮ ನಿಮ್ಮ ಮನೆಗಳಲ್ಲಿ ರಂಜಾನ್ ಆಚರಣೆ ಮಾಡಿ. ಸಾಮೂಹಿಕವಾಗಿ ಸೇರಿ ಅನಾಹುತ ಮಾಡುವುದು ಬೇಡ. ರಂಜಾನ್ ಸಮಯದಲ್ಲಿ ಬಡವರಿಗೆ ಸಹಾಯ ಮಾಡುವಾಗ ಜನ ಸೇರುವುದು ಬೇಡ. ಬರೀ ಮುಸ್ಲಿಮರಿಗೆ ಅಷ್ಟೇ ಅಲ್ಲ ಇತರ ಸಮುದಾಯಗಳಿಗೂ ಸಹಾಯ ಮಾಡಿ. ಇದು ಅಲ್ಲಾಗೆ ಇಷ್ಟವಾಗುತ್ತದೆ ಎಂದು ಅಧ್ಯಕ್ಷ ಮೊಹಮ್ಮದ್ ಯೂಸುಫ್ ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೂಚನೆಗಳನ್ನ ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲ ವಿಚಾರಕ್ಕಿಂತಲೂ ಜೀವ ಮುಖ್ಯ. ದರ್ಗಾ ಮತ್ತು ಮಸೀದಿ ಹೋಗುವುದು ಮುಖ್ಯ ಅಲ್ಲ. ನಿಮ್ಮ ಜೀವ ಉಳಿಸಿಕೊಳ್ಳುವುದು ಬಹಳ ಮುಖ್ಯ. ಸಮಾಜ ಇದನ್ನ ಮುಖ್ಯವಾಗಿ ಪರಿಗಣಿಸಬೇಕು. ಸರ್ಕಾರದ ಆದೇಶಗಳನ್ನ ಯಥಾವತ್ತಾಗಿ ಪಾಲಿಸಬೇಕು ಅಂತ ವಾಕ್ಫ ಬೋರ್ಡ್ ಸೂಚನೆ ನೀಡಿದೆ ಎಂದರು.
ಪ್ರಾರ್ಥನೆ ಮಾಡುವಾಗ ನಾಲ್ಕರಿಂದ ಐದು ಜನ ಮಾತ್ರ ಮಸೀದಿಯಲ್ಲಿ ಇರಿ ಮಸೀದಿಯಲ್ಲಿದ್ದು ಖುರಾನ್ ಓದುವವರು ಪ್ರಾರ್ಥನೆ ಮಾಡಲಿ. ಲಾಕ್ ಡೌನ್ ಮುಗಿಯುವವರೆಗೂ ಅಂದರೆ ಮೇ 3 ವರೆಗೂ ಇದು ಅನ್ವಯವಾಗುತ್ತದೆ. ಸರ್ಕಾರ ಮುಂದಿನ ಕ್ರಮ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಯೂಸುಫ್ ಹೇಳಿದರು.
ತಬ್ಲಿಘ್ ಜಮಾತ್ ಬಗ್ಗೆ ತಪ್ಪು ಸಂದೇಶ ರವಾನೆ ಮಾಡಬೇಡಿ. 2015ರಲ್ಲಿ ನಿಜಾಮುದ್ದಿನ್ ನಿಂದ ಅದು ವಿಭಾಗವಾಗಿದೆ. ಅವರು ಮುಸ್ಲಿಂರಿಂದ ದೂರವಾಗಿದ್ದಾರೆ. ಜಮಾತ್ ಗೂ ವಾಕ್ಫ ಬೋರ್ಡ್ ಗೂ ಸಂಬಂಧವಿಲ್ಲ. ಯಾರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಮಾವೇಶ ಮಾಡಿದ್ದರೋ ಅವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ ಎಂದರು.
ಸೋಂಕಿನ ಕುರಿತಾದ ಬಗ್ಗೆ ಜಾಗೃತಿ ಮೂಡಿಸಲು ಮಸೀದಿಯಲ್ಲಿ ಮೈಕ್ ಬಳಸಬಹುದು. ನಾಲ್ಕು ಬಾರಿ ಮಾತ್ರ ಅನೌನ್ಸ್ ಮಾಡಬೇಕು. ತಬ್ಲಿಘ್ ಗಳು ರಾಜ್ಯದಿಂದ ಹೋಗಿದ್ದು 698 ಮಂದಿ ಅವರೆಲ್ಲರೂ ತಪಾಸಣೆ ಗೆ ಹೋಗಿದ್ದಾರೆ. 28 ಮಂದಿಗೆ ಮಾತ್ರ ಪಾಸಿಟಿವ್ ಬಂದಿದೆ. ಉಳಿದ ಎಲ್ಲರಿಗೂ ನೆಗಟಿವ್ ಬಂದಿದೆ. ತಪ್ಪು ಸಂದೇಶ ರವಾನೆ ಮಾಡಬೇಡಿ. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಮತ್ತು ಬಹುಸಂಖ್ಯಾತರು ಅಂತ ಭೇದಭಾವ ಬೇಡ ಎಂದು ಕಾರ್ಯದರ್ಶಿ ಇಬ್ರಾಹಿಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ