ಮೋದಿ ಅಲ್ಲ, ಯಾರೇ ಬಂದರೂ ನನ್ನನ್ನು ಸೋಲಿಸಲು ಆಗಲ್ಲ: ಖರ್ಗೆ


Team Udayavani, Mar 10, 2019, 12:37 AM IST

kharge.jpg

ಹುಬ್ಬಳ್ಳಿ: “ದೇಶದ ಸೈನಿಕರ ಶವದ ಮೇಲೆ ಯಾರೂ ರಾಜಕೀಯ ಮಾಡಬಾರದು. ಆದರೆ ಬಿಜೆಪಿಯವರು ಏರ್‌ ಸ್ಟ್ರೈಕ್‌ ಅನ್ನು ರಾಜಕೀಯ ಲಾಭವಾಗಿಸಿಕೊಳ್ಳಲು ಮುಂದಾಗಿರುವುದು ದುರ್ದೈವದ ಸಂಗತಿ’ ಎಂದು ಲೋಕಸಭೆ ಕಾಂಗ್ರೆಸ್‌ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸರಹದ್ದು ಮೇಲೆ ಯಾರೇ ದಾಳಿ ಮಾಡಿದರು ನಾವೆಲ್ಲರೂ ಒಮ್ಮತದಿಂದ ಒಗ್ಗೂಡಿ ಎದುರಿಸುತ್ತೇವೆ ಎಂದು ಎಲ್ಲ ವಿಪಕ್ಷದವರು ಸರ್ಕಾರಕ್ಕೆ ಭರವಸೆ ಕೊಟ್ಟಿದ್ದೇವೆ. ರಾಹುಲ್‌ ಗಾಂಧಿ ಸಹ ಈ ಕುರಿತು ಸ್ಪಷ್ಟವಾಗಿ ಅನೇಕ ಬಾರಿ ಹೇಳಿದ್ದಾರೆ. ಆದರೆ ಬಿಜೆಪಿಯವರು ಏರ್‌ ಸ್ಟ್ರೈಕ್‌ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.

ಯುಪಿಎ ತನ್ನ ಎರಡು ಅವಧಿಗಳ ಆಡಳಿತಾವಧಿಯಲ್ಲಿ 12 ಬಾರಿ ಸರ್ಜಿಕಲ್‌ ಸ್ಟ್ರೈಕ್‌ ಮಾಡಿದೆ. ಆದರೆ ನಾವ್ಯಾರೂ ಇದರ ಶ್ರೇಯಸ್ಸು ಪಡೆದುಕೊಂಡಿಲ್ಲ. ಸೈನಿಕರ ದಾಳಿಯನ್ನು ರಾಜಕೀಯಕ್ಕೆ ಬಳಸಿಲ್ಲ. ದೇಶದ ಹಿತದೃಷ್ಟಿಯಿಂದ ನಾವೆಲ್ಲ ಒಂದಾಗಿರಬೇಕು ಎಂದರು.

ನನ್ನ ಸೋಲಿಸಲಾಗದು: ಪ್ರಧಾನಿ ಮೋದಿ ಅವರಿಗೆ ನನ್ನ ಮೇಲೆ ವ್ಯಕ್ತಿಗತವಾಗಿ ಪ್ರೀತಿ ಇದ್ದಿದ್ದಕ್ಕೆ ಕಲಬುರಗಿಗೆ ಬಂದು ಪ್ರಚಾರ ಮಾಡಿದ್ದಾ ರೆ. ದೆಹಲಿಯಿಂದ ಇನ್ನಷ್ಟು ನಾಯಕರು  ನನ್ನ ಕ್ಷೇತ್ರಕ್ಕೆ ಬರುವವರಿದ್ದಾರೆ. ಆದರೆ ಕ್ಷೇತ್ರದ ಮತದಾರರುಯಾರನ್ನು ಆರಿಸಬೇಕೆಂಬ ತೀರ್ಮಾನ ಕೈಗೊಳ್ಳುತ್ತಾರೆ. ಜನರ ಆಶೀರ್ವಾದ ಎಲ್ಲಿಯವರೆಗೆ ಕಾಂಗ್ರೆಸ್‌ ಮತ್ತು ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೆ ಇವರಿಂದ ಏನೂ ಮಾಡಲು ಆಗಲ್ಲ ಎಂದು ಹೇಳಿದರು.

ಯುಪಿಎ ಆಡಳಿತಾವಧಿಯಲ್ಲಿ ಇಎಸ್‌ಐ ಆಸ್ಪತ್ರೆ, ರೈಲ್ವೆ ಕೋಚ್‌ ತಯಾರಿಕಾ ಘಟಕ ಆರಂಭಿಸಿದ್ದೆವು. ನಮ್ಮ ಅವಧಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಈಗ ಪೂರ್ಣಗೊಳಿಸಿ ಅವನ್ನೆಲ್ಲ ನಾವೇ ಮಾಡಿದ್ದೇವೆಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಆದರೆ ಚುನಾವಣಾ ಪ್ರಣಾಳಿಕೆಯಲ್ಲಿನೀಡಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದ್ದೇವೆಂದು ಹೇಳುತ್ತಿಲ್ಲ. ಕೇವಲ ಬೆಂಗಳೂರಿನ ಮೂರು ಯೋಜನೆ, ಹುಬ್ಬಳ್ಳಿ ಹಾಗೂ ರಾಯಚೂರು ಯೋಜನೆಗೆ ಚಾಲನೆ ನೀಡಿ ಹೋಗಿದ್ದಾರೆ ಎಂದರು.

ಮೋದಿ ಐದು ವರ್ಷದಲ್ಲಿ 10 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹಾಗೂ ಕಪ್ಪುಹಣ ತಂದು ಬಡವರಿಗೆ ಹಂಚುವ ಭರವಸೆ ಹುಸಿಯಾಗಿದೆ. ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದಿದ್ದರು. ಅದು ಆಗಿಲ್ಲ. ಆದರೆ ಕೆಲವು ಬೆಳೆ ವಿಮಾ ಕಂಪನಿಗಳಿಗೆ ಲಾಭ ಮಾಡಿ ಕೊಟ್ಟಿದ್ದಾ ರೆ ಪದೇ ಪದೇ ಸುಳ್ಳು ಹೇಳುವವರಿಗೆ ಏನು ಮಾಡೋಕ್ಕಾಗಲ್ಲ ಎಂದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.