ಇನ್ನು ಪರಸ್ಪರ ವರ್ಗಾವಣೆಗಿಲ್ಲ ನಿರ್ಬಂಧ

ಶಿಕ್ಷಕ ಸ್ನೇಹಿ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ

Team Udayavani, Nov 17, 2022, 7:15 AM IST

ಇನ್ನು ಪರಸ್ಪರ ವರ್ಗಾವಣೆಗಿಲ್ಲ ನಿರ್ಬಂಧ

ಬೆಂಗಳೂರು: ವರ್ಗಾವಣೆಗಾಗಿ ಕಾಯುತ್ತಿರುವ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಪರಸ್ಪರ ವರ್ಗಾವಣೆಗೆ ಯಾವುದೇ ಮಿತಿ ಇರುವುದಿಲ್ಲ ಎಂದು ಹೇಳಿದೆ.

ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ಜಾರಿಗೊಳಿಸಲು ಮುಂದಾದ ರಾಜ್ಯ ಸರ್ಕಾರವು ಶಿಕ್ಷಕರ ವರ್ಗಾವಣೆಗಿದ್ದ ಕೆಲ ನಿರ್ಬಂಧ ತೆಗೆದು ಬುಧವಾರ ಕರಡು ಅಧಿಸೂಚನೆ ಹೊರಡಿಸಿದೆ. ಹಾಗೆಯೇ, ಪತಿ-ಪತ್ನಿ ಪ್ರಕರಣಗಳಲ್ಲಿ ಶೈಕ್ಷಣಿಕ ಜಿಲ್ಲೆಯಲ್ಲಿ ಹುದ್ದೆಗಳು ಖಾಲಿ ಇಲ್ಲದಿದ್ದರೆ, ಅದೇ ಜಿಲ್ಲೆಯ ಪಕ್ಕದ ತಾಲ್ಲೂಕಿನಲ್ಲಿ ಹುದ್ದೆ ಪಡೆಯಲು ಅವಕಾಶಗಳಿವೆ.

ಇದುವರೆಗೆ ಪರಸ್ಪರ ವರ್ಗಾವಣೆಗೆ ಒಂದು ಬಾರಿ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಉಳಿದಂತೆ, ಒಂದು ಬಾರಿ ವರ್ಗಾವಣೆಯಾದ ಬಳಿಕ ಮತ್ತೆ 3 ವರ್ಷ ಅರ್ಜಿ ಸಲ್ಲಿಸುವಂತಿಲ್ಲ. ಕೆಲಸಕ್ಕೆ ಸೇರಿದ ಮೊದಲ 5 ವರ್ಷ ಹಾಗೂ ನಿವೃತ್ತಿಗೆ ಮೊದಲಿನ 5 ವರ್ಷ ವರ್ಗಾವಣೆಗೆ ಅವಕಾಶ ಇರುವುದಿಲ್ಲ.

ವಿಶೇಷ ಆದ್ಯತೆ
ಮಲೆನಾಡು ವಲಯ, ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳು, ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶ ಎಂದು ಗುರುತಿಸಲಾಗಿರುವ ತಾಲ್ಲೂಕುಗಳಿಗೆ ಹೋಗುವವರಿಗೆ ವಿಶೇಷ ಆದ್ಯತೆ ಸಿಗಲಿದೆ. ಎಲ್ಲ ವೃಂದಗಳೂ ಸೇರಿ 15 ವರ್ಷ ಅಥವಾ ಯಾವುದೇ ಘಟಕ ಹಾಗೂ ವೃಂದದಲ್ಲಿ ಕನಿಷ್ಠ 10 ವರ್ಷ ಕೆಲಸ ಮಾಡಿದ ಶಿಕ್ಷಕರನ್ನು ಶೇ.25ರಷ್ಟು ಮಿತಿಯ ಒಳಗೆ ಖಾಲಿ ಹುದ್ದೆಗಳಿರುವ ತಾಲ್ಲೂಕಿಗೆ ವರ್ಗಾವಣೆ ಮಾಡಬಹುದಾಗಿದೆ.
ಒಟ್ಟು ವೃಂದ ಬಲದ ಶೇ.11ರಷ್ಟು ಸಾರ್ವತ್ರಿಕ ವರ್ಗಾವಣೆ ಮಿತಿ ಇರುತ್ತದೆ. ವಿಶೇಷ ಆದ್ಯತೆಯಡಿ ವರ್ಗಾವಣೆ ಬಯಸುವವರಿಗೆ ಈ ನಿಯಮ ಅನ್ವಯವಾಗದು. ಉಳಿದೆಲ್ಲ ನಿಯಮಗಳು ಮುಂದುವರಿಯಲಿವೆ.

ಹೊರಡಿಸಲಾದ ಕರಡು ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನದಿಂದ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಕಾಯ್ದೆ-2020ಕ್ಕೆ ತಿದ್ದುಪಡಿ ಮಾಡಿ, ಸಚಿವ ಸಂಪುಟ ಸಭೆ ಅನುಮೋದನೆ ಪಡೆಯಲಾಗಿತ್ತು. ನಂತರ ಅಧಿವೇಶನದಲ್ಲಿ ಮಂಡಿಸಲಾಗಿತ್ತು.

ಟಾಪ್ ನ್ಯೂಸ್

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌