ಸಿಎಂ ಬದಲಾವಣೆ ವಿಚಾರದಲ್ಲಿ ಎಚ್‌ ಡಿ ಡಿ ಕುಟುಂಬ ಎಳೆಯುವುದು ಬೇಡ : ಕುಮಾರಸ್ವಾಮಿ


Team Udayavani, Jun 14, 2021, 4:02 PM IST

jhgfdfghjkdfghj

ಮಂಡ್ಯ: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನು ಎಳೆದು ತರುವುದು ಸರಿಯಲ್ಲ. ನಾವು ಯಾರ ಪರವಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಹನಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ದೇವೇಗೌಡರನ್ನು ಎರಡೂ ರಾಷ್ಟಿçÃಯ ಪಕ್ಷಗಳು ಹಲವಾರು ವರ್ಷಗಳಿಂದ ದುರ್ಬಳಕೆ ಮಾಡಿಕೊಂಡಿವೆ. ಕೊರೊನಾದಂಥ ಸಮಯವಲ್ಲಿ ರಾಜಕೀಯ ಮಾಡಬಾರದು ಎಂದು ಮೌನವಾಗಿದ್ದೇವೆ. ಮುಂದಿನ ದಿನಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ದ ಹೋರಾಟ ಮಾಡಲಾಗುವುದು. ಅಲ್ಲಿಯವರೆಗೂ ನಾವು ತಾಳ್ಮೆಯಿಂದ ಇರುತ್ತೇವೆ ಎಂದರು.

ಯಾರು ಮುಖ್ಯಮಂತ್ರಿಯಾಗಿ ಇರುತ್ತಾರೋ ಅದು ನಮಗೆ ಸಂಬAಧವಿಲ್ಲದ ವಿಷಯವಾಗಿದೆ. ನಾಡಿನ ರಕ್ಷಣೆ ಮಾಡುವುದರ ಕಡೆ ಅಧಿಕಾರದಲ್ಲಿರುವವರು ಗಮನ ಕೊಡಬೇಕು. ಕೊರೊನಾವನ್ನು ನಿಯಂತ್ರಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಹೇಳಿದರು.

ಲಘುವಾಗಿ ಪರಿಗಣಿಸಬೇಡಿ:

ಸೋಂಕು ಕಡಿಮೆ ಆಗುತ್ತದೆ ಎಂದು ಲಘುವಾಗಿ ಪರಿಗಣಿಸಬಾರದು. ಈಗಲೂ ಸರ್ಕಾರ ಎಚ್ಚೆತ್ತು ಕೆಲಸ ಮಾಡಬೇಕು. ರಾಜ್ಯದ ಮೂಲೆ ಮೂಲೆಗಳಿಂದ ಜನ ಬೆಂಗಳೂರಿಗೆ ಈಗಾಗಲೇ ಬರುತ್ತಿದ್ದಾರೆ. ಎರಡನೇ ಅಲೆ ನಗರಗಳಷ್ಟೇ ಅಲ್ಲದೆ, ಹಳ್ಳಿಗಳನ್ನೂ ಬಾಧಿಸಿದೆ. ಈಗಲೂ ಕೆಲ ಗ್ರಾಮೀಣ ಭಾಗಗಳಲ್ಲಿ ಸೋಂಕು ಕಡಿಮೆಯಾಗಿಲ್ಲ. ಜನರು ಕೂಡ ಕೋವಿಡ್ ನಿಯಮ ಕಟ್ಟು ನಿಟ್ಟಾಗಿ ಪಾಲಿಸಬೇಕು. ರೈತರು, ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ನಷ್ಟಕ್ಕೊಳಗಾಗುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಹೇಳಿದರು.

ಖಜಾನೆ ತುಂಬಿಸಲು ಬೆಲೆ ಏರಿಕೆ:

ಸರ್ಕಾರದ ಖಜಾನೆ ತುಂಬಿಸುವುದಕ್ಕೆ ಈ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡಿಸೇಲ್ ದರ ದಿನನಿತ್ಯ ಏರುತ್ತಲೇ ಇದೆ. ಕಾಂಗ್ರೆಸ್ ನಾಯಕರು ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ೩೨ ರೂ. ಇದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲಿಯಂ ಪ್ರಾಡಕ್ಟ್ಗಳ ಮೇಲೆ ೬೮ ರೂ. ಸೆಸ್ ವಿಧಿಸುತ್ತಿದೆ. ಈ ಸೆಸ್ ಕಡಿತ ಮಾಡಬೇಕು. ಇಲ್ಲದಿದ್ದರೆ ಜನ ಸಾಮಾನ್ಯರು ಮತ್ತಷ್ಟು ದರ ಏರಿಕೆಯಿಂದ ತತ್ತರಿಸಲಿದ್ದಾರೆ ಎಂದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ:

ನಾನು ಸಿಎಂ ಆಗಿದ್ದಾಗ ಮನ್‌ಮುಲ್ ಆಡಳಿತ ಮಂಡಳಿ ವಿರುದ್ಧ ತನಿಖೆಗೆ ಆದೇಶಿಸಿದ್ದೆ. ಆಗಿನ ಆಡಳಿತ ಮಂಡಳಿ ೭೨ ಕೋಟಿ ರೂ. ಅವ್ಯವಹಾರ ನಡೆಸಿದ ಹಿನ್ನಲೆ ತನಿಖೆ ನಡೆಸಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಬಳಿಕ ತನಿಖೆಗೆ ತಡೆ ಹಿಡಿದಿದ್ದಾರೆ. ಮನ್‌ಮುಲ್ ಮುಳಗಿಸಿ ಬಿಟ್ಟೆವು ಎನ್ನುತ್ತಾರೆ. ಆದರೆ ಮುಳುಗಿಸಿದವರ ರಕ್ಷಣೆಗೆ ಕೆಲವರು ನಿಂತಿದ್ದಾರೆ. ಹಾಲಿಗೆ ನೀರು ಮಿಕ್ಸ್ ಮಾಡುವ ದಂಧೆ ಹಲವು ವರ್ಷಗಳಿಂದ ನಡೆಯುತ್ತಿದೆ ಎಂಬುದನ್ನು ಅಲ್ಲಿ ಕೆಲಸ ಮಾಡುವವರೇ ಹೇಳುತ್ತಿದ್ದಾರೆ. ಈಗ ಸತ್ಯಾಂಶ ಹೊರ ಬಿದ್ದಿದೆ. ಜನರ ದುಡ್ಡು ಲೂಟಿ ಮಾಡುವವರು ಯಾವುದೇ ಪಕ್ಷದವರಾದರೂ ಸರಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಖಾರವಾಗಿ ಹೇಳಿದರು.

ಕಾಂಗ್ರೆಸ್ ಪಕ್ಷದ ನಿರ್ಧಾರ:

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟು ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷದ ನಿರ್ಧಾರ. ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದರು.

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.