ಈ ಬಾರಿಯ ಅಧಿವೇಶನದಲ್ಲಿ ಯಾವುದೇ ಹೊಸ ಬಿಲ್ ಮಂಡನೆ ಮಾಡಲ್ಲ: ರಾಜ್ಯ ಸರ್ಕಾರ
Team Udayavani, Feb 1, 2021, 11:29 AM IST
ಬೆಂಗಳೂರು: ಕುತೂಹಲಕ್ಕೆ ಕಾರಣವಾಗಿದ್ದ ಸದನ ಸಲಹಾ ಸಮಿತಿ ಸಭೆ ಮುಕ್ತಾಯವಾಗಿದೆ. ಈ ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ ಯಾವುದೇ ಹೊಸ ಬಿಲ್ ಮಂಡನೆ ಮಾಡದಿರಲು ಸಭೆಯಲ್ಲಿ ಸರ್ಕಾರ ಒಪ್ಪಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಇವತ್ತಿನ ಸಭೆಯಲ್ಲಿ ಬಿಲ್ ಬಗ್ಗೆ ಚರ್ಚೆ ಮಾಡಿದ್ದೇವೆ. ಸಭೆಯಲ್ಲಿ ಚರ್ಚೆಯಾದ ಬಿಲ್ ಮಾತ್ರವೇ ಮಂಡನೆಯಾಗಬೇಕು ಎಂದಿದ್ದೇವೆ. ಇದಕ್ಕೆ ಸರ್ಕಾರ ಒಪ್ಪಿದೆ ಎಂದರು.
ಬೆಳಗಾವಿಯಲ್ಲಿ ಅಧಿವೇಶನ ಕರೆಯಲು ಒತ್ತಾಯ ಮಾಡಿದ್ದೇವೆ. ಮುಂದಿನ ಬಜೆಟ್ ಅಧಿವೇಶನ ಅಲ್ಲಿಯೇ ಮಾಡಬೇಕು ಎಂದ್ದಿದ್ದೇವೆ. ಉತ್ತರ ಕರ್ನಾಟಕ ಜನರಿಗೆ ಅನ್ಯಾಯ ಆಗುತ್ತಿದೆ. ಅವರ ಸಮಸ್ಯೆಗಳು ಚರ್ಚೆಯಾಗಬೇಕು. ಆದರೆ ಸರ್ಕಾರ ಬಜೆಟ್ ನಂತರದ ಅಧಿವೇಶನ ಮಾಡುತ್ತೇವೆ ಎಂದಿದೆ ಎಂದು ಹೇಳಿದರು.
ಕೇಂದ್ರ ಬಜೆಟ್ ಬಗ್ಗೆ ಮಾತನಾಡಿದ ಅವರು, ಕೇಂದ್ರ ಬಜೆಟ್ ನಲ್ಲಿ ನಮ್ಮ ನಿರೀಕ್ಷೆ ಈಡೇರಿಲ್ಲ. ಕೋವಿಡ್ ಸಮಯದಲ್ಲಿ ನೀಡಿದ ಭರವಸೆ ಈಡೇರಿಲ್ಲ. ಯುವಕರ ನಿರೀಕ್ಷೆಯೂ ಕೈಗೂಡಿಲ್ಲ. ಇದು ಈವರೆಗಿನ ಮಾಹಿತಿ, ಉಳಿದ ಮಾಹಿತಿ ಬಜೆಟ್ ನಂತರ ಹೇಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ