ರಾಜ್ಯದಲ್ಲಿ ನೈಟ್ ಕರ್ಫ್ಯೂ ಮಾಡಲ್ಲ, ಆದರೆ ಕಠಿಣ ಕ್ರಮಗಳ ಜಾರಿ: ಸಚಿವ ಸುಧಾಕರ್


Team Udayavani, Dec 4, 2020, 12:35 PM IST

ರಾಜ್ಯದಲ್ಲಿ ನೈಟ್ ಕರ್ಫ್ಯೂ ಮಾಡಲ್ಲ, ಆದರೆ ಕಠಿಣ ಕ್ರಮಗಳ ಜಾರಿ: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಮಾಡುವ ಅಗತ್ಯವಿಲ್ಲ. ಆದರೆ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಜಾರಿ ಮಾಡುವ ಕುರಿತು ಚರ್ಚೆಯಾಗಿಲ್ಲ. ತಾಂತ್ರಿಕ ಸಲಹಾ ಸಮಿಯೂ ಈ ಬಗ್ಗೆ ಯಾವುದೇ ಸಲಹೆ ನೀಡಿಲ್ಲ. ಹಾಗಾಗಿ ನೈಟ್ ಕರ್ಫ್ಯೂ ಪ್ರಶ್ನೆಯೇ ಇಲ್ಲ ಎಂದರು.

ಜನವರಿ ಫೆಬ್ರವರಿಯಲ್ಲಿ ರಾಜ್ಯದಲ್ಲಿ 2ನೇ ಅಲೆ ಬರುವ ಸಾಧ್ಯತೆ ಇದೆ. ಅದಕ್ಕೆ ತಜ್ಞರ ಸಮಿತಿ ಸ್ಪಷ್ಟ ಮಾಹಿತಿ ನೀಡಿದೆ.  ಮುಂದಿನ 45 ದಿನ ಮಹತ್ವದ್ದಾಗಿದೆ. ಲಾಕ್ ಡೌನ್ ಸಮಯದಲ್ಲಿ ತೆಗೆದುಕೊಂಡ ಕ್ರಮಗಳನ್ನು ಮತ್ತೆ ತೆಗೆದುಕೊಳ್ಳುವ ಅನಿವಾರ್ಯತೆ ಇದೆ ಎಂದರು.

ಜನರು ಗುಂಪು ಸೇರುವುದನ್ನು ನಿಯಂತ್ರಿಸಬೇಕು. ಧಾರ್ಮಿಕ ಹಬ್ಬಗಳು, ಮದುವೆ ಸಮಾರಂಭಗಳಿಗೆ 100 ಜನ ಮೀರದಂತೆ ನೋಡಿಕೊಳ್ಳಬೇಕು. ರಾಜಕೀಯ ಸಮಾರಂಭಗಳು 200 ಜನಕ್ಕಿಂತ ಹೆಚ್ಚಿರಬಾರದು. ಸಾವಿನ ಸಂದರ್ಭದಲ್ಲಿ 50 ಜನ ಮೀರಬಾರದು ಎಂದು ವರದಿ ನೀಡಿದ್ದಾರೆ ಎಂದರು.

ಇದನ್ನೂ ಓದಿ:ಲಸಿಕೆ ನೀಡಲು ಆರೋಗ್ಯ ಇಲಾಖೆ ಸಜ್ಜು

ರಾಜ್ಯದಲ್ಲಿ ಕರ್ಪ್ಯೂ ಜಾರಿಯ ಪ್ರಶ್ನೆ ಇಲ್ಲ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಡಿಸೆಂಬರ್ 20 ರಿಂದ ಜನವರಿ 2 ರವರೆಗೆ ಕಠಿಣ ನಿಲುವು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ವರದಿ ಕೊಟ್ಟ ಮೇಲೆ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಸಿಎಂ ಜೊತೆ ಚರ್ಚಿಸಿ ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುಧಾಕರ್ ಹೇಳಿದರು.

ಟೆಸ್ಟ್ ಪ್ರಮಾಣ ಕಡಿಮೆ ಮಾಡಬಾರದು. ಈಗ ಪ್ರತಿ ದಿನ 1.25 ಲಕ್ಷ ಟೆಸ್ಟ್ ಮಾಡಲಾಗುತ್ತಿದೆ. ಫೆಬ್ರವರಿ ಅಂತ್ಯದವರೆಗೂ ಈ ಟೆಸ್ಟ್ ನಿರಂತರ ಇರುತ್ತದೆ.  ಕೊವಿಡ್ ಕೇರ್ ಕೇಂದ್ರ ತೆರೆಯಲು ಖಾಸಗಿ ಸಂಸ್ಥೆಗಳು ಸರ್ಕಾರದ ಸಹಭಾಗಿತ್ವದಲ್ಲಿ ತೆಗೆದುಕೊಳ್ಳಲು ಮುಂದೆ ಬಂದರೆ ಅವಕಾಶ ನೀಡಲಾಗುವುದು ಎಂದರು.

ಕೋವಿಡ್ ಇನ್ನೂ ಮುಗಿದಿಲ್ಲ. ಲಸಿಕೆ ಬರುವವರೆಗೂ ಕೋವಿಡ್ ನಿಯಮ ಪಾಲಿಸುವುದು ಕಡ್ಡಾಯ. ನಮ್ಮಲ್ಲಿ 3 ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲಾಗುತ್ತಿದೆ. ಶೀಘ್ರವೇ ಲಸಿಕೆ ಬರುವ ಸಾಧ್ಯತೆ ಇದೆ ಎಂದರು.

ಶಾಲೆ ಕಾಲೇಜು ತೆರೆಯುವ ಬಗ್ಗೆ ಡಿಸೆಂಬರ್ 3 ನೇ ವಾರದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಗ್ರಾಮ ಪಂಚಾಯತಿ ಚುನಾವಣೆ ಮಾರ್ಚ್ ವರೆಗೂ ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ದೆ. ಪಂಚಾಯತಿ ಚುನಾವಣೆ ನಡೆಸಿದರೆ ಮನೆ ಮನೆಗೆ ಕೋವಿಡ್ ವೈರಸ್ ಹರಡಿಸಿದಂತೆ ಆಗುತ್ತದೆ ಎಂದು ತಜ್ಞರು ಹೇಳಿದ್ದರು. ಆದರೆ, ಆಯೋಗ, ಕೋರ್ಟ್ ಅದನ್ನು ಪರಿಗಣಿಸಲಿಲ್ಲ ಎಂದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.