ಡಾ.ಪಿ.ರವೀಂದ್ರನಾಥ ರಾಜೀನಾಮೆ ಹಿಂಪಡೆಯಲು ತಮ್ಮ ಅಭ್ಯಂತರವಿಲ್ಲ : ಸಿಎಸ್
ತೀವ್ರ ರಾಜಕೀಯ ಸಮರಕ್ಕೆ ಕಾರಣವಾದ ವರ್ಗಾವಣೆ
Team Udayavani, May 11, 2022, 2:49 PM IST
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಾ.ಪಿ.ರವೀಂದ್ರನಾಥ ಅವರ ರಾಜೀನಾಮೆ ಅಂಗೀಕರಿಸದಂತೆ ಅನುಸೂಚಿತ ಜಾತಿ ಪಂಗಡಗಳ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ನೇತೃತ್ವದ ಸಮಿತಿ ಸದಸ್ಯರು ರಾಜ್ಯ ಮುಖ್ಯ ಕಾರ್ಯದರ್ಶಿಗಳನ್ನು ಬುಧವಾರ ಭೇಟಿ ಮಾಡಿದ್ದಾರೆ.
ಸಮಿತಿಯಲ್ಲಿ ಶಾಸಕರಾದ ಎನ್ . ಮಹೇಶ್, ಪಿ.ರಾಜೀವ್, ಅಬ್ಬಯ್ಯ, ಪ್ರಸಾದ್, ಪ್ರೊ. ಲಿಂಗಣ್ಣ ಇನ್ನಿತರರು ಹಾಜಾರಿದ್ದರು.
ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರ ನಾಥ್ ತಮ್ಮ ರಾಜೀನಾಮೆ ಹಿಂಪಡೆಯಲು ತಮ್ಮ ಅಭ್ಯಂತರವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಸಮಿತಿಯಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಉನ್ನತ ಹುದ್ದೆ ಗಿಟ್ಟಿಸಿಕೊಂಡವವರ ವಿರುದ್ದ ತನಿಖೆಗೆ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದ ಆಧಾರದ ಮೇಲೆ ರವೀಂದ್ರ ನಾಥ್ ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಎಂ.ಪಿ. ಕುಮಾರ ಸ್ವಾಮಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಆರೋಪ
ಡಿಜಿಪಿ ರವೀಂದ್ರನಾಥ್ ರಾಜೀನಾಮೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು,ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ಮುಖಂಡರಿಗೆ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಪ್ರಕರಣ ಸಂಬಂಧ ನೋಟಿಸ್ ನೀಡಿದ್ದಕ್ಕೆ ರವೀಂದ್ರನಾಥ ವರ್ಗಾವಣೆಯಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜೀನಾಮೆಗೆ ಸಿದ್ದರಾಮಯ್ಯ ಹಾಗೂ ಬಿಜೆಪಿ ಕಾರಣ ಎಂದು ಎಚ್.ಡಿ.ಕುಮಾರ ಸ್ವಾಮಿ ಆರೋಪಿಸಿದ್ದರು.
ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಸ್ಥಾನಕ್ಕೆ ಡಾ.ಪಿ.ರವೀಂದ್ರನಾಥ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದರು. ನಾಗರಿಕ ಹಕ್ಕು ನಿರ್ದೇಶನಾಲಯದ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ ಬೇಸರಗೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ