ನಮ್ಮತ್ರನೂ ಸಾಕಷ್ಟು ಇವೆ:IT ಕೈಗೆ ಸಿಕ್ಕ ಡೈರಿ ಕುರಿತು ಡಿಕೆಶಿ ಕಿಡಿ!
Team Udayavani, Jun 20, 2018, 12:08 PM IST
ಬೆಂಗಳೂರು: ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ ಕುರಿತು ವೈದ್ಯಕೀಯ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರ ಆಶ್ಚರ್ಯ ವ್ಯಕ್ತ ಪಡಿಸಿ ಕಿಡಿ ಕಾರಿದ್ದಾರೆ.
ಐಟಿ ದಾಳಿ ನಡೆದ ವೇಳೆ ಅಘೋಷಿತ ಆಸ್ತಿ ಪತ್ತೆಯಾದ ಕುರಿತು ತನಿಖೆ ವೇಳೆ ಡಿಕೆಶಿ ಅವರ ಆಪ್ತ ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್ ಅವರ ಬಳಿ ಡೈರಿಯೊಂದು ಪತ್ತೆಯಾಗಿದ್ದು, ಅದರಲ್ಲಿ ಹಲವು ಆಕ್ರಮ ಹಣಕಾಸು ವ್ಯವಹಾರಗಳ ವಿಚಾರಗಳನ್ನು ಐಟಿ ಪತ್ತೆ ಹಚ್ಚಿರುವ ಕುರಿತು ವರದಿಯಾಗಿದೆ. ಡೈರಿಯಲ್ಲಿ ಹಲವು ಕೋಡ್ ವರ್ಡ್ಗಳು ಮತ್ತು ಯಾರ್ಯಾರಿಗೆ ಹಣ ಸಂದಾಯವಾಗಿದೆ ಎನ್ನುವ ಕುರಿತೂ ವಿವರಗಳಿವೆ ಎನ್ನಲಾಗಿದೆ.
ಈ ಕುರಿತು ಬುಧವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಡಿ.ಕೆ.ಶಿವಕುಮಾರ್ ‘ಡೈರಿಗಳ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಬೇಕಾದಷ್ಟು ಕಾನೂನುಗಳು ಬಂದಿವೆ. ನಮ್ಮತ್ರನೂ ಡೈರಿಗಳು ಇವೆ. ನನಗೆ ಆಶ್ಚರ್ಯ ಆಗುತ್ತಿದೆ. ನಾನು ಅಂತಹ ತಪ್ಪುಗಳನ್ನು ಮಾಡಿಲ್ಲ’ಎಂದರು.
‘ಅವರು ಎಲ್ಲವನ್ನೂ ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ. ನೀವೂ (ಮಾಧ್ಯಮಗಳು) ಯಾವಾಗ ಜೈಲೋ , ಯಾವಾಗ ಬೇಲೋ ಎಂದು ವರದಿ ಮಾಡುತ್ತಿದ್ದೀರಿ ನಿಮಗೆ ಸಂತೋಷ ಬಂದಂತೆ ಮಾಡಿ’ ಎಂದು ಕಿಡಿ ಕಾರಿದರು.
‘ದೇಶ ಇದೆ,ನ್ಯಾಯಾಲಯ, ಕಾನೂನು,ಸಂವಿಧಾನ ಇದೆ ಎಲ್ಲದಕ್ಕೂ ನಾನು ಗೌರವ ಕೊಡುತ್ತೇನೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದನ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ’ ಎಂದರು.
‘ನಮ್ಮತ್ರವೂ ಹಲವು ಡೈರಿಗಳಿವೆ. ನನಗೆ, ನನ್ನ ಸಹೋದರ,ತಾಯಿಗೆ ಎಲ್ಲರಿಗೂ ನೊಟೀಸ್ಗಳನ್ನು ನೀಡಲಾಗುತ್ತಿದೆ. ನಾನೊಬ್ಬನೆ ಇರುವುದೆ? ಬೇರೆಯವರು ಇಲ್ಲವೆ?. ನನ್ನಷ್ಟು ಕಿರುಕುಳ ಯಾರಿಗೂ ನೀಡಿಲ್ಲ. ಬಹಳಷ್ಟು ಹೆಸರು ಕೇಳಿ ಬರುತ್ತವೆ, ನಮ್ಮ ಪಕ್ಷದ ಹೆಸರೂ ಬಂದಿದೆ. ನಾನು ಕೊನೆವರೆಗೆ ಕಾದು ನೋಡುತ್ತೇನೆ. ನನಗೆ ಎಲ್ಲಾ ಗೊತ್ತಿದೆ, ಅದರ ಮರ್ಮ ಎನೆಂದು ಕೊನೆಗೆ ಹೇಳುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ