ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ: ಸಚಿವ ಕೆ.ಜೆ.ಜಾರ್ಜ್
Team Udayavani, Jul 30, 2023, 4:33 PM IST
ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ,ಅವರ ವಿಚಾರದಲ್ಲಿ ಎಲ್ಲರೂ ಒಳ್ಳೆಯದ್ದನ್ನೇ ಮಾತನಾಡಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಉಮನ್ ಚಾಂಡಿಯವರು ನಿಧನ ಹೊಂದಿದ ಕಾರಣದಿಂದ, ರಾಹುಲ್ ಗಾಂಧಿ ಅವರು ಬರಲು ಆಗದ ಕಾರಣ ಸಭೆ ಮುಂದೆ ಹೋಗಿದೆ. ಕೆಲ ಸಚಿವರಿಗೆ ಬೇಜಾರು ಆಗುತ್ತೆ, ಅಭಿವೃದ್ಧಿ ಕಾರ್ಯವನ್ನ ತಾತ್ಕಲಿಕವಾಗಿ ತಡೆಹಿಡಿದಿದ್ದೇವೆ. ಅದನ್ನ ಮತ್ತೆ ಪ್ರಾರಂಭ ಮಾಡಲು ಆದೇಶ ಕೊಡಲು ಮುಂದಾಗಿದ್ದಾರೆ. ಬಜೆಟ್ನಲ್ಲಿನ ಎಲ್ಲಾ ಅಭಿವೃದ್ಧಿ ಆಗುತ್ತದೆ, ಹೊಸ ಕಾರ್ಯಕ್ರಮಕಷ್ಟೆ ನಿರ್ಬಂಧ ಹಾಕಲಾಗಿದೆ ಎಂದರು.
ಗೃಹಜ್ಯೋತಿ ಜುಲೈನಿಂದಲೇ ಪ್ರಾರಂಭವಾಗಿ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಆಗ ಎಲ್ಲರಿಗೂ ಫ್ರೀ ಸಿಗಲಿದೆ ಎಂದರು.
ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರಿದಿ ಗುಮ್ಮ ಹಿನ್ನೆಲೆಯಲ್ಲಿ, ಯಾವ ಮಂತ್ರಿ ಮಂಡಲದಲ್ಲೂ ಸೆನ್ಸಿಟೀವ್ ಝೋನ್ ಬಗ್ಗೆ ತೀರ್ಮಾನ ಆಗಿರಲಿಲ್ಲ. ಸೆನ್ಸಿಟೀವ್ ಝೋನ್ ಮಾಡಲು ಕ್ಯಾಬಿನೆಟ್ ಉಪಸಮಿತಿಗೆ ರಚನೆಗೆ ಅಧಿಕಾರ ಕೊಟ್ಟಿದ್ದೇವೆ. ಸಬ್ ಕಮಿಟಿಯಲ್ಲಿ ಚರ್ಚೆಯಾಗಿ ಕ್ಯಾಬಿನೆಟ್ ನಲ್ಲಿ ತೀರ್ಮಾನವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು