ನನ್ನನ್ನು ಯಾರೂ ಅಪಹರಿಸಿಲ್ಲ; ಅಕ್ರಮ ಬಂಧನದಲ್ಲಿಟ್ಟಿಲ್ಲ
Team Udayavani, Feb 21, 2019, 1:09 AM IST
ಬೆಂಗಳೂರು: “ನನ್ನನ್ನು ಯಾರೂ, ಯಾವತ್ತೂ ಅಪಹರಣ ಮಾಡಿಲ್ಲ ಹಾಗೂ ಯಾರೂ ಅಕ್ರಮ ಬಂಧನದಲ್ಲಿ ಇರಿಸಿಲ್ಲ’ ಎಂದು ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವ ಅಥಣಿ ಶಾಸಕ ಮಹೇಶ್ ಕುಮಠಳ್ಳಿ, ನಾನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಕ್ರಮ ಬಂಧನಲ್ಲಿದ್ದೆ ಎನ್ನುವುದು ಸಂಪೂರ್ಣ ಸುಳ್ಳು ಎಂದು ಹೇಳಿಕೊಂಡಿದ್ದಾರೆ.
ಶಾಸಕ ಮಹೇಶ್ ಕುಮಠಳ್ಳಿ ಅವರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಕ್ರಮ
ಬಂಧನದಲ್ಲಿ ಇಟ್ಟುಕೊಂಡಿದ್ದು, ಅವರನ್ನು ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅಥಣಿಯ ವಕೀಲ ಪ್ರಮೋದ ದಯಾನಂದ ಹಿರೇಮನಿ ಎಂಬುವರು ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕೆ.ಎನ್.ಫಣೀಂದ್ರ ಹಾಗೂ ನ್ಯಾ.ಕೆ.ನಟರಾಜನ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಖುದ್ದು ಹಾಜರಿದ್ದರು.ಶಾಸಕರ ಪರ ವಕೀಲ ಡಿ.ಎಸ್.ಜೀವನ್ಕುಮಾರ್ ನ್ಯಾಯಪೀಠಕ್ಕೆ ಶಾಸಕರ ಅಫಿಡವಿಟ್ ಸಲ್ಲಿಸಿದರು. ಇದರಲ್ಲಿ “ಪ್ರಕರಣದಲ್ಲಿ ಅರ್ಜಿದಾರರು ಹೇಳಿರುವಂತೆ ನನ್ನನ್ನು ಯಾರೂ ಬಂಧನದಲ್ಲಿ ಇಟ್ಟಿಲ್ಲ. ಫೆ.13 ಮತ್ತು 14ರಂದು ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡಿದ್ದೇನೆ’ ಎಂದು ಮಹೇಶ್ ಕುಮಠಳ್ಳಿ ಹೇಳಿದ್ದಾರೆ. ಈ ಪ್ರಮಾಣಪತ್ರ ದಾಖಲಿಸಿ ಕೊಂಡ ನ್ಯಾಯಪೀಠ, ಶಾಸಕ ಮಹೇಶ್, ರಮೇಶ್ ಜಾರಕಿಹೊಳಿ ಇವರಿಬ್ಬರಿಗೆ ಸೀಮಿತವಾಗಿ ಅನ್ವಯವಾಗುವಂತೆ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣದ ವಿಚಾರಣೆ ಬಾಕಿ ಇಟ್ಟುಕೊಂಡು ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ