ಈ ಬಾರಿ ರಾಜ್ಯಕ್ಕಿಲ್ಲ ರಾಷ್ಟ್ರಪತಿ ಪದಕ


Team Udayavani, Jan 26, 2019, 1:36 AM IST

8.jpg

ಬೆಂಗಳೂರು: ದೇಶದಲ್ಲೇ ಉತ್ತಮ ಪೊಲೀಸ್‌ ಸೇವೆ ಹೊಂದಿರುವ ಹೆಗ್ಗಳಿಕೆಯ ರಾಜ್ಯ ಪೊಲೀಸ್‌ ಇಲಾಖೆಯ ಯಾವೊಬ್ಬ ಅಧಿಕಾರಿಗೂ ಈ ಬಾರಿ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಭಾಗ್ಯವಿಲ್ಲ. ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಉತ್ಸಾಹ, ಹುಮ್ಮಸ್ಸು, ಗೌರವ ಜೊತೆಗೆ ಸೇವೆ ಗುರುತಿಸಲಾಗಿದೆ ಎಂಬ ಭಾವನೆ ಮೂಡಿಸುವ ಉದ್ದೇಶದಿಂದ ನೀಡಲಾಗುವ ರಾಷ್ಟ್ರಪತಿ ಪದಕ ಕೈ ತಪ್ಪಲು ರಾಜ್ಯದ ಐಪಿಎಸ್‌ ಅಧಿಕಾರಿಗಳ ಒಳಜಗಳ, ಸಮನ್ವಯದ ಕೊರತೆ, ಅಧಿಕಾರಿಗಳ ನಡುವಣ ಕಲಹ ನಿಭಾಯಿಸುವಲ್ಲಿ ಗೃಹ ಇಲಾಖೆ ವಿಫ‌ಲವಾಗಿರುವುದೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸೇವೆಯಲ್ಲಿ ಉತ್ತಮ ಸಾಧನೆ ತೋರಿದರೂ ತಮ್ಮನ್ನು ಪ್ರಶಸ್ತಿ ಪಟ್ಟಿಗೆ ಸೇರಿಸುತ್ತಿಲ್ಲ ಎಂದು ಹಿರಿಯ ಐಪಿಎಸ್‌ ಅಧಿಕಾರಿಯೊಬ್ಬರು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ)ಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣಾ ಹಂತದಲ್ಲಿದ್ದರಿಂದ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಿಂದ ಅರ್ಹ ಅಧಿಕಾರಿ ಗಳು ಹಾಗೂ ಸಿಬ್ಬಂದಿ ಪಟ್ಟಿಯನ್ನು ಗೃಹ ಇಲಾಖೆಗೆ ಕಳುಹಿಸಿಲ್ಲ. ಹೀಗಾಗಿ ಗೃಹ ಇಲಾಖೆ ನಿಗದಿತ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಲ್ಲ. ಹೀಗಾಗಿ, ಯಾರಿಗೂ ಈ ಬಾರಿ ರಾಷ್ಟ್ರಪತಿ ಪದಕ ಸಿಗದಂತಾಗಿದೆ. ಅರ್ಜಿ ಸಲ್ಲಿಸಿದ ಅಧಿಕಾರಿಯ ಮನವೊಲಿಸಿ ಐಪಿಎಸ್‌ ಅಧಿಕಾರಿಗಳ ನಡುವಣ ಒಳಜಗಳವನ್ನು ಮಾತುಕತೆ ಮೂಲಕ ಬಗೆಹರಿಸಿದ್ದರೆ ಹಲವು ಅಧಿಕಾರಿಗಳು ಈ ಬಾರಿ ಪದಕ ಪಡೆದುಕೊಳ್ಳುತ್ತಿದ್ದರು ಎಂದು ಪೊಲೀಸ್‌ ಇಲಾಖೆಯ ಮೂಲಗಳು ತಿಳಿಸಿವೆ.

ಗೃಹ ಇಲಾಖೆ ಹೇಳುವುದೇನು?: ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿದ ಐಪಿಎಸ್‌ ಅ ಧಿಕಾರಿಗಳಿಂದ ಹಿಡಿದು ಕಾನ್ಸ್‌ಟೇಬಲ್‌ವರೆಗೆ ಒಟ್ಟು 33 ಮಂದಿಯ ಹೆಸರನ್ನು ನವೆಂಬರ್‌ ಮೊದಲ ವಾರದಲ್ಲಿ ಸಿದ್ಧಪಡಿಸಿ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಯಿಂದ ಗೃಹ ಇಲಾಖೆಗೆ ರವಾನಿಸಲಾಗಿತ್ತು. ಅಲ್ಲಿಂದ ಕೇಂದ್ರ ಗೃಹ ಇಲಾಖೆಗೆ ರವಾನಿಸುವ ಮೊದಲು ಸಿಎಟಿಯಿಂದ ತಡೆಯಾಜ್ಞೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆಗೆ ರವಾನಿಸಲು ಸಾಧ್ಯ ವಾಗಲಿಲ್ಲ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿವೆ. 2018ರಲ್ಲಿ ಐಪಿಎಸ್‌ ಅಧಿಕಾರಿಗಳು ಸೇರಿ 25 ಸಿಬ್ಬಂದಿಗೆ ಪದಕ ಲಭಿಸಿತ್ತು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.