ರಾಷ್ಟ್ರಪತಿ ಆಡಳಿತ ಬೇಡ: ಪೇಜಾವರ ಶ್ರೀ
Team Udayavani, Jul 20, 2019, 3:00 AM IST
ಗಂಗಾವತಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರಪತಿ ಆಳ್ವಿಕೆ ಹೇರಬಾರದು. ಚುನಾಯಿತ ಸರ್ಕಾರವೇ ಇರಬೇಕು ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ. ಆನೆಗೊಂದಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮೈತ್ರಿ ಸರ್ಕಾರಕ್ಕೆ ಬೆಂಬಲವಿಲ್ಲ ಎಂದು ವಿಧಾನಸೌಧದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.
ಇದನ್ನೇ ಬಳಕೆ ಮಾಡಿಕೊಂಡು ರಾಷ್ಟ್ರಪತಿ ಆಡಳಿತ ಹೇರುವುದರಿಂದ ಪ್ರಜಾಪ್ರಭುತ್ವಕ್ಕೆ ಮಾರಕವಾಗಲಿದೆ. ವಿವಾದ ರಹಿತ ಸರ್ಕಾರ ರಚನೆಯಾಗಬೇಕಾದ ಅಗತ್ಯವಿದೆ. ಆದ್ದರಿಂದ ರಾಜ್ಯದ ಎಲ್ಲ ಪಕ್ಷದ ಮುಖಂಡರು ಈ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಅಗತ್ಯ ಎಂದರು.