ಅತಂತ್ರದ ಪ್ರಶ್ನೆ ಇಲ್ಲ , ಹೊಂದಾಣಿಕೆ ಬೇಕಿಲ್ಲ: ನಳಿನ್‌ ಕುಮಾರ್‌

ಬಿಜೆಪಿಗೆ ಬಹುಮತ ಖಚಿತ

Team Udayavani, Mar 28, 2023, 7:10 AM IST

ಅತಂತ್ರದ ಪ್ರಶ್ನೆ ಇಲ್ಲ , ಹೊಂದಾಣಿಕೆ ಬೇಕಿಲ್ಲ: ನಳಿನ್‌ ಕುಮಾರ್‌

ಬೆಂಗಳೂರು: ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಪರಿಸ್ಥಿತಿ ನಿರ್ಮಾಣ ವಾಗುವ ಪ್ರಶ್ನೆಯೇ ಇಲ್ಲ, ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವೂ ಬಾರದು. ಬಿಜೆಪಿ ಸ್ವತಂತ್ರವಾಗಿ ಸರಕಾರ ರಚಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಉದಯವಾಣಿ’ ಕಚೇರಿಯಲ್ಲಿ ಸೋಮ ವಾರ ನಡೆದ ಸಂವಾದದಲ್ಲಿ ಈ ವಿಚಾರ ತಿಳಿಸಿದ ಅವರು, ತಾವು ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್‌ಗೆ ಗ್ಯಾರಂಟಿ ಯಾಗಿದೆ. ಹೀಗಾಗಿಯೇ “ಗ್ಯಾರಂಟಿ ಕಾರ್ಡ್‌’ ಕೊಟ್ಟು ಚುನಾವಣೆ ಗೆಲ್ಲುವ ಯತ್ನ ನಡೆಸುತ್ತಿದೆ. ಅವರ ಯಾವುದೇ ಘೋಷಣೆಯ ಜಾರಿ ಸಾಧ್ಯವೇ ಇಲ್ಲ. ಇದರಿಂದ ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ಹದೆಗೆಡಲಿದೆ ಎಂದರು.

ಸಂಘಟನಾತ್ಮಕವಾಗಿ ನಾವು ಪ್ರಬಲರಾಗಿದ್ದೇವೆ. ತಳಮಟ್ಟದಲ್ಲಿ ಕಾರ್ಯಕರ್ತರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಒಂದು ಕಾಲದಲ್ಲಿ ನಮಗೂ ಆಡಳಿತ ವಿರೋಧಿ ಅಲೆಯ ಭೀತಿ ಇತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಡಬಲ್‌ ಎಂಜಿನ್‌ ಸರಕಾರದ ಕಾರ್ಯಕ್ರಮಗಳು ಜನರಲ್ಲಿ ವಿಶ್ವಾಸ ಮೂಡಿಸಿವೆ. ಹಳೆ ಮೈಸೂರು ಭಾಗದಲ್ಲೂ ವಿಜಯಸಂಕಲ್ಪ ಯಾತ್ರೆ ಯಶಸ್ವಿಯಾಗಿದೆ. ದಾವಣಗೆರೆಯಲ್ಲಿ ನಡೆದ ಮಹಾಸಂಗಮ ಅಪೂರ್ವ ಯಶಸ್ಸು ಕಂಡಿದೆ.

ಈ ಎಲ್ಲ ಕಾರಣದಿಂದ ನಾವು ಮರಳಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂಬ ತುಂಬು ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್‌ಗೆಕೆ ಆತಂಕ?
ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಜಾರಿಗೆ ತಂದಿರುವ ಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಜನರ ಬಾಯಲ್ಲಿ ಹರಿದಾಡು ತ್ತಿವೆ. ಯಡಿಯೂರಪ್ಪನವರು 2 ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಕೊಟ್ಟ ಯೋಜನೆಗಳನ್ನು ಜನ ಈಗಲೂ ಸ್ಮರಿಸುತ್ತಿದ್ದಾರೆ. ನಿಮಗೆ ತಿಳಿದಿರಲಿ, ನಾವು ಕಳೆದೊಂದು ವರ್ಷದಿಂದ ಚುನಾವಣೆಯ ಅಖಾಡದಲ್ಲಿ ಸಿದ್ಧತೆ ನಡೆಸುತ್ತಿದ್ದೇವೆ. ಪ್ರಧಾನಿ ಮೋದಿಯವರು ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಬಂದರೆ ಕಾಂಗ್ರೆಸ್‌ನವರಿಗೇಕೆ ಆತಂಕ? ಕಾಂಗ್ರೆಸ್‌ ನವರು ಗಾಂಧಿ ಕುಟುಂಬದವರನ್ನು ಪ್ರಚಾರಕ್ಕೆ ಕರೆಯು ತ್ತಿಲ್ಲವೇ? ಹಾಗಾದರೆ ರಾಹುಲ್‌ ಗಾಂಧಿ ಏಕೆ ಬೆಳಗಾವಿಗೆ ಬಂದಿದ್ದರು ಎಂದು ಪ್ರಶ್ನಿಸಿದರು.

ಶಿಕಾರಿಪುರ ಘಟನೆ ರಾಜಕೀಯ ಪ್ರೇರಿತ
ಶಿಕಾರಿಪುರದಲ್ಲಿ ಬಿಎಸ್‌ವೈ ನಿವಾಸದ ಮೇಲೆ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಘಟನೆ. ಇದಕ್ಕೆ ಕಾಂಗ್ರೆಸ್‌ ನೇರ ಹೊಣೆ ಎಂದು ನಳಿನ್‌ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ಸಮುದಾಯದವರಿಗೆ ನ್ಯಾಯ ಕೊಡಿಸಬೇಕೆಂಬ ಉದ್ದೇಶದಿಂದ ಸಾಕಷ್ಟು ಅಧ್ಯಯನ ನಡೆಸಿ ಮೀಸಲಾತಿ ನೀಡ ಲಾಗಿದೆ. ಇಂಥ ವಿಚಾರಗಳಲ್ಲಿ ನಿರ್ಧಾರ ಕೈಗೊಳ್ಳುವಾಗ ಸಾಕಷ್ಟು ಸಮಯ ಬೇಕಾಗು ತ್ತದೆ. ಈಗ ಯಾಕೆ ಮಾಡಿದಿರಿ ಎಂಬುದು ಮುಖ್ಯವಲ್ಲ. ನಾವು ಈ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದೇವೆ. ಸದಾಶಿವ ಆಯೋಗದ ವರದಿ ಮಂಡನೆ ಯಾಗಿದ್ದರೂ ಕಾಂಗ್ರೆಸ್‌ ಏಕೆ ಇಷ್ಟು ವರ್ಷಗಳ ಕಾಲ ಒಳಮೀಸಲು ನಿರ್ಧಾರ ತೆಗೆದುಕೊಂಡಿರಲಿಲ್ಲ ಎಂದು ಪ್ರಶ್ನಿಸಿದರು. ಶಿಕಾರಿಪುರದಲ್ಲಿ ನಡೆದ ಘಟನೆಗೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿಕೆಯೇ ನೇರ ಕಾರಣ. ಕಾಂಗ್ರೆಸ್‌ ಮುಖಂಡರ ಪ್ರಚೋ ದನೆ  ಯಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.

ಹಳೇ ಮೈಸೂರು ಭಾಗದಲ್ಲಿ ಹೆಚ್ಚಿದೆ ಬಲ
ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಕಳೆದ ವರ್ಷಕ್ಕಿಂತ ಹೆಚ್ಚಿನ ಸಾಧನೆ ಮಾಡಲಿದೆ. ಇಲ್ಲಿ ಪಕ್ಷದ ಬಲ ಇನ್ನಷ್ಟು ಹೆಚ್ಚಲಿದೆ ಎಂದು ನಳಿನ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕರಾದ ಅಮಿತ್‌ ಶಾ ಹಲವು ಬಾರಿ ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸುವುದಕ್ಕೆ ಸೂಚನೆ ನೀಡಿದ್ದರು. ಅದರಂತೆ ನಾವು ಸಾಕಷ್ಟು ಪ್ರಯತ್ನ ನಡೆಸಿದ್ದೇವೆ ಎಂದರು.

ಈ ಭಾಗದಲ್ಲಿ ನಮ್ಮ ಗುರಿ ದೊಡ್ಡದು. ಈ ಬಾರಿ ಗುರಿ ತಲುಪದೇ ಇದ್ದರೂ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗಳಿಸುತ್ತೇವೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಅಭಿಪ್ರಾಯಪಟ್ಟರು.

ಮಾದರಿ ನಿರ್ಧಾರವಾಗುವುದು
ಸಂಸದೀಯ ಮಂಡಳಿಯಲ್ಲಿ
ರಾಜ್ಯದಲ್ಲಿ ಟಿಕೆಟ್‌ ಹಂಚಿಕೆಗೆ ಯಾವ ಮಾದರಿ ಅನುಸರಿಸುತ್ತೇವೆ ಎಂಬುದು ನಿರ್ಧಾರವಾಗುವುದು ಸಂಸದೀಯ ಮಂಡಳಿ ಸಭೆಯಲ್ಲೇ ಹೊರತು ಇಲ್ಲಲ್ಲ ಎಂದು ನಳಿನ್‌ಕುಮಾರ್‌ ಕಟೀಲು ಸ್ಪಷ್ಟಪಡಿಸಿದ್ದಾರೆ. ಈ ಕ್ಷಣಕ್ಕೆ ಹೇಳುವುದಾದರೆ ನಮ್ಮ ಮುಂದೆ ಯಾವುದೇ ಮಾದರಿಯ ಬಗ್ಗೆ ಚರ್ಚೆ ಆಗುತ್ತಿಲ್ಲ. ಅದೆಲ್ಲವೂ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರವಾಗುವ ಸಂಗತಿಗಳು. ವಯಸ್ಸು, ಅವಧಿ, ಹೊಸಮುಖಗಳು ಇತ್ಯಾದಿ ವಿಚಾರಗಳ ಬಗ್ಗೆ ಅಲ್ಲಿಯೇ ನಿರ್ಧಾರವಾಗುತ್ತದೆ. ಗುಜರಾತ್‌ ಮಾದರಿ ಬಗ್ಗೆ ಮಾಧ್ಯಮಗಳಲ್ಲಿ ಬಹಳಷ್ಟು ಚರ್ಚೆಯಾಗುತ್ತಿದೆ. ಆದರೆ ಚುನಾವಣೆ ಅಧಿಸೂಚನೆ ಪ್ರಕಟವಾದ ಬಳಿಕವೇ ನಮ್ಮ ಪಕ್ಷದಲ್ಲಿ ಟಿಕೆಟ್‌ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಎಲ್ಲ ರಾಜ್ಯಗಳಲ್ಲೂ ನಾವು ಇದೇ ನಿಯಮ ಪಾಲನೆ ಮಾಡಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.