4 ವರ್ಷದಲ್ಲಿ ಒಂದೂ ಶಾಲೆ ಮುಚ್ಚಿಲ್ಲ: ತನ್ವೀರ್ ಸೇಠ್
Team Udayavani, Nov 25, 2017, 7:08 AM IST
ವಿಧಾನಪರಿಷತ್ತು: “ಈ ವರ್ಷ 10ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳ ಸಂಖ್ಯೆ 3,125ಕ್ಕೆ ಏರಿಕೆಯಾಗಿರುವುದು
ಆತಂಕಕಾರಿ, ಇಷ್ಟಾದರೂ ಒಂದೂ ಶಾಲೆ ಮುಚ್ಚಿಲ್ಲ. ಒಂದು ಮಗುವಿದ್ದರೂ ಶಾಲೆ ನಡೆಸುವಂತೆ ಸೂಚಿಸಲಾಗಿದೆ’ ಎಂದು
ಸಚಿವ ತನ್ವಿರ್ ಸೇಠ್ ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಶುಕ್ರವಾರ ಬಿಜೆಪಿಯ ತಾರಾ ಅನುರಾಧ ಪ್ರಶ್ನೆಗೆ ಉತ್ತರಿಸಿದ ಅವರು, “ಕಳೆದ ವರ್ಷ 2,164 ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 10ಕ್ಕಿಂತಲೂ ಕಡಿಮೆಯಿತ್ತು. ಈ ವರ್ಷ ಅದು 3,125ಕ್ಕೆ ಏರಿಕೆಯಾಗಿದೆ. ಮಕ್ಕಳ ನೋಂದಣಿ ಕಡಿಮೆಗೆ ಆರ್ಟಿಇ ಮತ್ತಿತರೆ ಅಂಶಗಳು ಕಾರಣವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ 21 ಶಿಫಾರಸುಗಳನ್ನು ಮಾಡಿದ್ದು, ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದರು.
ಜ್ಞಾನ ಆಯೋಗ ಮತ್ತಿತರೆ ಸಂಸ್ಥೆಗಳಿಂದಲೂ ಮಕ್ಕಳನ್ನು ಆಕರ್ಷಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಲಹೆ
ಪಡೆಯಲಾಗುತ್ತಿದೆ. ಕೆಲ ಸ್ವಯಂ ಸೇವಾ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಂಡು ಮಕ್ಕಳಲ್ಲಿ ಕಲಿಕಾ ಸಾಮರ್ಥಯ ಹೆಚ್ಚಿಸಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ನಾಲ್ಕು ವರ್ಷದಲ್ಲಿ ಬಾಗಲಕೋಟೆ, ಬೆಂಗಳೂರು ಉತ್ತರ ಜಿಲ್ಲೆಯಲ್ಲಿ 2 ಶಾಲೆಗಳನ್ನು ನಿರ್ದಿಷ್ಟ ಕಾರಣಕ್ಕೆ ವಿಲೀನಗೊಳಿಸಿರುವುದು ಹೊರತುಪಡಿಸಿ ಮಕ್ಕಳ ಸಂಖ್ಯೆ ಕಡಿಮೆ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಶಾಲೆ ಮುಚ್ಚಿಲ್ಲ. ಬಾಡಿಗೆ ಕಟ್ಟಡದಲ್ಲಿದ್ದ ಶಾಲೆಗಳನ್ನು ಸರ್ಕಾರಿ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಹಾಗೆಯೇ ಆರ್ಎಂಎಸ್ಎ ಅಡಿ ಹೊಸದಾಗಿ ನಿರ್ಮಾಣಗೊಂಡ ಶಾಲೆಗಳಿಗೆ ಸ್ಥಳಾಂತರಗೊಂಡಿರಬಹುದು ಎಂದು ಹೇಳಿದರು.
ಇದರ ಜತೆಗೆ ರಾಜ್ಯದಲ್ಲಿ ಕೇಂದ್ರಿಕೃತ (ಕ್ಲಸ್ಟರ್ ಆಧಾರಿತ)ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಮಕ್ಕಳನ್ನು ಶಾಲೆಗಳತ್ತ ಸೆಳೆಯಲು ವಿವಿಧ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಸದನಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ