ನಾಳೆ ‘ಭಾನುವಾರದ ಲಾಕ್ ಡೌನ್’ ಇರುವುದಿಲ್ಲ; ಯಥಾಸ್ಥಿತಿ ಮುಂದುವರಿಕೆ
Team Udayavani, Jun 6, 2020, 2:59 PM IST
ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ಭಾನುವಾರದ ಲಾಕ್ ಡೌನ್’ ನಾಳೆ ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸದ ಬಳಿಕ ಕೋವಿಡ್-19 ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ಭಾನುವಾರದ ಲಾಕ್ ಡೌನ್ ಗೆ ರಾಜ್ಯ ಸರಕಾರ ಆದೇಶಿಸಿತ್ತು. ನಂತರ ಮೊದಲ ಭಾನುವಾರ ಅಂದರೆ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.
ಆದರೆ ಅದರ ನಂತರದ ಭಾನುವಾರ ಅಂದರೆ ( ಮೇ 31) ರಂದು ಈ ಲಾಕ್ ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ ಎನ್ನಲಾಗಿದೆ.
ನಾಳೆ (ಜೂ.7) ರವಿವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ