ಪೋಷಕರ ಆಕ್ರೋಶ: ಆನ್ ಲೈನ್ ಕ್ಲಾಸ್ ಬಂದ್ ಗೆ ಸಿಗದ ಬೆಂಬಲ


Team Udayavani, Dec 21, 2020, 12:31 PM IST

ಆನ್ ಲೈನ್ ಕ್ಲಾಸ್ ಬಂದ್ ಗೆ ಸಿಗದ ಬೆಂಬಲ: ಪೋಷಕರ ಆಕ್ರೋಶ

ಬೆಂಗಳೂರು: ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಆನ್ ಲೈನ್ ತರಗತಿ ಬಂದ್ ಗೆ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ (ರುಪ್ಸಾ)ಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹಾಗೂ ಪಾಲಕ, ಪೋಷಕರಿಂದ ಯಾವುದೇ ಬೆಂಬಲ ಸಿಕ್ಕಿಲ್ಲ.

ರುಪ್ಸಾ ಅಧೀನದ ಕೆಲವೇ‌ ಕೆಲವು ಶಾಲೆಗಳು ಮಾತ್ರ ಆನ್ ಲೈನ್ ತರಗತಿ ಬಂದ್ ಮಾಡಿವೆ. ಅದಕ್ಕೂ ಪಾಲಕರು ಆಕ್ರೋಶ ಹೊರ ಹಾಕಿದ್ದಾರೆ. ಶಾಲಾ ತರಗತಿ ನಡೆಯುತ್ತಿಲ್ಲ. ಅಲ್ಲದೆ, ಆನ್ ಲೈನ್ ತರಗತಿ ಕೂಡ ಸೀಮಿತವಾಗಿ ನಡೆಯುತ್ತಿರುವುದು, ಪರೀಕ್ಷೆಗಳು ಸಮೀಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಶಾಲೆಗಳು ಆನ್ ಲೈನ್ ಕ್ಲಾಸ್ ಬಂದ್ ಮಾಡಿರುವುದು ಸರಿಯಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆನ್ ಲೈನ್ ತರಗತಿ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಶಾಲೆ ನವೀಕರಣ ಮಾನದಂಡ ಸಡಿಲ ಮಾಡಬೇಕು, ಖಾಸಗಿ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಬ್ಯಾಂಕ್ ಸಾಲದ ಇಎಂಐಗೆ ಒಂದು ವರ್ಷ ವಿಸ್ತರಣೆ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.21ರಿಂದಲೇ ಆನ್ ಲೈನ್ ಕ್ಲಾಸ್ ಬಂದ್ ಗೆ ಕರೆ ನೀಡಿತ್ತು. ಅಲ್ಲದೆ, ಜ.6ರೊಳಗೆ ಸಮಸ್ಯೆಗೆ ಪರಿಹಾರ ನೀಡದೇ ಇದ್ದರೆ ಬೃಹತ್ ಪ್ರತಿಭಟನೆಯ ಎಚ್ಚರಿಕೆಯನ್ನು ರುಪ್ಸಾ ನೀಡಿತ್ತು.

ಇದನ್ನೂ ಓದಿ:ಪೋಷಕರೇ ನಿಮ್ಮ ಮಕ್ಕಳ ಬಗ್ಗೆ ಇರಲಿ ಎಚ್ಚರ! : ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳು ಸಕ್ರಿಯ

ಆದರೆ, ವಿದ್ಯಾರ್ಥಿಗಳ ಕಲಿಕೆಗೆ ಸಮಸ್ಯೆ ಉಂಟುಮಾಡುತ್ತಿರುವ ರುಪ್ಸಾದ ಈ ನಿರ್ಧಾರಕ್ಕೆ ಪಾಲಕ, ಪೋಷಕರು, ವಿವಿಧ ಖಾಸಗಿ ಶಾಲಾಡಳಿತ ಮಂಡಳಿಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಇನ್ನು ಕರ್ನಾಟಕ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್), ಕರ್ನಾಟಕ ಅನುದಾನ ರಹಿತ ಶಾಲಾಡಳಿತ ಮಂಡಳಿಗಳ ಸಂಘ (ಕುಸ್ಮಾ), ಕರ್ನಾಟಕ ಸ್ವತಂತ್ರ ಸಿಬಿಎಸ್ಇ ಆಡಳಿತ ಮಂಡಳಿಗಳ ಸಂಘ ಸೇರಿದಂತೆ ವಿವಿಧ ಖಾಸಗಿ ಶಾಲಾಡಳಿತ ಮಂಡಳಿಗಳು ಆನ್ ಲೈನ್ ತರಗತಿಗಳನ್ನು ಎಂದಿನಂತೆ ನಡೆಸುತ್ತಿವೆ. ಅಲ್ಲದೇ, ವಿದ್ಯಾರ್ಥಿಗಳ ಪಾಲಕ ಪೋಷಕರಿಗೆ ಸಂದೇಶ ರವಾನಿಸಿ, ಯಾವುದೇ ರೀತಿಯ ಬಂದ್ ಇರುವುದಿಲ್ಲ. ಎಂದಿನಂತೆ ಮಕ್ಕಳನ್ನು ಆನ್ಲೈನ್ ತರಗತಿಗೆ ಸಜ್ಜುಗೊಳಿಸುವಂತೆ ಮನವಿ ಮಾಡಿದೆ. ಅದರತೆ  ರಾಜ್ಯದ ಬಹುತೇಕ ಖಾಸಗಿ ಶಾಲಾಡಳಿತ ಮಂಡಳಿಯಲ್ಲಿ ಆನ್ ಲೈನ್ ತರಗತಿ ನಡೆಯುತ್ತಿದೆ.

ನಮ್ಮ ಬೇಡಿಕೆಗಾಗಿ ಈಗಾಗಲೇ ಹೋರಾಟ ಮಾಡಿದ್ದೇವೆ. ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೇವೆ. ಸರ್ಕಾರದಿಂದ ಸಮಸ್ಯೆ ಬಗೆಹರಿಸುವ ಭರವಸೆಯೂ ಸಿಕ್ಕಿದೆ. ವಿದ್ಯಾರ್ಥಿಗಳಿಗೆ ಸಮಸ್ಯೆಯಿಲ್ಲದೇ ಹೋರಾಟ ಮಾಡುತ್ತೇವೆ. ಆನ್ ಲೈನ್ ಹಾಗೂ ಆಫ್‌ಲೈನ್ ತರಗತಿಗಳು ಮಕ್ಕಳ ಹಿತದೃಷ್ಟಿಯಿಂದ ನಡೆಸುತ್ತಿದ್ದೇವೆ. ಶಾಲಾರಂಭದಿಂದ ಇಡೀ ಶಿಕ್ಷಣ ವ್ಯವಸ್ಥೆಗೆ ಧೈರ್ಯ ಬರಲಿದೆ. ಯಾವುದೇ ಬಂದ್ ಇಲ್ಲ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ‌.ಶಶಿಕುಮಾರ್ ತಿಳಿಸಿದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.