“ಅಮಾನತಿಗೊಳಗಾದ ಅಧಿಕಾರಿಯನ್ನು ಅದೇ ಹುದ್ದೆಯಲ್ಲಿ ಮುಂದುವರಿಸುವಂತಿಲ್ಲ’
Team Udayavani, Nov 26, 2020, 10:56 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಅಧಿಕಾರಿಯೋರ್ವ ಅಮಾನತುಗೊಂಡ ಆರು ತಿಂಗಳೊಳಗೆ ಪ್ರಕರಣ ಇತ್ಯರ್ಥವಾದರೂ, ಆ ಅಧಿಕಾರಿಯನ್ನು ಹಿಂದಿದ್ದ ಹುದ್ದೆಯಲ್ಲಿ ಮುಂದುವರಿಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ.
ನೌಕರನು ದೀರ್ಘಾವಧಿವರೆಗೆ ಅಮಾನತ್ತಿನಲ್ಲಿರುವುದರಿಂದ ಸರಕಾರಕ್ಕೆ ಅನಗತ್ಯ ಆರ್ಥಿಕ ಹೊರೆ ಉಂಟಾಗುತ್ತಿದೆ. ಅದನ್ನು ತಪ್ಪಿಸಲು ಅಮಾನತುಗೊಂಡ ಆರು ತಿಂಗಳೊಳಗೆ ಇಲಾಖಾ ವಿಚಾರಣೆ ಆರಂಭಿಸದಿದ್ದಲ್ಲಿ ಅಥವಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗದಿದ್ದಲ್ಲಿ ಅಂತಹ ಅಧಿಕಾರಿಯನ್ನು ರದ್ದುಗೊಳಿಸುವ ಅಥವಾ ಮುಂದುವರಿಸುವ ಬಗ್ಗೆ ಸಕ್ಷಮ ಪ್ರಾಧಿಕಾರ ತೀರ್ಮಾನ ತೆಗೆದುಕೊಳ್ಳಬೇಕು. ಯಾವುದೇ ತೀರ್ಮಾನ ತೆಗೆದುಕೊಳ್ಳದಿದ್ದರೆ, ಅವರ ಅಮಾನತು ರದ್ದಾಗಿದೆ ಎಂದೇ ಭಾವಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಮಾನತುಗೊಂಡ ಅಧಿಕಾರಿ ವಿರುದ್ಧ 6 ತಿಂಗಳೊಳಗೆ ಯಾವುದೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗದೆ, ಅಮಾನತು ಅವಧಿ ಮುಗಿದ ಬಳಿಕವೂ ಕಚೇರಿಗೆ ಹಾಜರಾಗದಿದ್ದರೆ, ಆ ಅವಧಿಯನ್ನು ರಜೆ ಎಂದು ಪರಿಗಣಿಸಬೇಕು. ಭ್ರಷ್ಟಾಚಾರದ ಸಂದರ್ಭದಲ್ಲಿ ತನಿಖಾ ಸಂಸ್ಥೆಯು ತಪ್ಪಿತಸ್ಥ ಅಧಿಕಾರಿ ವಿರುದ್ಧ ಅಮಾನತು ಮುಂದುವರಿಸುವಂತೆ ಮನವಿ ಮಾಡಿದರೆ ಸಕ್ಷಮ ಪ್ರಾಧಿಕಾರ ಪರಿಗಣಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ