ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇಲ್ಲ: ಶೆಟ್ಟರ್
Team Udayavani, Oct 6, 2019, 3:03 AM IST
ಧಾರವಾಡ: ಚಳಿಗಾಲದ ಅಧಿವೇಶನವನ್ನು ಬೆಳಗಾವಿ ಬದಲಾಗಿ ಬೆಂಗಳೂರಿನಲ್ಲೇ ನಡೆಸಲಾಗುವುದು ಎಂದು ಸಚಿವ ಜಗದೀಶ ಶೆಟ್ಟರ್ ಪುನರುಚ್ಚರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ನೆರೆ ಹಾವಳಿಯ ಪರಿಹಾರ ಕಾರ್ಯ ಸಾಗಿದ್ದು, ಜಿಲ್ಲಾಡಳಿತಗಳು ಸಂಪೂರ್ಣ ಈ ಕಾರ್ಯದಲ್ಲಿ ತೊಡಗಿವೆ. ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ಮಗ್ನವಾಗಿರುವ ಕಾರಣ ಈ ಸಲ ಚಳಿಗಾಲದ ಅಧಿವೇಶವನ್ನು ಬೆಳಗಾವಿಯಲ್ಲಿ ನಡೆಸಲಾಗದು ಎಂದರು.
ಉಕ ಭಾಗದ ಸಮಸ್ಯೆ ಬಗೆಹರಿಸಲು ಬೆಳಗಾವಿಯಲ್ಲೇ ಅಧಿವೇಶನ ನಡೆಸಬೇಕೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶೆಟ್ಟರ, ಸಿದ್ದರಾಮಯ್ಯ ಅವರು ತಾವು ಸಿಎಂ ಆಗಿದ್ದ ಐದು ವರ್ಷಗಳ ಅವಧಿಯಲ್ಲಿ ಎಷ್ಟು ಬಾರಿ ಬೆಳಗಾವಿಯಲ್ಲಿ ಅ ಧಿವೇಶನ ಮಾಡಿದ್ದಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟಾಂಗ್ ನೀಡಿದರು.